2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು?: ಭವಿಷ್ಯ ನುಡಿದ ವಿಜಯೇಂದ್ರ
ಬೆಂಗಳೂರು: 2028ರಲ್ಲಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಕಾರ್ಯಕ್ರಮವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿದ್ದೇವೆ. ನಾವ್ಯಾರೂ ಆತಂಕ ಪಡಬೇಕಿಲ್ಲ. ರಾಜ್ಯದ ಜನವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಹೆಚ್ಚಾಗಿದೆ. ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿಜೀ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು. ಕಾಂಗ್ರೆಸ್ ಪಕ್ಷದ ಅಪಪ್ರಚಾರಗಳ ನಡುವೆಯೂ ಬಿಜೆಪಿ ನೇತೃತ್ವದ ಕೇಂದ್ರದ ಎನ್ಡಿಎ ಸರಕಾರವು ಭ್ರಷ್ಟಾಚಾರರಹಿತ ಆಡಳಿತವನ್ನು ನರೇಂದ್ರ ಮೋದಿಯವರು ನೀಡುತ್ತಿದ್ದಾರೆ. ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ರಾಜ್ಯದ ಪಟ್ಟಣ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದರು. ಇವಿಎಂ ಇರಲಿ, ಬ್ಯಾಲೆಟ್ ಇರಲಿ ಕಾಂಗ್ರೆಸ್ಸಿನ ಹಣೆಬರಹ ಬದಲಾಗಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅವರು ಹೇಳಿದರು.
ಅಟಲ್ ಜೀ, ಲಾಲ್ ಕೃಷ್ಣ ಅಡ್ವಾಣಿ ಜೀ ಅವರಂಥ ಶ್ರೇಷ್ಠರ ನಾಯಕತ್ವ ನಮಗೆ ಸಿಕ್ಕಿದೆ. ಮೋದಿ , ಅಮಿತ್ ಶಾ , ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ದಾಪುಗಾಲು ಹಾಕುತ್ತಿದೆ. ಪಶ್ಚಿಮ ಬಂಗಾಲದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿನವರು ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎನ್ನುತ್ತಾರೆ. ವಾಜಪೇಯಿ, ಮೋದಿಜೀ ಅಥವಾ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಯಾರು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಾರೋ ಅಂಥ ದೇಶದ್ರೋಹಿಗಳನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು.
ಅಟಲ್ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಹಲವಾರು ಬಾರಿ ಅವರು ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದರು. ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ಯಡಿಯೂರಪ್ಪ, ಶಂಕರಮೂರ್ತಿ, ರಾಮಚಂದ್ರೇಗೌಡ, ಜಗದೀಶ ಶೆಟ್ಟರ್, ಪಕ್ಷದ ಹಿರಿಯರಿಗೆ ಪ್ರೇರಣೆ ನೀಡಿದ ಮಹಾನ್ ನಾಯಕರು ಎಂದು ಹೇಳಿದರು.
ಕರ್ನಾಟಕವು ಮುಂದೊಂದು ದಿನ ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರ ಕೋಟೆ ಆಗಲಿದೆ ಎಂಬ ದೂರದೃಷ್ಟಿತ್ವ ಅವರಲ್ಲಿತ್ತು. ಕಾರ್ಯಕರ್ತರ ಕುರಿತು ಅದಮ್ಯ ವಿಶ್ವಾಸ ಅವರದಾಗಿತ್ತು. ಜವಾಹರಲಾಲ್ ನೆಹರೂ ಅವರು ಹಿಂದೆ ಪ್ರಧಾನಮಂತ್ರಿಯಾಗಿದ್ದಾಗ ಅಟಲ್ ಜೀ ಅವರ ಮಾತು, ಭಾಷಣವನ್ನು ಸಂಸತ್ತಿನಲ್ಲಿ ಕೇಳಿದಾಗ ಮುಂದೊಂದು ದಿನ ಅಟಲ್ ಅವರು ಪ್ರಧಾನಿ ಆಗಲಿದ್ದಾರೆ ಎಂದು ತಿಳಿಸಿದ್ದನ್ನು ನೆನಪಿಸಿದರು. ಸೋಲಿನಿಂದ ಅಂಜುವಂಥ ಪ್ರಶ್ನೆಯೇ ಇಲ್ಲ ಎಂದು ಅಟಲ್ ಜೀ ಅವರು ಹಿಂದೆ ಹೇಳಿದ್ದರು ಎಂದು ವಿವರ ನೀಡಿದರು. ಬಿಜೆಪಿ ದೃಢವಾಗಿ ಕಟ್ಟುವ ಆತ್ಮವಿಶ್ವಾಸವನ್ನು ಕಾರ್ಯಕರ್ತರಲ್ಲಿ ಅವರು ತುಂಬಿದ್ದರು ಎಂದು ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications