ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಆಡಿಯೋದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು- ಕಾಂಗ್ರೆಸ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 16: ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಮೂರನೇ ಆರೋಪಿ ಸ್ವಾಮೀಜಿ ಬಂಧನವಾದರೆ ದೊಡ್ಡವರ ಹೆಸರುಗಳು ಬಯಲಿಗೆ ಬರಲಿವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಇದು ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಬಿಜೆಪಿಯ ಟಿಕೆಟ್ ಹಗರಣದಲ್ಲಿ ದಿನಕ್ಕೊಂದೊಂದು ಹೆಸರು ಹೊರಬರುತ್ತಿವೆ. ಚೈನ್ ಚೈತ್ರಳ ಆಡಿಯೋದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ' ಎಂದು ಕೆಪಿಸಿಸಿ ಆರೋಪಿಸಿದೆ.
'ಸುನಿಲ್ ಕುಮಾರ್ ಅವರಿಗೂ ಚೈತ್ರಳಿಗೂ ಈ ಹಗರಣದಲ್ಲಿ ಇರುವ ಸಂಬಂಧವೇನು ಎಂಬುದು ಇನ್ನೂ ನಿಗೂಢ. ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದರೂ ಬಿಜೆಪಿ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುತ್ತಿರುವುದೇಕೆ ? ಪಕ್ಷದ ಹೆಸರಲ್ಲೇ ವಂಚನೆ ನಡೆದಿದ್ದರೂ ಬಿಜೆಪಿ ದೂರು ದಾಖಲಿಸದೆ ಸುಮ್ಮನಿರುವುದೇಕೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

'ಟಿಕೆಟ್ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ ಬಸವರಾಜ ಬೊಮ್ಮಾಯಿ, ಯಾವುದಾದ್ರೂ ಹೆಣ ಕಂಡರೆ ಹಿಂದೂ ಕಾರ್ಯಕರ್ತರು ಎಂದು ಬೊಬ್ಬೆ ಹೊಡೆಯುವ ಬಿಜೆಪಿ ತನ್ನ ಕಾರ್ಯಕರ್ತರು ಅಕ್ರಮ, ಅನಾಚಾರ ನಡೆಸಿದಾಗ ಜಾರಿಕೊಳ್ಳುವುದೇಕೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
'ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆಯಾಗಿದ್ದಾಳೆ. ಮತ್ತೊಬ್ಬ ಆರೋಪಿ ಗಗನ್ ಕಡೂರು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ. ವಂಚನೆ ನಡೆಸಿದ್ದು ಬಿಜೆಪಿ ಟಿಕೆಟ್ ಹೆಸರಲ್ಲಿ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಡೀಲ್ ನಡೆಸಲು ಬಳಸಿಕೊಳ್ಳಲಾಗಿತ್ತು. ಹೀಗಿದ್ದೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಆತ್ಮವಂಚನೆ ಅಲ್ಲವೇ' ಎಂದು ಕಾಂಗ್ರೆಸ್ ಕೇಳಿದ್ದಾರೆ.
'ಬಿಜೆಪಿಯಲ್ಲಿ ಸಿಎಂ ಹುದ್ದೆಗೆ 2,500 ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ ಬಸನಗೌಡ ಪಾಟೀಲ ಅವರು ಬಿಜೆಪಿ ಟಿಕೆಟ್ ಗೆ 7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ. ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ. ಪಿಎಸ್ಐ ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು. ರೌಡಿ ಶೀಟರ್ ಗಳೂ ಬಿಜೆಪಿಗರಿಗೆ ಆಪ್ತರು. ಟಿಕೆಟ್ ಹಗರಣದ ವಂಚಕರೂ ಬಿಜೆಪಿಗರಿಗೆ ಆಪ್ತರು. ಕಳ್ಳರು, ಸುಳ್ಳರು, ವಂಚಕರು ಬಿಜೆಪಿ ನಾಯಕರಿಗೇ ಆಪ್ತವಾಗುವುದೇಕೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
'ಕರ್ನಾಟಕದ ಬಿಜೆಪಿಯನ್ನು ಸಂತೋಷ 'ಜಿ' ಮುಳುಗಿಸಿದರು. ಕರ್ನಾಟಕದ ಬಿಜೆಪಿಯನ್ನು ಮೋದಿ 'ಜಿ' ಕೈಬಿಟ್ಟರು. ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅದ್ಯಾರೋ ವಿಶ್ವನಾಥ್ 'ಜಿ' ಅವರ ಸಹಾಯವನ್ನದರೂ ಪಡೆಯಿರಿ' ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications