ಬಿಜೆಪಿಯ ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಬಿಎಸ್ ಯಡಿಯೂರಪ್ಪ
ಬೆಂಗಳೂರು, ಜುಲೈ 5: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಾವು ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ, ಅದನ್ನು ಕೇಂದ್ರ ನಾಯಕತ್ವಕ್ಕೆ ಬಿಡಲಾಗಿದೆ, ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಎಚ್ಡಿ ಕುಮಾರಸ್ವಾಮಿ ಅವರೊಂದಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದಲ್ಲಿ ನಾವು ಒಟ್ಟಿಗೆ ಇದ್ದೇವೆ. ನಾವು ಕೇಂದ್ರ ನಾಯಕತ್ವದ ಅನುಮತಿಗಾಗಿ ಕಾಯುತ್ತಿದ್ದೇವೆ. ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ನಿರ್ಧರಿಸಲಿದ್ದು, ಮಂಗಳವಾರ ಸಂಜೆ ಅಥವಾ ಬುಧವಾರದೊಳಗೆ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಹೇಳಿದರು.
ಇಂದು ನಮ್ಮ ನಾಯಕರು ಬರುತ್ತಿದ್ದಾರೆ ಮತ್ತು ನಾವು ವಿರೋಧ ಪಕ್ಷದ ನಾಯಕನನ್ನು ನಿರ್ಧರಿಸುತ್ತೇವೆ ಮತ್ತು ನಾವು ಇಂದು ಸಂಜೆ ಅಥವಾ ನಾಳೆ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ನಾವು ಭಾವಿಸುತ್ತೇವೆ. ಹೆಚ್.ಡಿ.ಕುಮಾರಸ್ವಾಮಿ ಹೇಳುತ್ತಿರುವುದೆಲ್ಲವೂ ಸತ್ಯ ಮತ್ತು ಅವರ ಹೇಳಿಕೆಯನ್ನು ನಾನು ಬೆಂಬಲಿಸಲು ಬಯಸುತ್ತೇನೆ. ಕುಮಾರಸ್ವಾಮಿ ಮತ್ತು ನಾವು ಭವಿಷ್ಯದಲ್ಲಿ ಒಟ್ಟಾಗಿ ಹೋರಾಡುತ್ತೇವೆ ಎಂದು ಅವರು ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಅಧಿವೇಶನ ಪ್ರಾರಂಭವಾದರೂ ವಿರೋಧ ಪಕ್ಷದ ನಾಯಕರನ್ನು ಬಿಜೆಪಿ ಆಯ್ಕೆ ಮಾಡಿಲ್ಲ. ರಾಜ್ಯಾಧ್ಯಕ್ಷರ ಅಧಿಕಾರಾವಧಿ ಮುಗಿದರೂ ಹೊಸ ಅಧ್ಯಕ್ಷರು ನೇಮಕವಾಗಿಲ್ಲವೆಂಬ ಆರೋಪಗಳು ಬಿಜೆಪಿ ವಿರುದ್ಧ ಕೇಳಿಬಂದಿವೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾನಸಭೆ ಕಲಾಪ ನಡೆಯುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬೆಳವಣಿಗೆಗಳ ನಡುವೆಯೇ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ಕಸರತ್ತನ್ನು ಮುಂದುವರಿಸಿದೆ. ರಾಜ್ಯಾಧ್ಯಕ್ಷರ ಪಟ್ಟಕ್ಕೆ ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಿದ್ದಾರೆ. ಆದರೆ, ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶೋಭಾ ಕರಂದ್ಲಾಜೆ ಹೆಸರು ಮುನ್ನೆಲೆಗೆ ಬಂದಿರುವುದು ತೀವ್ರ ಕುತೂಹಲವನ್ನು ಕೆರಳಿಸಿದೆ. ವಿಶೇಷವಾಗಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶೋಭಾ ಅವರ ಹೆಸರನ್ನು ಹೈಕಮಾಂಡ್ಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಲಿಂಗಾಯತ ಸಮುದಾಯದಿಂದ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರೆ, ಜಾತಿ ಸಮೀಕರಣಗಳನ್ನು ಸರಿದೂಗಿಸಲು ಪಕ್ಷವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶೋಭಾ ಅವರ ಹೆಸರನ್ನು ಬಿಎಸ್ವೈ ಸೂಚಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಪಕ್ಷದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿಯಾಗಿದ್ದ ಶೋಭಾ ಕರಂದ್ಲಾಜೆ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿಕಟವರ್ತಿಯಾಗಿದ್ದಾರೆ. ಆದರೆ, ಕಳೆದ ಕೆಲ ವರ್ಷಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಶೋಭಾ ಕರಂದ್ಲಾಜೆ ಸಕ್ರಿಯರಾಗಿದ್ದಾರೆ. ಆದರೂ, ಶೋಭಾರನ್ನು ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಮೂಲಕ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪ್ರಾಬಲ್ಯವನ್ನು ಮುಂದುವರಿಸಲು ಚಿಂತಿಸಿದ್ದಾರೆ ಎನ್ನಲಾಗುತ್ತಿದೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಲ್ಲೇಶ್ವರಂ ಶಾಸಕ ಡಾ ಸಿಎನ್ ಅಶ್ವತ್ಥನಾರಾಯಣ ಹಾಗೂ ಪದ್ಮನಾಭನಗರ ಶಾಸಕ ಆರ್ ಅಶೋಕ್ ಅವರು ರಾಜ್ಯಾಧ್ಯಕ್ಷ ಪಟ್ಟಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಇವರೆಲ್ಲರೂ ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರು. ಈಗ ಶೋಭಾ ಹೆಸರು ಮುನ್ನೆಲೆಗೆ ಬಂದಿರುವುದು ಇವರೆಲ್ಲರಿಗೂ ಶಾಕ್ ನೀಡಿದೆ ಎಂದು ಹೇಳಲಾಗುತ್ತಿದೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications