ರಾಜ್ಯದಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು: ಸಚಿವ ಶಿವರಾಜ್ ತಂಗಡಗಿ
ಮೈಸೂರು, ಸೆಪ್ಟೆಂಬರ್ 4: ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು, ಯಾರೂ ಹತ್ತಲು ಬಯಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಮೈಸೂರಿನಲ್ಲಿ ಡಿ.ದೇವರಾಜ್ ಅರಸು ಮೆಡಿಕಲ್ ಮತ್ತು ಎಂಜಿನಿಯರಿಂಗ್ ಹಾಸ್ಟೆಲ್ಗೆ ಶಂಕುಸ್ಥಾಪನೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್, ಬಿಜೆಪಿಯ ಹಿರಿಯ ಮುಖಂಡ ಬಿ.ಎಲ್.ಸಂತೋಷ್ ಅವರಿಗೆ ಕನಿಷ್ಠ ನಾಲ್ವರು ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಲಿ ಎಂದು ಸವಾಲು ಹಾಕಿದರು.

ಸುಮಾರು 40 ಕಾಂಗ್ರೆಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಮುಳುಗುತ್ತಿರುವ ಹಡಗು ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಯಾರೂ ಅದನ್ನು ಹತ್ತಲು ಬಯಸುವುದಿಲ್ಲ. ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಪುಣರು. ನಮ್ಮ ಶಾಸಕರು ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಅವರ ಹೇಳಿಕೆ ದೊಡ್ಡ ಸುಳ್ಳು ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚುನಾವಣಾ ಪರಿಣತಿ ಇಲ್ಲಿ ಕೆಲಸ ಮಾಡಲಿಲ್ಲ. ಏಕೆಂದರೆ ಕರ್ನಾಟಕದ ಎಲ್ಲಾ ಬೀದಿಗಳಲ್ಲಿ ಪ್ರವಾಸ ಮಾಡಿದರೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಲು ಸಾಧ್ಯವಾಯಿತು. ಜತೆಗೆ ಬೇರೆ ಪಕ್ಷಗಳಿಂದ ಕಾಂಗ್ರೆಸ್ ಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಪಕ್ಷದಿಂದ ಯಾರೂ ಬಿಡುವುದಿಲ್ಲ ಎಂದರು.
ತಮ್ಮ ಹಾಗೂ ಹೆಚ್.ಸಿ.ಮಹದೇವಪ್ಪ ಅವರ ನಡುವಿನ ಭಿನ್ನಾಭಿಪ್ರಾಯಗಳ ಕುರಿತು ಕೇಳಿದ ಪ್ರಶ್ನೆಗೆ, ಕೊಪ್ಪಳಕ್ಕೆ ಅಧಿಕಾರಿ ನೇಮಕದ ಕುರಿತು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದಿರುವುದು ನಿಜ ಎಂದು ಶಿವರಾಜ್ ಸ್ಪಷ್ಟಪಡಿಸಿದರು. ''ಪತ್ರ ಬರೆದಿದ್ದಕ್ಕೆ ಭಿನ್ನಾಭಿಪ್ರಾಯಗಳಿವೆ ಎಂದಲ್ಲ, ಅಧಿಕಾರಿ ಮೇಲೆ ಆರೋಪಗಳಿರುವುದರಿಂದ ಇಂತಹ ಅಧಿಕಾರಿ ನಮ್ಮ ಜಿಲ್ಲೆಗೆ ಬೇಡ ಎಂದು ಬರೆದಿದ್ದೆ. ಅವರು ಹಿರಿಯ ಸಚಿವರಾಗಿದ್ದು, ಈ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸುವ ಭರವಸೆ ಇದೆ ಎಂದು ಶಿವರಾಜ್ ಹೇಳಿದರು.
ಇನ್ನು ಈಗ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಈಶ್ವರ್, ಬಿಜೆಪಿ ಲಿಂಗಾಯತರನ್ನು ತುಳಿಯುತ್ತಿದೆ ಎಂದು ಹೇಳಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯಲಾಗುತ್ತಿದೆ" ಬಿಜೆಪಿಯ ವಿಧಾನ ಪರಿಷತ್ ಸದಸ್ಯರೇ ಈ ಸತ್ಯವನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಿದೆ.
ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದೇ ಬಿಜೆಪಿ" ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ಹೇಳಿದ್ದಾರೆ, ಲಿಂಗಾಯತ ಸಮುದಾಯದಿಂದಲೇ ಅಸ್ತಿತ್ವ ಕಂಡುಕೊಂಡಿದ್ದ ಬಿಜೆಪಿ ಈಗ ಅದೇ ಲಿಂಗಾಯತ ಸಮುದಾಯದ ನಾಯಕರನ್ನು ಮೂಲೆಗೆ ಎಸೆಯುವುದೇ "ಸಂತೋಷ ಕೂಟ"ದ ಮುಖ್ಯ ಅಜೆಂಡಾವೇ ಬಿಜೆಪಿ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.












Click it and Unblock the Notifications