ಲೋಕಸಭೆ ಚುನಾವಣೆ ಕುರಿತು ಬಿಜೆಪಿಯ ಮಹತ್ವದ ಭವಿಷ್ಯ ನುಡಿದ ಸಚಿವ ಈಶ್ವರ ಖಂಡ್ರೆ

ದಾವಣಗೆರೆ,ನವೆಂಬರ್‌ 10: ಮುಂಬರುವ 2024 ರ ಲೋಕಸಭೆ ಚುನಾವಣೆಗೆ ನಾವು ಕೂಡ ಭರ್ಜರಿಯಾಗಿ ತಯಾರಿಯನ್ನ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಧೂಳೀಪಟವಾಗಲಿದೆ ಎಂದು ಬಿಜೆಪಿ ವಿರುದ್ದ ಸಚಿವ ಈಶ್ವರ್ ಖಂಡ್ರೆ ಭವಿಷ್ಯ ನುಡಿದಿದ್ದಾರೆ.

ಲೋಕ ಸಭೆ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಮತ್ತು ಮುಂಚೂಣಿ ಮುಖಂಡರ ಸಭೆಯನ್ನ ಕರೆಯಲಾಗಿತ್ತು. ಸಭೆಗೆ ಆಗಮಿಸಿದ್ದಸಚಿವ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ಹರಿಹಾಯ್ದರು. ಈ ಬಾರಿ ಮಳೆಯ ಕೊರತೆಯಿಂದ ಇಡೀ ರಾಜ್ಯವೇ ಬರದಿಂದ ತತ್ತರಿಸಿ ಹೋಗಿದೆ. ಮುಂಗಾರು ಸಂಪೂರ್ಣ ನಷ್ಟವಾಗಿದ್ದು, ಹಿಂಗಾರು ನಷ್ಟವಾಗುವ ಲಕ್ಷಣಗಳಿವೆ.

BJP Will Be Crushed In The State This Time Says Minister Eshwar Khandre

ಬರದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬರ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರದ ಪ್ರಸ್ತಾವನೆ ಕಳಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ನಯಾ ಪೈಸೆ ಹಣವನ್ನ ಬಿಡುಗಡೆ ಮಾಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಇಂತಹ ಬರ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋರ ಅನ್ಯಾಯ ಮಾಡಿದ್ದು, ಆದ್ರು ಕೂಡ ರಾಜ್ಯದ ಸಂಸದರು ತುಟಿಪಿಟಿಕ್ ಅನ್ನುತ್ತಿಲ್ಲ. ಕೇವಲ ಬಾಯಿಗೆ ತುಪ್ಪ ಒರೆಸುವ ಕೆಲಸ ಮಾಡುತ್ತಿದ್ದಾರೆ. ಇತ್ತ ಬಿಜೆಪಿ ನಡೆಸುತ್ತಿರುವ ಬರ ಅಧ್ಯಯನವೇ ಮೋಸ, ಬಿಜೆಪಿಗೆ ಬರದ ಬಗ್ಗೆ ಕಳಕಳಿ ಇದ್ದರೆ ಕೇಂದ್ರದಿಂದ ಅನುದಾನ ತರಿಸಲಿ. ಬರದ ಅನುದಾನದ ಬಗ್ಗೆ ಮಾಹಿತಿ ನೀಡಲು ನಮ್ಮ ಸಿಎಂ ಹಾಗೂ ಸಚಿವರು ಕೇಂದ್ರಕ್ಕೆ ಹೋದರೆ ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡುತ್ತಿಲ್ಲ.

ಇದು ಬಿಜೆಪಿಯ ರೈತ ವಿರೋಧಿ ನೀತಿಯನ್ನ ತೋರಿಸುತ್ತಿದೆ. ಇದನ್ನ ಬಿಟ್ಟು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ಬರದ ಅನುದಾನ ಬಿಡುಗಡೆ ಮಾಡಬೇಕು ಎಂದು ದಾವಣಗೆರೆಯಲ್ಲಿ ಸಚಿವ ಈಶ್ವರ ಖಂಡ್ರೆ ಒತ್ತಾಯ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಸಚಿವ ಈಶ್ವರ ಖಂಡ್ರೆ ಟಿಕೆಟ್ ಆಕಾಂಕ್ಷಿಗಳು ಮತ್ತು ಜಿಲ್ಲೆಯ ಮುಂಚೂಣಿ ಘಟಕದ ಮುಖಂಡರ ಸಭೆಯನ್ನ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸಭೆ ನಡೆಸಿದ ಈಶ್ವರ್ ಖಂಡ್ರೆ, ಮಾಹಿತಿಯನ್ನ ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+