ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ
ಬೆಂಗಳೂರು, ಮಾರ್ಚ್ 26: ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಕನ್ನಡಿಗರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ತನ್ನ ಮಿತ್ರ ಪಕ್ಷ ಡಿಎಂಕೆ ಯನ್ನು ಓಲೈಸಲು ತಮಿಳುನಾಡಿಗೆ ನೀರು ಹರಿಯ ಬಿಟ್ಟು ಕಾವೇರಿ ತೀರದ ನಮ್ಮ ರೈತರ ಬದುಕಿಗೆ ಕೊಳ್ಳಿಯಿಟ್ಟಿತ್ತು. ಇದೀಗ ಕೃಷ್ಣಾ ತೀರದ ನಮ್ಮ ರೈತರ ಪರಿಶ್ರಮದ ಬೆವರಿನ ಬೆಳೆಗಳನ್ನು ಒಣಗಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಮಾನವೀಯತೆಯ ಹೆಸರಿನಲ್ಲಿ ತೆಲಂಗಾಣ ರಾಜ್ಯಕ್ಕೆ 1.5 ಟಿಎಂಸಿ ಯಷ್ಟು ನೀರು ಬಿಡಲಾಗಿದೆ ಎಂದು ಹೇಳಿರುವ ಸಚಿವ ಎಂ.ಬಿ ಪಾಟೀಲ್ ಅವರಿಗೂ ತಿಳಿಯದಂತೆ 10 ಟಿಎಂಸಿ ನೀರು ಹರಿಯಬಿಡಲಾಗಿದೆ ಎಂದರೆ ಈ ನೀರು ಬಿಟ್ಟಿರುವ ಹಿಂದಿನ ಆದೇಶದ ಕಾಣದ ಕೈಗಳು ಯಾವುವು? ಕರ್ನಾಟಕ ಸರ್ಕಾರವನ್ನು ಯಾರು ನಿಯಂತ್ರಿಸುತ್ತಿದ್ದಾರೆ? ಜಲಸಂಪನ್ಮೂಲ ಇಲಾಖೆ ಸರ್ವಾಧಿಕಾರಿಯ ಮುಷ್ಠಿಯಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಜಲ ಸಂಪತ್ತು, ಅರಣ್ಯ ಸಂಪತ್ತು ಹಾಗೂ ಪ್ರಾಕೃತಿಕ ಸಂಪತ್ತುಗಳ ಮೇಲೆ ನಿಯಂತ್ರಣ ಸಾಧಿಸಿರುವ ಕಾಂಗ್ರೆಸ್ ವರಿಷ್ಠ ಮಂಡಳಿ ಕರ್ನಾಟಕದ ನದಿಗಳಿಂದ ಹರಿಯುವ ನೀರನ್ನು ತನ್ನ ಮಿತ್ರ ಪಕ್ಷಗಳು ಹಾಗೂ ತನ್ನ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಹರಿಯ ಬಿಡುವಂತೆ ಸೂಚನೆ ನೀಡುತ್ತಿದೆ.
ರಾಜ್ಯದ ಮಣ್ಣಿನ ಮಕ್ಕಳ ಆಕ್ರೋಶ ಅದರಲ್ಲೂ ಉತ್ತರ ಕರ್ನಾಟಕದ ಕೃಷ್ಣ ತೀರದ ರೈತರು ಬೆವರು ಹರಿಸಿ ಬೆಳೆದಿರುವ ಬೆಳೆಗಳು ಈಗಾಗಲೇ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಈ ಕಾರಣಕ್ಕಾಗಿಯೇ ಓರ್ವ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತ ರೈತನ ಆತ್ಮಕ್ಕೆ ಶಾಂತಿ ಕೋರಿ ಆ ಮೃತ ರೈತನ ಕುಟುಂಬದ ಪರವಾಗಿ ಬಿಜೆಪಿ ದನಿಯೆತ್ತಿಲಿದೆ. ಎಂದರು.

ಈ ಕೂಡಲೇ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಬೆಳೆ ನಷ್ಟದ ಪರಿಹಾರ ನೀಡಬೇಕೆಂದು ಒತಾಯಿಸುತ್ತೇನೆ. ರಾಜ್ಯ ಸರ್ಕಾರ ತೆಲಂಗಾಣಕ್ಕೆ 10 ಟಿಎಂಸಿ ನೀರು ಬಿಟ್ಟಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಈ ಭಾಗದ ರೈತರ ಪರವಾಗಿ ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದ್ದಾರೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್











Click it and Unblock the Notifications