Get Updates
Get notified of breaking news, exclusive insights, and must-see stories!

Karnataka Elections 2023; 150ಕ್ಕೂ ಹೆಚ್ಚು ಸ್ಥಾನವನ್ನ ಬಿಜೆಪಿ ಗೆಲ್ಲಲಿದೆ: ಧರ್ಮೇಂದ್ರ ಪ್ರಧಾನ್

ರಾಜ್ಯ ಚುನಾವಣಾ ಉಸ್ತುವಾರಿಯಾದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರು,ಫೆಬ್ರವರಿ23: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷವು ಉತ್ತಮ ಸಂಘಟನೆಯನ್ನು ಹೊಂದಿದೆ. ರೈತರು, ಮಹಿಳೆಯರು, ಎಸ್‍ಸಿ, ಎಸ್‍ಟಿ, ಒಬಿಸಿ ಸಮುದಾಯದ ಅಭಿವೃದ್ಧಿ, ಕರಾವಳಿ ಪ್ರದೇಶ ಸೇರಿ ರಾಜ್ಯದ ಅಭಿವೃದ್ಧಿಗೆ ಮಾಡಿದ ಕೆಲಸಗಳು ಮಾತ್ರವಲ್ಲದೆ ಮೋದಿಜಿ ಅವರ ನಾಯಕತ್ವದಿಂದ ನಮ್ಮ ಗೆಲುವು ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 BJP Will Have More Than 150 Seats In The Next Elections Says Dharmendra Pradhan

ಕರ್ನಾಟಕ ರಾಜ್ಯವು ಹಲವು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿಜಿ ಅವರ ಜೊತೆಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಮೋದಿ ಅವರ ಸರಕಾರ, ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರಕಾರಗಳು ಮಾಡಿದ ಸಾಧನೆಯ ಹಿನ್ನೆಲೆ ನಮಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕೆಲವು ಬಾರಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದು, ಇನ್ನಷ್ಟು ಬಾರಿ ಬರಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಪಕ್ಷಕ್ಕಾಗಿ ಪ್ರಚಾರ ಮಾಡಲಿದ್ದಾರೆ. ಶೀಘ್ರದಲ್ಲೇ ಪ್ರಚಾರ ಯಾತ್ರೆಗಳನ್ನು ಆರಂಭಿಸಲಾಗುತ್ತದೆ. ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ನಾಯಕರು ಭಾಗವಹಿಸಿ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದರು.

 BJP Will Have More Than 150 Seats In The Next Elections Says Dharmendra Pradhan

ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮನ್‍ಸುಖ್ ಮಾಂಡವೀಯ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯ ಮುಖ್ಯ ವಕ್ತಾರ ಮಹೇಶ್ ಎಂ.ಜಿ ಅವರು ಹಾಜರಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ.

ಮುಂಬರುವ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಚುನಾವಣೆಗೆ ಯಾವ ರೀತಿಯಾಗಿ ಪಕ್ಷವನ್ನಸಜ್ಜುಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಹಾಗೂ ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯ ಬಜೆಟ್‌ ಅಧಿವೇಶನದ ಬಳಿಕ ರಾಜ್ಯದ ನಾಲ್ಕು ಭಾಗದಲ್ಲಿ ರಥಯಾತ್ರೆಯ ರೂಪರೇಷೆ ಹಾಗೂ ಚುನಾವಣಾ ತಂತ್ರಗಾರಿಗೆ ಸೇರಿದಂತೆ ಬೃಹತ್ ಸಮಾವೇಶ ಹಾಗೂ ಚುನಾವಣೆಯ ತಂತ್ರಗಾರಿಗೆಗೆ ಇಂದಿನಿಂದ ಸಜ್ಜುಗೊಳಿಸುವ ನಿಟ್ಟಿನಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+