ರಾಜ್ಯದ ಸಂದಿಗ್ಧ ಸ್ಥಿತಿಯಲ್ಲಿ ಸೂಪರ್ ಬಜೆಟ್: ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಮಾರ್ಚ್.08: ಕರ್ನಾಟಕದ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು ನೆರೆ, ಪ್ರಾಕೃತಿಕ ವಿಕೋಪ, ಕೋವಿಡ್ ಸಂಕಷ್ಟದ ನಂತರ ತೆರಿಗೆ ಹೆಚ್ಚಳ ಇಲ್ಲದ ಅತ್ಯುತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ. ಮಹಿಳಾ ದಿನಾಚರಣೆಯಂದೇ ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗಾಗಿ ವಿಶೇಷ ಅನುದಾನವನ್ನು ನೀಡಿದ್ದಾರೆ. (1) #ಕರ್ನಾಟಕಬಜೆಟ್2021
— Nalinkumar Kateel (@nalinkateel) March 8, 2021
"ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೆರೆ, ಪ್ರಾಕೃತಿಕ ವಿಕೋಪ, ಕೊವಿಡ್-19 ಸಂಕಷ್ಟದ ನಂತರ ತೆರಿಗೆ ಹೆಚ್ಚಳ ಇಲ್ಲದ ಅತ್ಯುತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ. ಮಹಿಳಾ ದಿನಾಚರಣೆಯಂದೇ ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗಾಗಿ ವಿಶೇಷ ಅನುದಾನವನ್ನು ನೀಡಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ 2021-22ನೇ ಸಾಲಿನ ಬಜೆಟ್ ಒಟ್ಟು ಗಾತ್ರ 2,46,207 ಕೋಟಿ ರೂಪಾಯಿ ಆಗಿದೆ. ಸರ್ಕಾರದ ನಿರೀಕ್ಷಿತ ಆದಾಯ 2.43 ಲಕ್ಷ ಕೋಟಿ ರೂಪಾಯಿ ಆಗಿದೆ. ಒಟ್ಟು ವೆಚ್ಚ 2.46 ಲಕ್ಷ ರೂಪಾಯಿ ತಗಲುತ್ತದೆ. ಬಜೆಟ್ ನ ಒಟ್ಟು ಕೊರತೆ 15,134 ಕೋಟಿ ರೂಪಾಯಿ ಆಗುತ್ತದೆ.

ಸರ್ಕಾರಕ್ಕೆ ಬರುವ ಒಟ್ಟು ಆದಾಯ 100 ರೂಪಾಯಿ ಆಗಿದ್ದರೆ ಅದರಲ್ಲಿ ರಾಜ್ಯ ತೆರಿಗೆ ಮೂಲಕ 50 ರೂಪಾಯಿ, ಸಾಲದ ಮೂಲಕ 29 ರೂಪಾಯಿ, ಕೇಂದ್ರ ತೆರಿಗೆ ಮೂಲಕ 10 ರೂಪಾಯಿ, ಕೇಂದ್ರ ಸರ್ಕಾರದ ಸಹಾಯ ಅನುದಾನದ ಅಡಿ 6 ರೂಪಾಯಿ, ರಾಜ್ಯದ ತೆರಿಗೇತರ ರಾಜಸ್ವ 3 ರೂಪಾಯಿ ಮತ್ತು ಸಾರ್ವಜನಿಕ ಲೆಕ್ಕ ನಿವ್ವಳ 2 ರೂಪಾಯಿ ಆಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications