BJP-KRPP: ಬಿಜೆಪಿಗೆ ಗಾಲಿ ಜನಾರ್ಧನ್ ರೆಡ್ಡಿ ಕರೆತರಲು ತೆರೆಮರೆಯಲ್ಲಿ ಕಸರತ್ತು?
ಬೆಂಗಳೂರು, ನವೆಂಬರ್ 19: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಸೋತ ಬಿಜೆಪಿ ಪಕ್ಷವು ಮುಂದೆ ಎದುರಾಗಲಿರುವ ಲೋಕಸಭಾ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಗೆಲ್ಲಲು ತಂತ್ರಗಾರಿಕೆ ಹೆಣೆಯತ್ತಿದೆ. ಇದರ ಭಾಗವಾಗಿಯೇ KRPP ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ನಡೆಯುತ್ತಿವೆ.
ಹೌದು, ಇತ್ತೀಚೆಗಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಕಟ್ಟಿ ಚುನಾವಣೆಯಲ್ಲಿ ಗೆದ್ದ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆತರುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಸ್ಥಾನ ಕೈತಪ್ಪದಂತೆ ಬಿಜೆಪಿ ಯೋಚಿಸಿದೆ. ಇದರಿಂದ ಕಾಂಗ್ರೆಸ್ಗು ತಕ್ಕ ಉತ್ತರ ನೀಡಿದಂತಾಗುತ್ತದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ.

ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ದಶಕದಿಂದಲೂ ರಾಜಕೀಯದಿಂದ ದೂರ ಉಳಿದಿದ್ದ ಗಾಲಿ ಜನಾರ್ಧನ್ ರೆಡ್ಡಿ ಇದೇ 2023ರ ಚುನಾವಣೆ ವೇಳೆ ಸ್ವಂತ ಪಕ್ಷ ಕೆಆರ್ಪಿಪಿ ಕಟ್ಟುವ ಮೂಲಕ ಕಲ್ಯಾಣ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳಿಗೆ ಠಕ್ಕರ್ ಕೊಟ್ಟಿದ್ದರು.
ಬಿಜೆಪಿಯಿಂದ ಎಚ್ಚರಿಕೆ ಹೆಜ್ಜೆ
ಅಲ್ಲದೇ ರಾಜ್ಯದ ವಿವಿಧ ಕಡೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಇವರ ರಾಜಕೀಯ ಪ್ರವೇಶ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ರೆಡ್ಡಿಯವರ ಈ ನಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕದಲ್ಲಿ ಸವಾಲುಗಳು ಸೃಷ್ಟಿಯಾದವು. ಮತಗಳು ಒಡೆದು ಹೋಗುವ ಜೊತೆಗೆ ಕ್ಷೇತ್ರಗಳು ಕೈತಪ್ಪುವ ಭೀತಿ ಎದುರಾಗಿತ್ತು.
ಇದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿಯಿಂದ ಸ್ಪರ್ಧಿಸಿ ಕೆಆರ್ಪಿಪಿಯಿಂದ ರೆಡ್ಡಿಯವರು ಮಾತ್ರವೇ ಗೆದ್ದರು. ಬಳ್ಳಾರಿ ನಗರ ಕ್ಷೇತ್ರದಿಂದ ಬಿಜೆಪಿಗೆ ವಿರುದ್ಧ ಪತ್ನ ಲಕ್ಷ್ಮೀ ಅರುಣಾ ಅವರನ್ನು ಅಖಾಡಕ್ಕಿಳಿಸಿ ಬಿಜೆಪಿಗೆ ಸೆಡ್ಡು ಹೊಡೆದಿದ್ದರು. ಇದೆಲ್ಲ ಗಮನಿಸಿರುವ ಬಿಜೆಪಿ ಮುಂದೆ ಹೀಗಾಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಕೆಆರ್ಪಿಪಿ ಸಂಸ್ಥಾಪಕರನ್ನು ಕರೆತರಲು ಕೇಂದ್ರ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರೆಡ್ಡಿ ಬಿಜೆಪಿ ಸೇರ್ಪಡೆಯ ಲಾಭ-ನಷ್ಟದ ಲೆಕ್ಕಾಚಾರ?
ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆತಂದರೆ ಪಕ್ಷದ ಮುಂದಿನ ಸವಾಲುಗಳು ಏನು?, ಇದರಿಂದ ಸ್ಥಳೀಯ ಮಟ್ಟದಲ್ಲಿ ಆಗುವ ಲಾಭಗಳು ಕುರಿತು ಚರ್ಚೆ ನಡೆಸಲಾಗಿದೆ. ಸದ್ಯ ರಾಜಕೀಯ ವಲಯದಲ್ಲಿ ಈ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ.
ರೆಡ್ಡಿಯನ್ನು ಕರೆತರುವ ಮೂಲಕ ಲೋಕಸಭಾ ಚುನಾವಣೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಮುಂದಾಗಿದೆ. ಇದರೊಂದಿಗೆ ನಂತರ ಬರಲಿರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಪದವಿಧರರ ಕ್ಷೇತ್ರದ ಚುನಾವಣೆಗಳಲ್ಲಿ ಸೀಟು ಭದ್ರಪಡಿಸಿಕೊಳ್ಳಲು, ತಮ್ಮ ಮತ ಬ್ಯಾಂಕ್ ಕೈತಪ್ಪದಂತೆ ರಣತಂತ್ರ ಹೆಣೆಯುತ್ತಿದೆ. ಸದ್ಯ ಈ ಕುರಿತು ಎಲ್ಲವು ಅಂತಿಮಗೊಳ್ಳಬೇಕಿದೆ.
ಕೆಆರ್ಪಿಪಿ ಕಾರ್ಯಕರ್ತರ ಗತಿ ಏನು?
ಇನ್ನೊಂದು ಸಮಸ್ಯೆ ಎಂದರೆ ಒಂದು ಗಾಲಿ ಜನಾರ್ಧನ್ ರೆಡ್ಡಿ ಅವರು ಬಿಜೆಪಿಗೆ ಸೇರ್ಪಡೆಯಾದರೆ, ಇತ್ತೀಚೆಗೆಷ್ಟೇ ರಚನೆಯಾದ ಜಿಲ್ಲಾಮಟ್ಟದ ಘಟಕ, ಅಧ್ಯಕ್ಷರು ಮತ್ತು ಕಾರ್ಯಕರ್ತರ ಗತಿ ಏನು. ಸಂಸ್ಥಾಪಕರನ್ನೇ ನಂಬಿ ಬಂದ ಅವರು ಬಿಜೆಪಿ ವಿರುದ್ಧ ಸೆಣಸಿ ತಮ್ಮ ಅಭ್ಯರ್ಥಿ ಗೆಲ್ಲಿಸುವಲ್ಲಿ ಶ್ರಮಿಸಿದ್ದಾರೆ. ಮುಂದೆ ಅವರ ನಡೆ ಹೇಗಿರಲಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications