ಕರ್ನಾಟಕಕ್ಕಾಗಿ ಅಮಿತ್ ಶಾರಿಂದ 30:30:40 ಸೂತ್ರ ಪ್ರಕಟ
ಕರ್ನಾಟಕ ಬಿಜೆಪಿಯಲ್ಲಿನ ಬಿಕ್ಕಟ್ಟು ಉಪಶಮನ, 2018ರ ಅಸೆಂಬ್ಲಿ ಚುನಾವಣೆಯಲ್ಲಿ ಗೆಲುವಿಗಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು 30:30:40 ಸೂತ್ರವನ್ನು ಪ್ರಕಟಿಸಿದ್ದಾರೆ. ಏನಿದು ಸೂತ್ರ? ಮುಂದೆ ಓದಿ...
ಬೆಂಗಳೂರು, ಮೇ 27: ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು' ಮುಂದಿನ ಸಿಎಂ ಅಭ್ಯರ್ಥಿ' ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದು ನೆನಪಿರಬೇಕಲ್ಲವೇ, ಇದಾದ ಬಳಿಕ ಮತ್ತೊಂದು ಮಹತ್ವದ ಘೋಷಣೆಯನ್ನು ಅಮಿತ್ ಹೊರಡಿಸಿದ್ದಾರೆ.
ಕರ್ನಾಟಕ ಬಿಜೆಪಿಯಲ್ಲಿನ ಬಿಕ್ಕಟ್ಟು ಉಪಶಮನ, 2018ರ ಅಸೆಂಬ್ಲಿ ಚುನಾವಣೆಯಲ್ಲಿ ಗೆಲುವಿಗಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು 30:30:40 ಸೂತ್ರವನ್ನು ಪ್ರಕಟಿಸಿದ್ದಾರೆ. ಏನಿದು ಸೂತ್ರ? ಮುಂದೆ ಓದಿ...
ಕರ್ನಾಟಕ ಬಿಜೆಪಿಯಲ್ಲಿದ್ದ ಬಿಕ್ಕಟ್ಟು ಈಗ ತಕ್ಕ ಮಟ್ಟಿಗೆ ಶಮನವಾಗಿದೆ ಎಂಬ ಭರವಸೆಯೊಂದಿಗೆ ಅಮಿತ್ ಶಾ ಅವರು ಮುಂದಿನ ಮಹತ್ವ ಘಟ್ಟವಾದ ಟಿಕೆಟ್ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಅಸೆಂಬ್ಲಿ ಟಿಕೆಟ್ ಹಂಚಿಕೆಗಾಗಿಯೇ ಬಿಕ್ಕಟ್ಟು ಉಂಟಾಗಿದ್ದು, ಇದರ ಪರಿಹಾರಕ್ಕಾಗಿ 30:30:40 ಸಮತೋಲನ ಸೂತ್ರವನ್ನು ಮುಂದಿಟ್ಟಿದ್ದಾರೆ. ಹೈಕಮಾಂಡ್ ಹೇಳಿದ ಮೇಲೆ ತಲೆತಗ್ಗಿಸಿ ಪಾಲಿಸುವುದು ರಾಜ್ಯ ನಾಯಕರ ವಿಧೇಯತೆಯಾಗಿರುವುದರಿಂದ ಬಹುತೇಕ ಈ ಸೂತ್ರ ಮುಂದಿನ ಚುನಾವಣೆ ಗೆಲುವಿಗೂ ಸಿದ್ಧಸೂತ್ರವಾಗಲಿದೆ.
2018ರ ವಿಧಾನಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ಈ ಯೋಜನೆಯಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಟಿಕೆಟ್ ಹಂಚಿಕೆ ವಿಷಯದಲ್ಲಿ ಶೇ 30ರಷ್ಟು ಪಾಲು ಹೊಂದಿದ್ದಾರೆ.ಶೇ 30ರಷ್ಟು ಆರೆಸ್ಸೆಸ್ ಸೂಚಿಸಿದ ಅಭ್ಯರ್ಥಿಗಳಿಗೆ ಸಿಗಲಿದೆ. ಶೇ 40ರಷ್ಟು ಹೈಕಮಾಂಡ್ ತನ್ನಲ್ಲೇ ಉಳಿಸಿಕೊಳ್ಳಲಿದೆ. ಈ ರೀತಿ ಟಿಕೆಟ್ ಹಂಚಿಕೆಯಲ್ಲಿ ಸಮತೋಲನ ಕಾಯ್ದುಕೊಂಡು ಸಂಭಾವ್ಯ ಪಟ್ಟಿ ತಯಾರಿಸುವಂತೆ ಅಮಿತ್ ಶಾ ಅವರು ನಿರ್ದೇಶನ ನೀಡಿದ್ದಾರೆ. ಆದರೆ, ಅಂತಿಮ ನಿರ್ಧಾರ ಎಂದೆಂದಿಗೂ ಬಿಜೆಪಿ ಹೈಕಮಾಂಡ್ ನದ್ದಾಗಿರುತ್ತದೆ.
ಹೈಕಮಾಂಡ್ ತನ್ನ ಆಯ್ಕೆಯ ಅಭ್ಯರ್ಥಿಗಳನ್ನು ಸೂಚಿಸುವ ಮುನ್ನ ಹಿರಿಯ ನಾಯಕರಾದ ಕೆಎಸ್ ಈಶ್ವರಪ್ಪ, ಅನಂತ್ ಕುಮಾರ್, ಸದಾನಂದಗೌಡ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಹಾಗೂ ಆರ್ ಅಶೋಕ್ ಅವರ ಸಲಹೆಯನ್ನು ಪಡೆದುಕೊಳ್ಳಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications