ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ, ಜಾರಕಿಹೊಳಿ ರಾಜೀನಾಮೆಗಾಗಿ ಶುಕ್ರವಾರದಿಂದ ಬಿಜೆಪಿ ಹೋರಾಟ

|
Google Oneindia Kannada News

ಬೆಂಗಳೂರು, ಅ.17 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜವಳಿ ಖಾತೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶುಕ್ರವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

'ಬಿಜೆಪಿ ನಾಯಕರ ಹೋರಾಟಕ್ಕೆ ಶುಭವಾಗಲಿ''ಬಿಜೆಪಿ ನಾಯಕರ ಹೋರಾಟಕ್ಕೆ ಶುಭವಾಗಲಿ'

ಕರ್ನಾಕಟ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. 'ಆದಾಯ ತೆರಿಗೆ ಇಲಾಖೆ ದಾಳಿ ನಡೆದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರದಿಂದ ಪ್ರತಿಭಟನೆ ನಡೆಸುವುದಾಗಿ' ಯಡಿಯೂರಪ್ಪ ಹೇಳಿದರು.

BJP to protest seeking resignation of DK Shiva Kumar and Ramesh Jharkiholi

ಆಗಸ್ಟ್ 18ರ ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಫ್ರೀಡಂಪಾರ್ಕ್‌ನಿಂದ ವಿಧಾನಸೌಧದ ತನಕ ಸುಮಾರು ಇಪ್ಪತೈದು ಸಾವಿರ ಕಾರ್ಯಕರ್ತರು ಜಾಥಾ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ಭ್ರಷ್ಟರನ್ನು ರಕ್ಷಿಸುತ್ತಿರುವ ಸಿದ್ದರಾಮಯ್ಯ: ಬಿಎಸ್ ವೈ ಆರೋಪಭ್ರಷ್ಟರನ್ನು ರಕ್ಷಿಸುತ್ತಿರುವ ಸಿದ್ದರಾಮಯ್ಯ: ಬಿಎಸ್ ವೈ ಆರೋಪ

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಲಿದೆ. ಇಬ್ಬರು ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ ಮುಂದುವರೆಸಲು ಬಿಜೆಪಿ ನಿರ್ಧರಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದಾಗ ಐಟಿ ದಾಳಿಗೆ ಒಳಗಾದ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು.

English summary
Karnataka BJP demanding the resignation of Energy Minister D.K.Shivakumar and Textiles Minister Ramesh Jharkiholi. Party workers will take out a protest march from Freedom Park to Vidhana Soudha on August 18, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X