ಇಸ್ತ್ರಿ ಪೆಟ್ಟಿಗೆ, ಕುಕ್ಕರ್, ಹಣ ಕೊಟ್ಟು ಗೆದ್ದ ಸಿದ್ದರಾಮಯ್ಯ; ರಾಜೀನಾಮೆಗೆ ಎನ್. ರವಿಕುಮಾರ್ ಆಗ್ರಹ
ಬೆಂಗಳೂರು, ಸೆಪ್ಟೆಂಬರ್ 23: ಸಿದ್ದರಾಮಯ್ಯನವರು ನೈತಿಕತೆ ಕುರಿತು, ಡಾ. ಅಂಬೇಡ್ಕರರ ಸಂವಿಧಾನದ ಬಗ್ಗೆ ಬಹಳ ಮಾತನಾಡುತ್ತಾರೆ. ಇಸ್ತ್ರಿ ಪೆಟ್ಟಿಗೆ, ಕುಕ್ಕರ್, ಹಣ ಕೊಟ್ಟು ಸಿದ್ದರಾಮಯ್ಯ ಗೆಲುವು ಸಾಧಿಸಿದ್ದು,ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ರಾಜ್ಯ ಚುನಾವಣಾಧಿಕಾರಿಗೆ ಮನವಿಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವಂತೆ ಬಿಜೆಪಿ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

ಸಿದ್ದರಾಮಯ್ಯನವರು ರಾಜೀನಾಮೆ ನೀಡುವಂತೆ ನಿರ್ದೇಶಿಸಲು ಚುನಾವಣಾಧಿಕಾರಿಯನ್ನು ಕೋರಲಾಗಿದೆ. ಮತದಾರರಿಗೆ ಆಸೆ, ಆಮಿಷ, ಅಭಿಲಾಷೆ, ಒತ್ತಡ ವಿಧಿಸಬಾರದೆಂದು ಕಾನೂನಿದೆ. ಆದರೆ, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆಮನೆಗೆ ಕುಕ್ಕರ್, ಹಣ ಹಂಚಿದ ಬಗ್ಗೆ ಸಿದ್ದರಾಮಯ್ಯನವರ ಸುಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಭಾಷಣದಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ತುಣುಕು, ಸುದ್ದಿ ನಾಡಿನಾದ್ಯಂತ ಪಸರಿಸಿದೆ ಎಂದು ವಿವರಿಸಿದರು.
ಸಿದ್ದರಾಮಯ್ಯನವರು ನೈತಿಕತೆ ಕುರಿತು, ಡಾ. ಅಂಬೇಡ್ಕರರ ಸಂವಿಧಾನದ ಬಗ್ಗೆ ಬಹಳ ಮಾತನಾಡುತ್ತಾರೆ. ಅದೇ ಸಂವಿಧಾನ, ಅದೇ ಚುನಾವಣೆ ನೀತಿಸಂಹಿತೆ ಪ್ರಕಾರ ಸಿದ್ದರಾಮಯ್ಯನವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಪರಿಣಾಮವಾಗಿ ಅವರು ಗೆದ್ದಿದ್ದಾಗಿ ಅವರ ಮಗನೇ ಹೇಳಿದ್ದಾರೆ. ಸಿದ್ದರಾಮಯ್ಯನವರೂ ಈ ಸಭೆಯಲ್ಲಿದ್ದರು ಎಂದು ತಿಳಿಸಿದರು.
ಜೆಡಿಎಸ್ ಎನ್ಡಿಎ ಭಾಗವಾಗಿರುವುದರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಆನೆಯ ಬಲ ಬಂದಂತಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಈ ಮೈತ್ರಿಕೂಟ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಮೂರೇ ತಿಂಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬೆಲೆ ಏರಿಕೆಯಿಂದ ಜನರು ಶಾಪ ಹಾಕುವಂತಾಗಿದೆ. ಗ್ಯಾರಂಟಿಗಳನ್ನು ಮನೆಮನೆಗೆ ಮುಟ್ಟಿಸದೆ ಇರುವುದು, ಕುಡಿಯುವ ನೀರಿಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿನ ಹೊಲಗಳಿಗೆ ಹರಿಸುತ್ತಿರುವುದು, ಬರ ನಿರ್ವಹಣೆಯಲ್ಲಿ ವೈಫಲ್ಯ, ಮೇವಿಲ್ಲ, ನೀರಿಲ್ಲ, ಕರೆಂಟಿಲ್ಲ, ಒಂದು ಕಿಮೀ ರಸ್ತೆ ಮಾಡಿಲ್ಲ ಎಂಬುದು ರಾಜ್ಯದ ಪರಿಸ್ಥಿತಿಯಾಗಿದೆ. ಇದು ನಮ್ಮ ಗೆಲುವಿಗೆ ಪೂರಕ ಎಂದರು.
ಮೈತ್ರಿ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ ಎಂದು ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿಯವರು ಇವತ್ತು ದೆಹಲಿಯಲ್ಲಿ ನಮ್ಮ ಮುಖಂಡರನ್ನು ಭೇಟಿ ಮಾಡಿ ಎನ್ಡಿಎಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ದೇಶದ ಸುಭದ್ರತೆಗಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಜೆಡಿಎಸ್ ನಮ್ಮ ಜೊತೆ ಬಂದಿರುವುದು ಬಹಳ ಸಂತಸದ ಸಂಗತಿ ಎಂದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications