Breaking: ಕುಮಾರಸ್ವಾಮಿ ಕಣ್ಣೀರಿಗೆ ಬಿಜೆಪಿ ವ್ಯಂಗ್ಯ, ಜೆಡಿಎಸ್ ತರಾಟೆ
ಬೆಂಗಳೂರು, ಆಗಸ್ಟ್ 01: ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರ ಆರೋಗ್ಯ ಸ್ಥಿತಿಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿರುವುದನ್ನು ವ್ಯಂಗ್ಯವಾಡಿದ ಬಿಜೆಪಿಗೆ ಜೆಡಿಎಸ್ ತಿರುಗೇಟು ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರ ಆರೋಗ್ಯ ಸ್ಥಿತಿಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಚ್. ಡಿ ರೇವಣ್ಣ ಕಣ್ಣೀರು ಹಾಕಿದ್ದರು.
ಈ ಘಟನೆಯ ಸುದ್ದಿಯನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ, ' ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ!' ಎಂದು ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್ ಕಣ್ಣೀರೋತ್ಸವ ಎಂದು ಹ್ಯಾಶ್ಟ್ಯಾಗ್ ಬಳಸಿದೆ.

'ಒಂದೆಡೆ ಜನತಾ ಜಲಧಾರೆ. ಮತ್ತೊಂದೆಡೆ ಕಣ್ಣೀರಧಾರೆ. ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ!. ಎಂದಿದೆ.
"ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು. ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ!' ಎಂದು ವ್ಯಂಗ್ಯವಾಡಿದೆ.
ಇದಕ್ಕೆ ಕೆಂಡಕಾರಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್ಖಾತೆಯಿಂದ ಕರ್ನಾಟಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.
"ಅರವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ತಂದೆಯ ವಯೋಸಹಜ ಅನಾರೋಗ್ಯ ಕಂಡು ಯಾವುದೇ ಮಕ್ಕಳಿಗೂ ನೋವಾಗದೇ ಇರದು, ಇಂತಹ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಒಂದೆರಡು ಹನಿ ಕಣ್ಣೀರು ಹಾಕಿದ್ದಾರೆ, ಇದರಲ್ಲಿ ವ್ಯಂಗ್ಯ ಮಾಡುವಂತದ್ದೇನೂ ಇಲ್ಲ. ಆದರೆ ಎಲ್ಲದಕ್ಕೂ ವ್ಯಂಗ್ಯ ಮಾಡೋದು ಈ ಮಾನಗೆಟ್ಟ ಕರ್ನಾಟಕ ಬಿಜೆಪಿಗೆ ಹೊಸದೇನೂ ಅಲ್ಲ" ಎಂದಿದೆ.
ಅರವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ತಂದೆಯ ವಯೋಸಹಜ ಅನಾರೋಗ್ಯ ಕಂಡು ಯಾವುದೇ ಮಕ್ಕಳಿಗೂ ನೋವಾಗದೇ ಇರದು, ಇಂತಹ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಒಂದೆರಡು ಹನಿ ಕಣ್ಣೀರು ಹಾಕಿದ್ದಾರೆ, ಇದರಲ್ಲಿ ವ್ಯಂಗ್ಯ ಮಾಡುವಂತದ್ದೇನೂ ಇಲ್ಲ. ಆದರೆ ಎಲ್ಲದಕ್ಕೂ ವ್ಯಂಗ್ಯ ಮಾಡೋದು ಈ ಮಾನಗೆಟ್ಟ @BJP4Karnataka ಕ್ಕೇ ಹೊಸದೇನೂ ಅಲ್ಲ. https://t.co/YQaivQ58hF
— Janata Dal Secular (@JanataDal_S) August 1, 2022
"ಕುಮಾರಸ್ವಾಮಿ ಅವರು ತಂದೆಯ ಸ್ಥಿತಿ ನೆನೆದು ತಾವು ಕಣ್ಣೀರು ಹಾಕಿದ್ದಾರೆಯೇ ಹೊರತು ಕಂಡವರ ಮಕ್ಕಳನ್ನು ಕೊಮುದಳ್ಳುರಿಗೆ ತಳ್ಳಿ ಪ್ರಾಣ ತೆಗೆದು ಅವರ ಕುಟುಂಬದವರ ಬಳಿ ಕಣ್ಣೀರು ಹಾಕಿಸಿಲ್ಲ, ನಿಮ್ಮದೇ ಶಾಸಕ ರೇಣುಕಾಚಾರ್ಯ ಹೇಳಿದಂತೆ ಪ್ರವೀಣ್ ನೆಟ್ಟೂರ ಹತ್ಯೆಯನ್ನು ನೋಡಿ ಅಸಹಾಯಕತೆಯಿಂದ ಬೊಮ್ಮಾಯಿಯಂತೆ ಕಛೇರಿಯಲ್ಲಿ ಕೂತು ಕಣ್ಣೀರು ಹಾಕಿಲ್ಲ" ಎಂದು ಆಕ್ರೋಶ ಹೊರಹಾಕಿದೆ.
Recommended Video
ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಸೋಮನಹಳ್ಳಿಯಲ್ಲಿ ಜಾತ್ಯಾತೀತ ಜನತಾದಳದ ಬೃಹತ್ ಸಮಾವೇಶ ನಡೆಯಿತು. ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಭಾಗವಹಿಸಿರಲಿಲ್ಲ. ನೇರ ಪ್ರಸಾರವನ್ನು ವೀಕ್ಷಿಸುತ್ತಿದ್ದ ದೇವೇಗೌಡರನ್ನು ಪರದೆ ಮೇಲೆ ತೋರಿಸಲಾಗುತ್ತಿತ್ತು. ಇದನ್ನು ನೋಡಿ ತಮ್ಮ ತಂದೆಯ ಅನಾರೋಗ್ಯ ನೆನೆದು ಇಬ್ಬರು ಅಣ್ಣತಮ್ಮಂದಿರು ಭಾವುಕರಾಗಿದ್ದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications