ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು ಮಂಜೂರು
ಬೆಂಗಳೂರು, ಡಿಸೆಂಬರ್ 5: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಹಿಂದೂ ವಾಗ್ಮಿ ಚೈತ್ರಾ ಸೇರಿ ಇಬ್ಬರಿಗೆ ಜಾಮೀನು ಮಂಜೂರಾಗಿದೆ.
ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿ ಜೈಲುಪಾಲಾಗಿದ್ದ ಹಿಂದುತ್ವಪರ ಭಾಷಣಗಾರ್ತಿ ಚೈತ್ರಾಗೆ ಕೊನೆಗೂ ಜಾಮೀನು ಸಿಕ್ಕಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ಇಬ್ಬರಿಗೆ ಜಾಮೀನು ನೀಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಭರವಸೆ ನೀಡಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಮತ್ತು ಇತರ ಎಂಟು ಮಂದಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.
ಉದ್ಯಮಿ ಸೆಪ್ಟೆಂಬರ್ 8 ರಂದು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಅವರು, ಪ್ರಸಾದ್ ಎಂಬ ಸಂಘ ಸ್ವಯಂಸೇವಕ ಮೂಲಕ ತನಗೆ ಚೈತ್ರಾ ಪರಿಚಯವಾಯಿತು ಎಂದು ಹೇಳಿದ್ದರು. ಚೈತ್ರಾ ಅವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡಿದ್ದು, ಪೂಜಾರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದರು. ಭರವಸೆಯನ್ನು ಈಡೇರಿಸಲು ಸಾಧ್ಯವಾಗದಿದ್ದಾಗ ನಂತರ ಆರೋಪಿಗಳು ಪೂಜಾರಿ ಅವರಿಗೆ ಬೆದರಿಕೆ ಹಾಕಿದ್ದರು.
ಪಟ್ಟಣದ ಹೆಸರನ್ನು ಬಳಸುವುದರಿಂದ ಪಟ್ಟಣದ ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂಬ ದೂರಿನ ನಂತರ ಮಾಧ್ಯಮಗಳು ವರದಿಗಳಲ್ಲಿ ಚೈತ್ರಾ ಅವರ ಉಪನಾಮವನ್ನು ಬಳಸದಂತೆ ಸೆಷನ್ಸ್ ನ್ಯಾಯಾಲಯವು ಈ ಹಿಂದೆ ನಿರ್ಬಂಧಿಸಿತ್ತು. ಕಳೆದ ವಿಧಾನಸಭೆಗೂ ಮುನ್ನ ಆರೇಳು ತಿಂಗಳ ಹಿಂದೆ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ, ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮಿ ಮತ್ತು ಗ್ಯಾಂಗ್ 4 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿತ್ತು.
ಈಗ ಚೈತ್ರಾ ಹಾಗೂ ವಂಚನೆ ಪ್ರಕರಣದ 7ನೇ ಆರೋಪಿ ಶ್ರೀಕಾಂತ್ ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಪ್ರಕರಣದಲ್ಲಿ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ನ್ಯಾಯಾಲಯವು ಚೈತ್ರಾ ಮತ್ತು ಶ್ರೀಕಾಂತ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ಪಡೆದು, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚನೆ ನೀಡಿದು ಜಾಮೀನು ಮಂಜೂರು ಮಾಡಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications