ರಾಜ್ಯದ ವಿವಿಧ ಅಂಗವಾಡಿಗಳಿಗೆ ಕಳಪೆ ಮೊಟ್ಟೆ ವಿತರಣೆ: ಸರ್ಕಾರದ ವಿರುದ್ಧ ಹೆಚ್ಚಾದ ಆಕ್ರೋಶ
ಬೆಂಗಳೂರು, ಜುಲೈ 13: ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ವಿತರಿಸಲು ರಾಜ್ಯದ ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿರುವ ಮೊಟ್ಟೆಗಳು ಕಳಪೆಯಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪೌಷ್ಠಕತೆಗೆ ಸಹಾಯವಾಗಬೇಕಾದ ಮೊಟ್ಟೆ ಇದೀಗ ಗರ್ಭಿಣಿಯರ ಆರೋಗ್ಯಕ್ಕೆ ಕುತ್ತು ತರುತ್ತಿದೆ.
ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಮಕ್ಕಳು, ಗರ್ಭಿಣಿಯರಿಗೆ ಮೊಟ್ಟೆ ಪೂರೈಕೆಯು ಒಂದಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿರುವ ಮೊಟ್ಟೆಗಳು ಕೆಟ್ಟು ಹೋಗಿವೆ. ಬೇಯಿಸಿದ ನಂತರ ಸಿಪ್ಪೆತೆಗೆದು ನೋಡಿದರೆ, ಮೊಟ್ಟೆ ಕಪ್ಪಾಗಿದ್ದು ಗೊತ್ತಾಗಿರುವುದು, ಆರೋಗ್ಯ ಹಾನಿಯ ಮುನ್ಸೂಚನೆ ಎಂಬಂತಾಗಿದೆ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿದೆ. ವಿವಿಧ ಯೋಜನೆಗಳಂತೆ ಮೊಟ್ಟೆ ವಿತರಣೆಯಲ್ಲಿಯೂ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆಯೇ ಎಂಬ ಅನುಮಾನ ಮೂಡಿದೆ.

ಈ ಕುರಿತು ಗುರುವಾರ ಕರ್ನಾಟಕ ಬಿಜೆಪಿ ಪಕ್ಷ ಕಟುವಾಗಿ ಟ್ವೀಟ್ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ''ಕಳಪೆ ಆಹಾರ ಕೊಡುವುದೂ ಒಂದೇ, ಕೈಯಾರೆ ವಿಷ ಉಣಿಸುವುದೂ ಒಂದೇ. ಅದರಲ್ಲೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕತೆ ಹೆಸರಲ್ಲಿ ವಿಷ ಪೂರಣವು ನಾಗರಿಕ ಸಮಾಜವೇ ತಲೆತಗ್ಗಿಸುವ ಕೆಲಸ ಎಂದು ಸರ್ಕಾರವನ್ನು ಟೀಕಸಿದೆ.
ಮೊಟ್ಟೆ: ಎಟಿಎಂ ಸರ್ಕಾರಕ್ಕೆ ಕಲೆಕ್ಷನ್ ಆದರೆ ಸಾಕು
ಆದರೆ ಸಾಮಾಜಿಕ ಪ್ರಜ್ಞೆಯನ್ನೇ ಮರೆತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಅಮಾನುಷ ಎಟಿಎಂ ಸರ್ಕಾರಕ್ಕೆ (#ATMSarkara) ವಾರದ ಕಲೆಕ್ಷನ್ ಸಂದಾಯವಾದರೆ ಆಯಿತು. ಬೇರೆಲ್ಲದರ ಬಗ್ಗೆ ಚಿಂತೆಯೇ ಇಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ ಮೂಲಕ ಮಕ್ಕಳು ಮತ್ತು ಅಂಗನವಾಡಿಗಳಿಗೆ ಪೂರೈಸುತ್ತಿರುವ ಮೊಟ್ಟೆ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.
ಹಾಸನ, ಕೊಡಗು, ಹಾವೇರಿ ಜಿಲ್ಲೆ ಸೇರಿ ಕೆಲವು ಜಿಲ್ಲೆಗಳ ಅಂಗನವಾಡಿಗಳಿಗೆ ಕೆಟ್ಟ ಮೊಟ್ಟೆಗಳನ್ನು ವಿತರಿಸಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಇದರಿಂದ ಗರ್ಭಿನಿಯರು ಮೊಟ್ಟೆ ಪಡೆಯಲು ಹಿಂದೇಟು ಹಾಕುವಂತಾಗಿದೆ. ಹಾವೇರಿ ಕೆಲವು ಅಂಗನವಾಡಿಗಳಲ್ಲಿ ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡಲಾಗುತ್ತಿರುವ ಮೊಟ್ಟೆಗಳಲ್ಲಿ ಕಳ್ಳಾಟ ನಡೆದಿದೆ ಎಂದು ತಿಳಿದು ಬಂದಿದೆ.

ಇನ್ನೂ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವತ್ತೂರು ಗ್ರಾಮದ ಅಂಗನವಾಡಿಗೂ ಕೊಳೆತ ಮೊಟ್ಟೆ ಪೂರೈಕೆ ಆಗಿದೆ. ಎಲ್ಲೆಲ್ಲಿ ಕಳಪೆ ಮೊಟ್ಟೆ ಪೂರೈಕೆ ಆಗಿವೆಯೋ ಅಲ್ಲೆಲ್ಲ ಬೇಯಿಸಿ ಮೊಟ್ಟೆ ಸಿಪ್ಪೆ ಬಿಡಿಸಿದಾಗ ಮೊಟ್ಟೆ ಕಪ್ಪು ಬಣ್ಣಕ್ಕೆ ತಿರುಗಿದೆ. ಒಳಭಾಗ ಪೂರ್ಣ ಕಪ್ಪಾಗಿದ್ದು, ಕೊಳೆತ ಗಬ್ಬು ವಾಸನೆ ಬರುತ್ತಿದೆ. ಇಂತಹ ಮೊಟ್ಟೆಯನ್ನು ಮಕ್ಕಳು, ಗರ್ಭಿಣಿಯರ ಹೊಟ್ಟೆ ಸೇರಿದಂತೆ ಎದುರಾಗುವ ಅನಾರೋಗ್ಯಕ್ಕೆ ಯಾರ ಹೊಣೆ ಎಂಬ ಪ್ರಶ್ನೆ ಎದ್ದಿದೆ.
ಹಿಂದೆ 5-6 ರೂ. ಪೂರೈಕೆ: ಸದ್ಯ ಹಣ ಬಿಡುಗಡೆಯಾಗಿಲ್ಲ
ಈ ಹಿಂದಿನ ಸರ್ಕಾರ ಒಂದು ಮೊಟ್ಟೆ ಪೂರೈಕೆಗೆ 5-6 ರೂ. ಕೊಡುತ್ತಿತ್ತು. ಸದ್ಯ ಮೊಟ್ಟೆಗಳ ದರದಲ್ಲಿ ಏರಿಕೆ ಆಗಿದ್ದು, ಗುತ್ತಿಗೆದಾರರು ಖರೀದಿಗೆ ಕಷ್ಟಪಡುತ್ತಿದ್ದಾರೆ. ಮೂರು ನಾಲ್ಕು ತಿಂಗಳಾದರೂ ಮೊಟ್ಟೆ ವಿತರಣೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ.
ಗುತ್ತಿಗೆದಾರರು ಸಣ್ಣ ಗಾತ್ರದ ಮತ್ತು ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ಅಂಗನವಾಡಿಗಳಿಗೆ ಪೂರೈಕೆ ಮಾಡುತ್ತಾರೆ. ಅಗತ್ಯ ಬೇಡಿಕೆಯಷ್ಟು ನೀಡುತ್ತಿಲ್ಲ. ಕೊಳೆತ ಮೊಟ್ಟೆಗಳನ್ನು ನಾವು ಬಿಡಾಡುತ್ತೇವೆ. ಹೀಗಾಗಿ ಮೊಟ್ಟೆ ಕೊರತೆ ಇನ್ನಷ್ಟು ಕಾಡುತ್ತದೆ. ಮಕ್ಕಳಿಗೆ ಉತ್ತಮ ಮೊಟ್ಟೆ ಪೂರೈಸಲು ಸಾಧ್ಯವಾಗದ ಸ್ಥಿತಿ ಇದೆ. ಒಂದು ವೇಳೆ ಮನೆಗೆ ಮೊಟ್ಟೆ ಒಯ್ದವರು ಕೆಟ್ಟಿವೆ ಎಂದು ಕಾರ್ಯಕರ್ತೆಯರ ಬಳಿ ಜಗಳಕ್ಕೆ ಬರುತ್ತಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications