ಕಾಂಗ್ರೆಸ್ಸಿಗೆ ಹಸಿವಾಗಿದೆ,ಅದರ ಫಲವೇ ಖೇಣಿ ಸೇರ್ಪಡೆ: ಸುರೇಶ್ ಕುಮಾರ್
ಬೆಂಗಳೂರು, ಮಾರ್ಚ್ 05: ಕಾಂಗ್ರೆಸ್ ಪಕ್ಷಕ್ಕೆ ಹಸಿವಾಗಿದೆ. ಅದನ್ನು ನೀಗಿಸಿಕೊಳ್ಳುವುದಕ್ಕಾಗಿ ಎಂತೆಂಥವರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಅದರ ಫಲವೇ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಹೇಳಿದರು.
ಇಂದು(ಮಾ.05) ಕಾಂಗ್ರೆಸ್ ಪಕ್ಷ ಸೇರಿದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರ ನಡೆಯನ್ನೂ, ನೈಸ್ ಹಗರಣದ ರೂವಾರಿಯನ್ನು ಪಕ್ಷಕ್ಕೆ ಸೇರಿಸಿಕೊಂಡ ಕಾಂಗ್ರೆಸ್ ನಡೆಯನ್ನು ರಾಜಾಜೀನಗರ ಶಾಸಕ ಸುರೇಶ್ ಕುಮಾರ್ ಖಂಡಿಸಿದರು.
"ಯಾರ್ಯಾರು ವಿರೋಧ ಪಕ್ಷದಲ್ಲಿದ್ದಾಗ ಜೈಲು ಹಕ್ಕಿಗಳು ಅಂತ ಟೀಕೆ ಮಾಡುತ್ತಿದ್ದವು. ತಮ್ಮ ಪಕ್ಷಕ್ಕೆ ಸೇರುತ್ತಿದ್ದಂತೆಯೇ ಅವರನ್ನು ಉತ್ತಮ ರಾಜಕಾರಣಿಗಳು ಎನ್ನುತ್ತಾರೆ. ಅದೇ ರೀತಿ ಇವತ್ತು ಒಬ್ಬ ಮಹಾಪುರುಷರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ" ಎಂದು ಅವರು ಲೇವಡಿ ಮಾಡಿದರು.

"ಕನ್ನಡ ಮಕ್ಕಳ ಪಕ್ಷದ ನಾಯಕ ಅಶೋಕ್ ಖೇಣಿ ಅವರ ನೈಸ್ ಹಗರಣದ ಕುರಿತು ಸದನದಲ್ಲಿ ಭಾರೀ ಚರ್ಚೆಯಾಗಿ ನಂತರ ಸದನ ಸಮಿತಿಯನ್ನೂ ರಚಿಸಲಾಗಿತ್ತು. ಆ ಸದನ ಸಮಿತಿಯ ಅಧ್ಯಕ್ಷರು ಕಾನೂನು ಸಚಿವ ಜಯಚಂದ್ರ! ಹೆಚ್ಚುವರಿಯಾಗಿ ಭೂಮಿಯ ಕಬಳಿಸಿದ ಖೇಣಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದೂ ಸಮಿತಿಯಲ್ಲಿ ಚರ್ಚೆಯಾಗಿತ್ತು. ಅಂಥ ಅಶೋಕ್ ಖೇಣಿಯನ್ನು ಇಂದು ಕಾಂಗ್ರೆಸ್ಸಿಗರೇ ಬರಮಾಡಿಕೊಂಡಿರುವುದು ವಿಡಂಬನೆ" ಎಂದು ಅವರು ಟೀಕಿಸಿದರು.
"ಕಾಂಗ್ರೆಸ್ ಪಕ್ಷಕ್ಕೆ ಹಸಿವಾಗಿದೆ. ಅದನ್ನು ನೀಗಿಸಿಕೊಳ್ಳೋಕೆ ಇಂಥವರನ್ನೆಲ್ಲ ಸೇರಿಸಿಳ್ಳುತ್ತಿದೆ. ಈ ಮೂಲಕ ತನ್ನ ನಿಜವಾದ ಬಣ್ಣವನ್ನು ಬಯಲು ಮಾಡಿದೆ. ಕಾಂಗ್ರೆಸ್ ಪಕ್ಷ ಅಂದರೆ ಏನು ಎಂಬುದು ಗೊತ್ತಾಗಿದೆ. ಜನವಿರೋಧಿ ನೀತಿಯನ್ನು ಬಿಜೆಪಿ ವಿರೋಧಿಸುತ್ತದೆ. ನೈಸ್ ಪ್ರಕರಣದಿಂದ ನೊಂದ, ಕಣ್ಣೀರು ಹಾಕಿದ ಜನರ ಶಾಪ ಕಾಂಗ್ರೆಸ್ಸಿಗೆ ತಟ್ಟುತ್ತೆ" ಎಂದು ಅವರು ಹೇಳಿದರು.
"ತಮ್ಮದು ಜನರನ್ನು ಹಿಂಸಿಸುವ ವ್ಯಕ್ತಿಗಳ ಪರವಾಗಿ ನಿಂತ ಪಕ್ಷ ಎಂಬುದನ್ನು ಕಾಂಗ್ರೆಸ್ಸು ಈ ಮೂಲಕ ಸಾಬೀತುಪಡಿಸಿದೆ. ನಾವು ನಡೆಸುತ್ತಿರುವ ಬೆಂಗಳೂರು ರಕ್ಷಿಸಿ ಯಾತ್ರೆಯಲ್ಲಿ ಅಶೋಕ್ ಖೇಣಿ ಸೇರ್ಪಡೆಯ ವಿರುದ್ಧವೂ ಧ್ವನಿ ಎತ್ತುತ್ತೇವೆ" ಎಂದು ಅವರು ಹೇಳಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications