ಸೋಮವಾರ ಶ್ರೀರಾಮುಲುಗೆ ಬಿಜೆಪಿ ಆಹ್ವಾನ?
ಬೆಂಗಳೂರು. ಜ.4 : ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮರಳಿ ಕರೆತಂದಿರುವ ಬಿಜೆಪಿ ನಾಯಕರು ಸದ್ಯ ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಅವರತ್ತ ಗಮನ ಹರಿಸಿದ್ದಾರೆ. ಸೋಮವಾರ ಬಿಜೆಪಿ ನಾಯಕರು ಪಕ್ಷಕ್ಕೆ ಮರಳುವಂತೆ ಅವರಿಗೆ ಆಹ್ವಾನ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಜೊತೆಗೆ ಈಗಾಗಲೇ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತುಕತೆ ನಡೆಸಿದ್ದಾರೆ. ಪಕ್ಷದ ನಾಯಕರು ಅವರನ್ನು ಭೇಟಿಯಾಗಿ ಅಧಿಕೃತವಾಗಿ ಪಕ್ಷಕ್ಕೆ ಮರಳುವಂತೆ ಅವರನ್ನು ಆಹ್ವಾನಿಸುವ ಕಾರ್ಯ ಮಾತ್ರ ಬಾಕಿ ಇದೆ. [ಬಿಜೆಪಿಗೆ ಮರಳಲು ಸಜ್ಜಾದ ಶ್ರೀರಾಮುಲು]

ಪಕ್ಷದ ಮೂಲಗಳ ಮಾಹಿತಿಯಂತೆ ಸೋಮವಾರ ಬಿಜೆಪಿ ನಾಯಕರು ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಶ್ರೀರಾಮುಲು ಅವರನ್ನು ಭೇಟಿಯಾಗಿ ಅವರನ್ನು ಪಕ್ಷಕ್ಕೆ ಆಹ್ವಾನಿಸಲಿದ್ದಾರೆ. ಬಿಜೆಪಿ ನಾಯಕರಿಂದ ಆಹ್ವಾನ ಬಂದ ನಂತರ ಶ್ರೀರಾಮುಲು ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ. [ಪ್ರಧಾನಿ ಪಟ್ಟಕ್ಕೆ ಮೋದಿ ಶ್ರೀರಾಮುಲು ಜಪ]
ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ವಿವಿಧ ನಾಯಕರು ಈಗಾಗಲೇ ಶ್ರೀರಾಮುಲು ಅವರೊಂದಿಗೆ ಮಾತುಕತೆ ನಡೆಸಿದ್ದು, ಬಿಜೆಪಿಗೆ ಮರಳಿದರೆ ಆಗುವ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಸದ್ಯ ಯಡಿಯೂರಪ್ಪ ಪಕ್ಷಕ್ಕೆ ಮರಳಿರುವುದರಿಂದ ಶ್ರೀರಾಮುಲು ಅವರು ವಾಪಸ್ ಆಗುವ ಸಾಧ್ಯತೆ ಇದೆ.
ಶ್ರೀರಾಮುಲು ಅವರು ಪಕ್ಷಕ್ಕೆ ಮರಳಿದರೆ ಬಳ್ಳಾರಿ, ಚಿತ್ರದುರ್ಗ, ರಾಯಚೂರು ಮುಂತಾದ ಕ್ಷೇತ್ರಗಳ ಜವಾಬ್ದಾರಿಯನ್ನು ಅವರಿಗೆ ವಹಿಸುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಬಿಎಸ್ಆರ್ ಕಾಂಗ್ರೆಸ್ ಪ್ರಭಾವ ಹೆಚ್ಚಾಗಿದ್ದು, ಅಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಶ್ರೀರಾಮುಲು ಅವರಿಗೆ ವಹಿಸಲು ನಿರ್ಧರಿಸಲಾಗಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications