70th Kannada Rajyotsava: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಉತ್ತರ-ದಕ್ಷಿಣ ತಾರತಮ್ಯ ನೀತಿ: ಬಿಜೆಪಿ
ಬೆಂಗಳೂರು, ನವೆಂಬರ್ 01: ಈ ಬಾರಿಯು 70ನೇ ಕನ್ನಡ ರಾಜ್ಯೋತ್ಸವದಲ್ಲಿ (70th Kannada Rajyotsava) ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ರಾಜ್ಯ ಸರ್ಕಾದ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಉತ್ತರ ಕರ್ನಾಟಕದ ಸಾಧಕರನ್ನು ನಿರ್ಲಕ್ಷಿಸಿದ್ದು, ಮೈಸೂರಿಗೆ ಭರಪೂರ ಒದಗಿಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಬಿಜೆಪಿ ಕರ್ನಾಟಕ ಎಕ್ಸ್ ಪೋಸ್ಟ್ ಮೂಲಕ ಸರ್ಕಾರದ ವಿರುದ್ಧ ಕೆಂಡ ಕಾರಿದೆ.
ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಧಾರವಾಡಕ್ಕೆ ಶೂನ್ಯ ನೀಡಿರುವ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ ಎಂದು ಬಿಜೆಪಿ ಮುಖಂಡ ಪಿಎಚ್ ನೀಲಕೇರಿ ದೂರಿದ್ದಾರೆ. ಸರ್ಕಾರ ಪ್ರಶಸ್ತಿ ಆಯ್ಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಕೆಲವು ಜಿಲ್ಲೆಗಳಿಗೆ ಮಾತ್ರವೇ ಆದ್ಯತೆ ನೀಡಿದೆ ಎಂದು ಆರೋಪಿಸಿದರು. ಇದರ ಬೆನ್ನಲ್ಲೆ ಬಿಜೆಪಿ ಪಕ್ಷ ಭಾನುವಾರ ತಾರತಮ್ಯ ಕುರಿತು ಕಿರಿ ಕಾರಿದೆ.

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡುವಲ್ಲಿ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಲಾಗಿದೆ ಎಂಬ ಗಂಭೀರವಾದ ಅಪವಾದ ಕೇಳಿ ಬರುತ್ತಿದೆ. ಆ ಭಾಗದಲ್ಲೂ ಅನೇಕ ಅರ್ಹರಿದ್ದರೂ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡದೆ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ. ಪ್ರಶಸ್ತಿ ಆಯ್ಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ, ತಮ್ಮ ಆಸ್ಥಾನದ ಕೆಲ ಬುದ್ಧಿಜೀವಿಗಳಿಗೂ ಆದ್ಯತೆ ನೀಡಿದೆ. ಸಹ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಸಾಧಕರನ್ನು ಗುರುತಿಸುವ ಅವಕಾಶವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ಬಿಜೆಪಿ ದೂರಿದೆ.
ಸರ್ಕಾರವು ಪ್ರಶಸ್ತಿ ವಿತರಣೆಯಲ್ಲಿ ಓಲೈಕೆ ರಾಜಕಾರಣ, ಪ್ರಾದೇಶಿಕ ಅಸಮಾನತೆಯನ್ನು ತೊಡೆದು ಹಾಕಬೇಕು. ಪ್ರಧಾನಿ ನರೇಂದ್ರ ಮೋದಿಯವರು ಅವರ ನೇತೃತ್ವದ ಕೇಂದ್ರ ಸರ್ಕಾರದಂತೆ ಎಲೆಮರೆಯ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಬಿಜೆಪಿ ನಾಯಕರು ಪರೋಕ್ಷವಾಗಿ ತಿಳಿಸಿದ್ದಾರೆ.
ಸರ್ಕಾರದಿಂದ ಸ್ಪಷ್ಟನೆಗೆ ಆಗ್ರಹ
ಮುಖಂಡ ಪಿಎಚ್ ನೀಲಕೇರಿ ಅವರು, ಜಿಲ್ಲಾವಾರು ತಾರತಮ್ಯ ಮಾಡಿದ್ದಕ್ಕಾಗಿ ಸ್ಪಷ್ಟನೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಮಾಣಿಕರಿಗೆ ಅನ್ಯಾಯ ಮಾಡಿದ್ದಾರೆ. ತಮ್ಮ ಆಪ್ತರಿಗೆ, ಬೇಕಾದವರಿಗೆ ಪ್ರಶಸ್ತಿ ಘೋಷಿಸಿದ್ದಾರೆ. ಧಾರವಾಡದಲ್ಲಿ ಸಾಹಿತ್ಯ, ಸಂಗೀತ, ಇತರ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಗದಗ ಜಿಲ್ಲೆಗೂ ಪ್ರಶಸ್ತಿ ಸಿಕ್ಕಿಲ್ಲ. ಇದೇ ರೀತಿ ಕೆಲವು ಜಿಲ್ಲೆಗಳಿಗೆ ಆಗಿದೆ. ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಹಲವು ಗೊಂದಗಳಿಂದ ಕೂಡಿದೆ ಎಂದು ಅವರು ದೂರಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರಾಗಲಿ ಸ್ಪಷ್ಟನೆ ನೀಡುತ್ತಾರಾ? ಎಂದು ಕಾದು ನೋಡಬೇಕಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications