ಇಂದೇ ವಿಶ್ವಾಸಮತ ಯಾಚನೆಗೆ ಬಿಜೆಪಿ ಪಟ್ಟು, ಇಕ್ಕಟ್ಟಿನಲ್ಲಿ ಸ್ಪೀಕರ್
ಬೆಂಗಳೂರು, ಜುಲೈ 15: ಇಂದೇ ವಿಶ್ವಾಸಮತ ಯಾಚನೆಗೆ ಸಮಯ ಕೊಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಬಿಜೆಪಿಯು ಇಂದು ಒತ್ತಾಯಿಸಿದೆ. ಸೋಮವಾರದ ಕಲಾಪ ಆರಂಭಕ್ಕೂ ಮುನ್ನವೇ ಸ್ಪೀಕರ್ ಅವರನ್ನು ಭೇಟಿಯಾಗಿ ಯಡಿಯೂರಪ್ಪ ಅವರು ಈ ಬಗ್ಗೆ ಮನವಿ ಮಾಡಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ವಿಶ್ವಾಸಮತಕ್ಕಾಗಿ ಒತ್ತಾಯ ಮಾಡಲಿದ್ದಾರೆ. ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಇದ್ದ ಕಾರಣ ಬಹುತೇಕ ಶಾಂತರೀತಿಯಿಂದ ನಡೆದ ಕಲಾಪ ಇಂದು ಎರಡನೇ ದಿನ ರಣರಂಗವಾಗುವ ನಿರೀಕ್ಷೆ ಇದೆ.
ಆಡಳಿತ ಪಕ್ಷದ ಮೇಲೆ ಸವಾರಿ ನಡೆಸಲು ಬಿಜೆಪಿಯು ಸರ್ವ ಸನ್ನಧ್ಧವಾಗಿದೆ. ಯಡಿಯೂರಪ್ಪ ಅವರು ಬಿಜೆಪಿ ಮುಖಂಡರ ಸಭೆ ಕರೆದು ಸಲಹೆ, ಸೂಚನೆಗಳನ್ನು ನೀಡಿದ್ದು, ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಇಂದೇ ಮಾಡುವಂತೆ ಪಟ್ಟು ಹಿಡಿಯಬೇಕೆಂದು ಸೂಚನೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಸಹ ಬಿಜೆಪಿಗೆ ಪ್ರತಿಯಾಗಿ ರಣತಂತ್ರ ಹೆಣೆದುಕೊಂಡೇ ವಿಧಾನಸೌಧಕ್ಕೆ ಆಗಮಿಸಿದ್ದು, ಬಿಜೆಪಿಯ ಒತ್ತಾಡಕ್ಕೆ ಪ್ರತಿ ಒತ್ತಡದ ತಂತ್ರವನ್ನು ಹೇರಿ, ವಿಶ್ವಾಸಮತ ಯಾಚನೆ ಬುಧವಾರ ಸಮಯ ನಿಗದಿ ಪಡಿಸುವಂತೆ ಸ್ಪೀಕರ್ ಮೇಲೆ ಒತ್ತಡ ಹೇರಲು ಸರ್ವ ಸಜ್ಜಾಗಿದೆ.
ನಾಳೆ (ಮಂಗಳವಾರ) ಸುಪ್ರಿಂಕೋರ್ಟ್ನಲ್ಲಿ ಅತೃಪ್ತ ಶಾಸಕರ ಅರ್ಜಿಯು ವಿಚಾರಣೆಗೆ ಬರಲಿದ್ದು, ಸಂಜೆ ವೇಳೆಗೆ ಆದೇಶ ಹೊರಬೀಳಲಿದೆ. ಹಾಗಾಗಿ ಸುಪ್ರಿಂ ಕೋರ್ಟ್ ಆದೇಶ ಬಂದ ನಂತರ ರಾಜಕೀಯ ಚಿತ್ರಣ ಬದಲಾಗುವ ನಿರೀಕ್ಷೆ ಇರುವ ಕಾರಣ, ವಿಶ್ವಾಸಮತ ಯಾಚನೆಯನ್ನು ಮಂಗಳವಾರದ ನಂತರದ ದಿನ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.
ಒಟ್ಟಿನಲ್ಲಿ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು ಮತ್ತೆ ಇಕ್ಕಟ್ಟಿನಲ್ಲಿ ಸಿಲುಕಿದ್ದು, ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಪಡಿಸುವುದು ಸ್ಪೀಕರ್ ಅವರ ವಿವೇಚನೆಗೆ ಬಿಟ್ಟಿರುವ ಕಾರಣ, ಅವರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications