ಸ್ಪೀಕರ್ ಕಟ್ಟಿ ಹಾಕಲು ಅವಿಶ್ವಾಸ ನಿರ್ಣಯದ ನೋಟಿಸ್?
ಬೆಂಗಳೂರು, ಜುಲೈ 26 : ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದೆ. 14 ಶಾಸಕರ ರಾಜೀನಾಮೆ ಅರ್ಜಿ ಸ್ಪೀಕರ್ ಮುಂದೆ ಬಾಕಿ ಇದೆ.
ಗುರುವಾರ ಸ್ಪೀಕರ್ ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದರು. ಈಗ ಹೊಸ ಸರ್ಕಾರ ಬರುತ್ತಿದ್ದಂತೆ ಸ್ಪೀಕರ್ ಕಟ್ಟಿ ಹಾಕಲು ತಂತ್ರ ನಡೆದಿದೆ. ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿದರೆ ಸ್ಪೀಕರ್ ಯಾವುದೇ ತೀರ್ಮಾನವನ್ನು ಕೈಗೊಳ್ಳಲು ಸಾಧ್ಯವಿಲ್ಲ.
ರಮೇಶ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡುವಾಗ, "ಹೊಸ ಸರ್ಕಾರ ರಚನೆಯಾಗಿ ನನ್ನ ವಿರುದ್ಧ ಅವಿಶ್ವಾಸ ಮಂಡಿಸಿದರೆ ಮಾತ್ರ ಸಭಾದ್ಯಕ್ಷರು ಬದಲಾಗಬಹುದು. ಅಲ್ಲಿಯ ತನಕ ನಾನೇ ಸಭಾಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯುತ್ತೇನೆ" ಎಂದು ಸ್ಪಷ್ಟಪಡಿಸಿದ್ದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ನೋಟಿಸ್ ಜಾರಿ ಮಾಡಲಾಗುತ್ತದೆ. ಆಗ ಸ್ಪೀಕರ್ ಶಾಸಕರ ಅನರ್ಹತೆ, ರಾಜೀನಾಮೆ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ.
ಒಮ್ಮೆ ಅವಿಶ್ವಾಸ ನಿರ್ಣಯದ ನೋಟಿಸ್ ಜಾರಿಗೊಂಡರೆ 14 ದಿನದಲ್ಲಿ ಅದನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಬೇಕಿದೆ. ಆಡಳಿತ ಪಕ್ಷದ ಸದಸ್ಯರು ನಿರ್ಣಯದ ವಿರುದ್ಧ ಮತ ಚಲಾವಣೆ ಮಾಡುವ ಮೂಲಕ ಸ್ಪೀಕರ್ ಬದಲಾವಣೆ ಮಾಡುತ್ತಾರೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications