ಇಂದೇ ವಿಶ್ವಾಸಮತ ಯಾಚನೆಗೆ ಬಿಜೆಪಿ ಪಟ್ಟು, ಇಕ್ಕಟ್ಟಿನಲ್ಲಿ ಸ್ಪೀಕರ್
ಬೆಂಗಳೂರು, ಜುಲೈ 15: ಇಂದೇ ವಿಶ್ವಾಸಮತ ಯಾಚನೆಗೆ ಸಮಯ ಕೊಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಬಿಜೆಪಿಯು ಇಂದು ಒತ್ತಾಯಿಸಿದೆ. ಸೋಮವಾರದ ಕಲಾಪ ಆರಂಭಕ್ಕೂ ಮುನ್ನವೇ ಸ್ಪೀಕರ್ ಅವರನ್ನು ಭೇಟಿಯಾಗಿ ಯಡಿಯೂರಪ್ಪ ಅವರು ಈ ಬಗ್ಗೆ ಮನವಿ ಮಾಡಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ವಿಶ್ವಾಸಮತಕ್ಕಾಗಿ ಒತ್ತಾಯ ಮಾಡಲಿದ್ದಾರೆ. ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಇದ್ದ ಕಾರಣ ಬಹುತೇಕ ಶಾಂತರೀತಿಯಿಂದ ನಡೆದ ಕಲಾಪ ಇಂದು ಎರಡನೇ ದಿನ ರಣರಂಗವಾಗುವ ನಿರೀಕ್ಷೆ ಇದೆ.
ಆಡಳಿತ ಪಕ್ಷದ ಮೇಲೆ ಸವಾರಿ ನಡೆಸಲು ಬಿಜೆಪಿಯು ಸರ್ವ ಸನ್ನಧ್ಧವಾಗಿದೆ. ಯಡಿಯೂರಪ್ಪ ಅವರು ಬಿಜೆಪಿ ಮುಖಂಡರ ಸಭೆ ಕರೆದು ಸಲಹೆ, ಸೂಚನೆಗಳನ್ನು ನೀಡಿದ್ದು, ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಇಂದೇ ಮಾಡುವಂತೆ ಪಟ್ಟು ಹಿಡಿಯಬೇಕೆಂದು ಸೂಚನೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಸಹ ಬಿಜೆಪಿಗೆ ಪ್ರತಿಯಾಗಿ ರಣತಂತ್ರ ಹೆಣೆದುಕೊಂಡೇ ವಿಧಾನಸೌಧಕ್ಕೆ ಆಗಮಿಸಿದ್ದು, ಬಿಜೆಪಿಯ ಒತ್ತಾಡಕ್ಕೆ ಪ್ರತಿ ಒತ್ತಡದ ತಂತ್ರವನ್ನು ಹೇರಿ, ವಿಶ್ವಾಸಮತ ಯಾಚನೆ ಬುಧವಾರ ಸಮಯ ನಿಗದಿ ಪಡಿಸುವಂತೆ ಸ್ಪೀಕರ್ ಮೇಲೆ ಒತ್ತಡ ಹೇರಲು ಸರ್ವ ಸಜ್ಜಾಗಿದೆ.
ನಾಳೆ (ಮಂಗಳವಾರ) ಸುಪ್ರಿಂಕೋರ್ಟ್ನಲ್ಲಿ ಅತೃಪ್ತ ಶಾಸಕರ ಅರ್ಜಿಯು ವಿಚಾರಣೆಗೆ ಬರಲಿದ್ದು, ಸಂಜೆ ವೇಳೆಗೆ ಆದೇಶ ಹೊರಬೀಳಲಿದೆ. ಹಾಗಾಗಿ ಸುಪ್ರಿಂ ಕೋರ್ಟ್ ಆದೇಶ ಬಂದ ನಂತರ ರಾಜಕೀಯ ಚಿತ್ರಣ ಬದಲಾಗುವ ನಿರೀಕ್ಷೆ ಇರುವ ಕಾರಣ, ವಿಶ್ವಾಸಮತ ಯಾಚನೆಯನ್ನು ಮಂಗಳವಾರದ ನಂತರದ ದಿನ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.
ಒಟ್ಟಿನಲ್ಲಿ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು ಮತ್ತೆ ಇಕ್ಕಟ್ಟಿನಲ್ಲಿ ಸಿಲುಕಿದ್ದು, ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಪಡಿಸುವುದು ಸ್ಪೀಕರ್ ಅವರ ವಿವೇಚನೆಗೆ ಬಿಟ್ಟಿರುವ ಕಾರಣ, ಅವರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications