ಸೌಜನ್ಯ ಕೊಲೆ ಪ್ರಕರಣ; ಸುಪ್ರೀಂ ಮೆಟ್ಟಿಲೇರಿದರೆ ಹೋರಾಟದ ಖರ್ಚಿನ ಹೊಣೆ ಹೊತ್ತ ಬಿ ವೈ ವಿಜಯೇಂದ್ರ
ಬೆಂಗಳೂರು, ಸೆಪ್ಟೆಂಬರ್ 04: ಬಿಜೆಪಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕೋಟ್ಯಂತರ ಭಕ್ತರ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಸರಕಾರಕ್ಕೆ ಸಮೀರ್ನಂಥ ದೇಶದ್ರೋಹಿಯನ್ನು ಒದ್ದು ಒಳಗೆ ಹಾಕಲು ಆಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರಕಾರವು ಸಮೀರ್ ಜಾಮೀನು ರದ್ದು ಮಾಡುವಂತೆ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯನವರ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದರು. ಇದೆಲ್ಲ ಹಿನ್ನೆಲೆಯಲ್ಲಿ ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ತಿಳಿಸಿದರು.
ಸೌಜನ್ಯ ವಿಚಾರ ಬಂದಾಗ ರಾಜ್ಯಾಧ್ಯಕ್ಷನಾಗಿ ನನಗೂ ಅನಿಸಿತ್ತು. ಸೌಜನ್ಯ ತಾಯಿ, ಕುಟುಂಬದ ಸದಸ್ಯರನ್ನು ಭೇಟಿ ಮಾಡಬೇಕೆಂದು ನಾನು ತೀರ್ಮಾನ ಮಾಡಿದೆ. ಸೌಜನ್ಯ ಬರ್ಬರ ಹತ್ಯೆಯಾಗಿ 12 ವರ್ಷ ಕಳೆದರೂ, ತಡವಾಗಿದ್ದರೂ, ಮಾನವೀಯತೆ ದೃಷ್ಟಿಯಿಂದ ಅಧ್ಯಕ್ಷನಾಗಿ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಮುಂದೆ ಸುಪ್ರೀಂ ಕೋರ್ಟಿಗೆ ಹೋದರೆ ಅದರ ವೆಚ್ಚ ಭರಿಸುವ ಭರವಸೆ ಕೊಟ್ಟಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.

ರಾಜ್ಯದ ಮುಖ್ಯಮಂತ್ರಿಗಳು ಆ ಕೋಟ್ಯಂತರ ಭಕ್ತರ ತಾಳ್ಮೆ, ಸಹನೆಯನ್ನು ಪರೀಕ್ಷೆ ಮಾಡಲು ಹೋಗಬಾರದು ಎಂದು ಭಕ್ತರ ಪರವಾಗಿ ಕೋರಿದರು. ನೀವು ಪ್ರಾಮಾಣಿಕರೇ ಆಗಿದ್ದರೆ ಯಾಕೆ ಆ ಸಮೀರ್ ಗೆ ಜಾಮೀನು ಆಗಿದೆ ಎಂದು ಕೈ ಕಟ್ಟಿ ಕುಳಿತಿದ್ದೀರಿ? ನೀವು ನಿಜವಾಗಿಯೂ ಪ್ರಾಮಾಣಿಕರೇ ಆಗಿದ್ದರೆ ಸಮೀರ್ನ ಜಾಮೀನು ರದ್ದು ಅರ್ಜಿ ಯಾಕೆ ಸಲ್ಲಿಸಿಲ್ಲ? ಎಂದು ಬಿ ವೈ ವಿಜಯೇಂದ್ರ ಅವರು ಕೇಳಿದರು.
ತನಿಖೆ ಪಾರದರ್ಶಕವಾಗಿ ಆಗಬೇಕೆಂದು ಬಿಜೆಪಿ ಸುಮ್ಮನೆ ಇದ್ದಿದ್ದೇ ತಪ್ಪಾಯಿತೇ ಎಂದು ಪ್ರಶ್ನಿಸಿದರು. ಸಮೀರ್ ಬೇಲ್ ರದ್ದತಿಗೆ ಸರಕಾರ ಯಾಕೆ ಮೀನಾಮೇಷ ಮಾಡುತ್ತಿದೆ ಎಂದು ಕೇಳಿದರು. ಬಿಜೆಪಿಯಿಂದ ಧರ್ಮಸ್ಥಳ ಚಲೋ ನಮ್ಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಅಪಪ್ರಚಾರದ ಕಾರಣದಿಂದ ಶ್ರೀ ಮಂಜುನಾಥ ಸ್ವಾಮಿಯ ಕೋಟ್ಯಂತರ ಭಕ್ತರಿಗೆ ನೋವಾಗುತ್ತಿದೆ. ಮತ್ತೊಂದು ಕಡೆ ರಾಜ್ಯ ಸರಕಾರದ ಎಸ್ಐಟಿ ತನಿಖೆ ದಿನೇದಿನೇ ತಡವಾಗುತ್ತಿದೆ. ಇದರ ಪರಿಣಾಮವಾಗಿ ಅಸಂಖ್ಯಾತ ಭಕ್ತರು ನೊಂದಿದ್ದರು. ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು ನಾವು ಧರ್ಮಸ್ಥಳ ಚಲೋ ಕರೆ ನೀಡಿದ್ದೆವು. ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಂದ, ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಬಂದಿದ್ದರು. ಹಿಂದೂ ಕಾರ್ಯಕರ್ತರು ಬಂದಿದ್ದಾರೆ. ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದೆ ಎಂದು ವಿವರಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications