Dengue: 'ಸಿದ್ದರಾಮಯ್ಯ ಮೀರಿಸುವಂತೆ ಆರೋಗ್ಯ ಇಲಾಖೆ ನಿದ್ದೆಗೆ ಶರಣಾಗಿದ್ದೇ ಡೆಂಗ್ಯೂ ಹಬ್ಬಲು ಕಾರಣ'
ಬೆಂಗಳೂರು, ಜುಲೈ 02: ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಡೆಂಗ್ಯೂ ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧೆಡೆ ಸಾವುಗಳು ಕೂಡ ಸಂಭವಿಸುತ್ತಿದೆ. ಇನ್ನು ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1902 ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ತಕ್ಷಣ ಎಚ್ಚರವಹಿಸದ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕಿಡಿಕಾರಿದೆ. ಡೆಂಗ್ಯೂ ಪ್ರಕರಣಗಳು ಹೆಚ್ಚಾದ ತಕ್ಷಣ ಎಚ್ಚರವಹಿಸಬೇಕಿದ್ದ ಆರೋಗ್ಯ ಇಲಾಖೆ ಸಿದ್ದರಾಮಯ್ಯ ಅವರನ್ನೂ ಮೀರಿಸುವಂತೆ ನಿದ್ದೆಗೆ ಶರಣಾಗಿದ್ದೇ ಡೆಂಗ್ಯೂ ರಾಜ್ಯದೆಲ್ಲೆಡೆ ಹಬ್ಬಲು ಪ್ರಮುಖ ಕಾರಣ ಎಂದು ಬಿಜೆಪಿ ಅಸಮಾಧಾನ ಹೊರ ಹಾಕಿದೆ.

ಜವಾಬ್ದಾರಿಯುಳ್ಳ ಮಗನಿದ್ದರೆ ಮನೆ ಚೆನ್ನಾಗಿರುತ್ತದೆ ಎಂಬ ಮಾತಿದೆ, ಆದರೆ ವಿಪರ್ಯಾಸವೆಂದರೆ ಕರ್ನಾಟಕದ ಘನತೆತೆತ್ತ ಸರ್ಕಾರದಲ್ಲಿ ಬಹುತೇಕ ಸಚಿವರೆಲ್ಲರೂ ಬೇಜವಾಬ್ದಾರಿಗಳು. ಅದರಲ್ಲಿಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೊಣೆ ಹೊತ್ತ ಸಚಿವ ದಿನೇಶ್ ಗುಂಡೂರಾವ್ ಅವರು, ಅದ್ಯಾವ ದೇಶದಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದು ತಿಳಿಯದು.
ಡೆಂಗ್ಯೂ ಮಹಾಮಾರಿ ಕನ್ನಡಿಗರನ್ನು ಈ ಪರಿ ಕಾಡುತ್ತಿದ್ದರೂ ಆರೋಗ್ಯ ಸಚಿವರು ಟ್ವೀಟ್ ಹೊರತುಪಡಿಸಿ ಮತ್ತಿನ್ನೇನನ್ನೂ ಮಾಡದಿರುವುದು ಸಚಿವರ ಬೇಜವಾಬ್ದಾರಿತನದ ಸುಸ್ಪಷ್ಟ ನಿದರ್ಶನ.
ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ವಕ್ಕರಿಸಿದ ದಿನದಿಂದ ಇಲ್ಲಿಯವರೆಗೂ ಕಲುಷಿತ ನೀರು ಸೇವಿಸಿ ಅಸುನೀಗಿದ ಹಾಗೂ ಅಸ್ವಸ್ಥಗೊಂಡವರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಕನ್ನಡಿಗರಿಗೆ ಶುದ್ಧ ಕುಡಿಯುವ ನೀರನ್ನೂ ಸಹ ನೀಡಲಾಗದ ಅಯೋಗ್ಯ ಸರ್ಕಾರ ಎಂಬ ಕುಖ್ಯಾತಿ ಕಾಂಗ್ರೆಸ್ನದ್ದು. ಕನ್ನಡಿಗರ ಆರೋಗ್ಯದ ಬಗ್ಗೆ ಕಾಂಗ್ರೆಸ್ಗೆ ಅದ್ಯಾವ ಪರಿ ಕಾಳಜಿ ಇದೆ ಎಂಬುದಕ್ಕೆ ಈ ಮೇಲಿನ ಘಟನೆಗಳೇ ಸಾಕ್ಷಿ.

ಈ ಹಿಂದಿನ ಸರ್ಕಾರ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಸರ್ವತೋಮುಖ ಹಾಗೂ ಸದೃಢ ಬೆಳವಣಿಗೆಗೆ ಕಾರಣವಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಯನ್ನು ವಿತರಿಸುವ ಮೂಲಕ ತಾನೆಷ್ಟು ದುಷ್ಟ ಎಂಬುದನ್ನು ನಿರೂಪಿಸಿತ್ತು. ಈಗ ಅದು ಸಾಲದೆಂಬಂತೆ ಹುಳು ಹಿಡಿದಿರುವ ಗೋಧಿ ರವೆಯನ್ನು ನೀಡಿ ಅದರಲ್ಲಿ ಉಪ್ಪಿಟ್ಟು ಮಾಡಿಕೊಳ್ಳಿ ಎನ್ನುತ್ತಿದೆ. ಇಂತಹ ಭಂಡ ಸರ್ಕಾರವನ್ನು ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ನೋಡಿರಲಿಲ್ಲ.
ಕನ್ನಡಿಗರನ್ನು ಸಮಸ್ಯೆಗಳು ಕಿತ್ತು ತಿನ್ನುತ್ತಿದ್ದರೂ ಕಾಂಗ್ರೆಸ್ ಸರ್ಕಾರ ತನಗೂ ಅದಕ್ಕೂ ಸಂಬಂಧವೇ ಇಲ್ಲವೆಂಬಂತೆ ಲೂಟಿಯಲ್ಲಿ ನಿರತವಾಗಿದೆ. ಲೂಟಿ ಹೊಡೆಯುವ ಸಮಯದಲ್ಲಿ ಒಗ್ಗಟ್ಟು ತೋರುವ ಕಾಂಗ್ರೆಸ್ಸಿಗರು ಲೂಟಿ ಮುಗಿದ ನಂತರ ಕುರ್ಚಿ ಬೇಕು ಎಂದು ಕಚ್ಚಾಡುವುದು ಅತ್ಯಂತ ಬಾಲಿಶ ಕನ್ನಡಿಗರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸದೆ ಕೇವಲ ತಮ್ಮ ಸ್ವಾರ್ಥಕ್ಕಾಗಿ ಕುರ್ಚಿ ಕಿತ್ತಾಟದಲ್ಲಿ ನಿರತವಾಗಿರುವುದು ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅವಮಾನ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
-
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications