KPSC: 'ಕೆಪಿಎಸ್ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ'
ಬೆಂಗಳೂರು, ಮೇ 08: ಕೆಪಿಎಸ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ಯಾವುದೇ ಹೋರಾಟ ಮಾಡಿದರೂ ಬಿಜೆಪಿ ಅವರ ಜೊತೆಯಲ್ಲಿ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು.
ಇಂದು(ಗುರುವಾರ) ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾನು ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅªರ ಉಪಸ್ಥಿತಿಯಲ್ಲಿ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. ಅವರಿಗೆ ಆಗಿರುವ ಅನ್ಯಾಯವನ್ನು ವಿವರವಾಗಿ ನಮಗೂ ತಿಳಿಸಿದ್ದಾರೆ ಎಂದು ಹೇಳಿದರು. ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 70 ಸಾವಿರ ಜನರಿದ್ದಾರೆ. 70-80 ಪ್ರಶ್ನೆಗಳು ತಪ್ಪಾಗಿ ಮುದ್ರಿತವಾಗಿದ್ದು, ಅವರಿಗೆ ಅನ್ಯಾಯವಾಗಿದೆ. ಕೆಲವರು ಮಾತ್ರ ಕೋರ್ಟಿಗೆ ಹೋಗಿದ್ದಾರೆ. ಮರುಪರೀಕ್ಷೆಗೆ ಆದೇಶವೂ ಆಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೇಳುವುದೇ ಒಂದು ಮಾಡುವುದೇ ಒಂದು ಎಂದು ಆಕ್ಷೇಪಿಸಿದರು. ಮೇಲ್ಮನೆಯಲ್ಲಿ ಪ್ರಶ್ನಿಸಿದಾಗ ವಿದ್ಯಾರ್ಥಿಗಳ ಪರ ಇದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಕೋರ್ಟ್ ಆದೇಶ ನೋಡಿ ಮರುಪರೀಕ್ಷೆ ಮಾಡುವುದಾಗಿ ಹೇಳಿದ್ದರು. ಆದರೆ, ಕೋರ್ಟ್ ಆದೇಶ ಬಂದರೂ ಮೀನಾಮೇಷ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೊನ್ನೆ ನಡೆದ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳು ಸಕಾಲದಲ್ಲಿ ಸ್ಥಳ ಸೇರಿರಲಿಲ್ಲ. ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಪೊಲೀಸರು ಅವರನ್ನು ಹೊಡೆದು ಜೀಪಿನಲ್ಲಿ ತುಂಬಿಕೊಂಡು ಹೋದುದನ್ನು ಕಣ್ಣಾರೆ ನೋಡಿದ್ದೇವೆ ಎಂದು ತಿಳಿಸಿದರು. ಪ್ರಶ್ನಿಸಿದವರನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸ ಸರಿಯೇ? ಪೊಲೀಸಿನವರ ಮೂಲಕ ಅವರನ್ನು ಹದ್ದುಬಸ್ತಿನಲ್ಲಿ ಇಡುವುದು ಸರಿಯೇ ಎಂದು ಕೇಳಿದರು. ಇದು ಸುಲಿಗೆ ಸರಕಾರ. ಇದು ಸ್ಕೀಂ ಸರಕಾರವಲ್ಲ; ಸ್ಕ್ಯಾಮ್ ಸರಕಾರ. ಚೆನ್ನಾಗಿ ಸುಲಿಗೆ ಮಾಡಿ ತಲುಪಿಸುತ್ತಿದ್ದ ನಿವೃತ್ತ ಅಧಿಕಾರಿಗಳನ್ನು ನಿವೃತ್ತರಾದರೂ ಬಿಡುತ್ತಿಲ್ಲ; ಒಂದು ವರ್ಷ, ಎರಡು ವರ್ಷ, ಮೂರು ವರ್ಷ, ಕೆಲವರನ್ನು ಆರೇಳು ವರ್ಷ ಇಟ್ಟುಕೊಂಡಿದ್ದಾರೆ. ಹೊಸದಾಗಿ ಬಂದವರಿಗೆ ಸುಲಿಗೆಯ ಅನುಭವ ಇರದಿರುವುದೇ ಇದಕ್ಕೆ ಕಾರಣ ಎಂದು ವ್ಯಂಗ್ಯವಾಡಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications