ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ-ವಿಜಯೇಂದ್ರ
ಬೆಂಗಳೂರು, ಜೂನ್ 04: ಪೋಕ್ಸೋ ಕೇಸ್ನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಸದ್ಯ ರಿಲೀಫ್ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಅರೆಸ್ಟ್ ಮಾಡುವಂತಿಲ್ಲ. ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಮಹತ್ವದ ಆದೇಶ ನೀಡಿದೆ. ಬಿ.ಎಸ್ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಪೀಠದಲ್ಲಿ ಯಡಿಯೂರಪ್ಪ ಜಾಮೀನು ವಿಚಾರಣೆ ನಡೆದಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಸಿದ್ದು, ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸವಿದೆ ಎಂದಿದ್ದಾರೆ. ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.

ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್ ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ ಎಂದಿದ್ದಾರೆ.
ನಮ್ಮ ತಂದೆ ವಿರುದ್ಧ ರಾಜಕೀಯ ಷಡ್ಯಂತ್ರ- ಬಿ.ವೈ ರಾಘವೇಂದ್ರ
ಈ ಬಗ್ಗೆ ಶಿವಮೊಗ್ಗದ ನೂತನ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ನಮ್ಮ ತಂದೆ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ದೂರು ನೀಡಿರುವ ಮಹಿಳೆ 50 ಅಧಿಕಾರಿಗಳ ಮೇಲೆ ಇದೇ ರೀತಿ ದೂರು ನೀಡಿದ್ದಾರೆ. ಗೃಹ ಸಚಿವರೇ ಮಾನಸಿಕವಾಗಿ ತೊಂದ್ರೆಯಲ್ಲಿ ಇರುವಂತಹ ಹೆಣ್ಣು ಮಗಳು ಎಂಬ ಅರ್ಥದಲ್ಲಿ ಹೇಳಿದ್ದರು. ನಾವು ಹಾಗೇ ಎಂದುಕೊಂಡಿದ್ದೆವು. ಆದರೆ, ಚುನಾವಣೆ ನಂತರ ಹೀಗೆ ಆಗಿದೆ. ಈ ಹಿಂದೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡಿ, ಅಧಿಕಾರದಿಂದ ಕೆಳಗೆ ಇಳಿಯುವಂತೆ ಮಾಡಿದರು. ಇಂದು ಸಹ ವೈಯಕ್ತಿಕವಾದ ಘಟನೆ ಆಗಿದೆ ಎಂದು ಪ್ರತಿಬಿಂಬಿಸುವ ಪ್ರಯತ್ನ ಮಾಡಲಾಗಿದೆ. ನನಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎಂದಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications