BK Hariprasad: ಕೈ ತಪ್ಪಿದ ಮಂತ್ರಿಗಿರಿ; ರಾಜೀನಾಮೆ ನೀಡಲು ಮುಂದಾದ ಬಿಕೆ ಹರಿಪ್ರಸಾದ್!?
ಬೆಂಗಳೂರು, ಮೇ27: ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಹೌದು, ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಅದರಂತೆ ಮೊದಲ ಸಚಿವ ಸಂಪುರ ರಚನೆಯಲ್ಲಿಯೇ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪು ರಚನೆಯಲ್ಲೂ ಸಚಿವ ಸ್ಥಾನ ಸಿಗಲಿಲ್ಲ, ಇನ್ನೂ ಇದೀದ 24 ಜನರಿಗೆ ಮಂತ್ರಿ ಸ್ಥಾನ ಒಲಿದು ಬಂದಿದ್ದು, ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ಉತ್ತಮ ಬಾಂಧವ್ಯ ಹೊಂದಿದ್ದ ಬಿ ಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದು, ಇದೀಗ ಸಚಿವ ಸ್ಥಾನ ಕೈ ತಪ್ಪಿದ್ದು, ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications