ಬಿಸಾಡಿದ್ದ ಚೆಡ್ಡಿ ತಲೆ ಮೇಲೆ ಹೊತ್ತಿದ್ದಕ್ಕೆ ನಿನಗೆ ವಿಪಕ್ಷ ನಾಯಕ ಸ್ಥಾನ ಬಂದಿದ್ದು: ಬಿಕೆ ಹರಿಪ್ರಸಾದ್
ಬೆಂಗಳೂರು, ಮಾರ್ಚ್ 25: ಅಧಿಕಾರ ಪಡಯುವ ಏಕೈಕ ಉದ್ದೇಶಕ್ಕಾಗಿ ತತ್ವ ಸಿದ್ದಾಂತವನ್ನೇ ಮಾರಿಕೊಂಡು, ಬೆಳೆಸಿದವರನ್ನೇ ಬೆನ್ನು ತೋರಿಸಿ, ಎರಡು ಬಗೆಯುವ ಛಲವಾದಿ ನಾರಾಯಣಸ್ವಾಮಿ ಅವರೇ,ಸಂಘ ಪರಿವಾರ ತೊಟ್ಟಿದ್ದ ಚೆಡ್ಡಿಗಳಿಂದ ಪ್ಯಾಂಟಿಗೆ ಶಿಫ್ಟ್ ಆದಮೇಲೆ ಅವರು ಹಾಕಿ ಬಿಸಾಡಿದ್ದ ಚೆಡ್ಡಿಗಳನ್ನು ಒಟ್ಟು ಮಾಡಿ ತಲೆಯ ಮೇಲೆ ಹೊತ್ತು ತಿರುಗಿದ ಕಾರಣಕ್ಕಾಗಿ ಪರಿಷತ್ತಿನ ವಿಪಕ್ಷ ನಾಯಕ ಸ್ಥಾನ ಒಲಿದು ಬಂದಿರೋದು ಸಾರ್ವಜನಿಕ ಸತ್ಯ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅವರು ಟ್ವೀಟ್ ಮಾಡಿದ್ದು, ವಿಪಕ್ಷ ಸ್ಥಾನದ ಘನತೆ, ಗೌರವಕ್ಕೆ ತಕ್ಕುದಾಗಿ ಎಂದೂ ನಡೆದುಕೊಳ್ಳದೇ ಗುಲಾಮಗಿರಿಯನ್ನೇ ಬಂಡವಾಳ ಮಾಡಿಕೊಂಡರೆ ಹೇಗೆ.? ಸಾಂವಿಧಾನಿಕ ಹುದ್ದೆ ನಿಭಾಯಿಸುವುದೆಂದರೆ ಹೌಸಿಂಗ್ ಬೋರ್ಡ್ ನಲ್ಲಿ ಶಿಕ್ಷಣ ಸಂಸ್ಥೆಗಾಗಿ ಸಿಎ ಸೈಟ್ ಪಡೆದು ಹೊಸಕೋಟೆಯಲ್ಲಿ ಧಮ್ ಬಿರಿಯಾನಿ ಹೋಟೆಲ್ ಬಾಡಿಗೆ ಪಡೆಯುವಷ್ಟು ಸುಲಭವಲ್ಲ. ನಿಮ್ಮ ಸ್ವಚ್ಛ ಚಾರಿತ್ರ್ಯ, ಪ್ರಾಮಾಣಿಕ, ಆವಿಷ್ಕಾರಿ ಪ್ರಧಾನಿ ಗುಜರಾತಿನಲ್ಲಿ "ರಾಜಧರ್ಮ" ಪಾಲಿಸದೆ ಗೋದ್ರಾ ಹತ್ಯಾಕಾಂಡದಲ್ಲಿ ನಡೆಸಿದ ಹೇಯ ಕೃತ್ಯಗಳಿಗಾಗಿ ನಿಮ್ಮ ಪಕ್ಷದ "ಅಜಾತಶತೃ" ವಾಜಪೇಯಿಯಿಂದ ಛೀಮಾರಿ ಹಾಕಿಸಿಕೊಂಡ ಇತಿಹಾಸ ಹೇಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಾನು ನಿಭಾಯಿಸಿದ ಜವಾಬ್ದಾರಿ,ಪಕ್ಷ ನೀಡಿದ ಅವಕಾಶ,ಸಾಂವಿಧಾನಿಕ ಹುದ್ದೆಗಳ ನಿರ್ವಹಣೆಗಳನ್ನು ನಿಮ್ಮ ಇಡೀ ರಾಜಕೀಯ ಜೀವನದಲ್ಲಿ ಹತ್ತಿರದಿಂದ ನೋಡಲೂ ಸಾಧ್ಯವಿಲ್ಲ. ಅದರ ಬಗ್ಗೆ ತಲೆಕೆಡಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಲಿತ ಸಮುದಾಯದಿಂದ ಬಂದು, ರಾಜಕೀಯ ಅಧಿಕಾರಕ್ಕಾಗಿ ಬಾಬಾ ಸಾಹೇಬರ ಸಿದ್ದಾಂತವನ್ನೇ ತೊರೆದು, ಗೋಸುಂಬೆಯ ಥರ ಬಣ್ಣ ಬದಲಾಯಿಸಿದಂತೆ ಅಧಿಕಾರಕ್ಕಾಗಿ ಸಂವಿಧಾನ ವಿರೋಧಿಗಳ ಸಖ್ಯ ಬೆಳಸಿ, ಮನಸ್ಮೃತಿಯ ಪ್ರತಿಪಾದಕರಾಗಿ ಬದಲಾದ ನಿಮ್ಮ ಮನಸ್ಥಿತಿಯ ಬಗ್ಗೆ ಮರುಕವಿದೆ. ನಿಮ್ಮಿಂದ ರಾಜಕೀಯ ನೈತಿಕತೆ, ಜನಪರ ಕೆಲಸಗಳ ಬಗ್ಗೆ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ನನಗಂತೂ ಬಂದಿಲ್ಲ,ಬರುವುದೂ ಇಲ್ಲ ಎಂದು ಬಿ ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಕೊನೆಯದಾಗಿ, ನಿಮ್ಮ ಎಕ್ಸ್ ನಲ್ಲಿ "ಹನಿ ಟ್ರ್ಯಾಪ್,ಭ್ರಷ್ಟಾಚಾರ, ಅಧಿಕಾರ ದುರುಪಯೋಗ,ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತು ಎಲ್ಲಾ ವಲಯಗಳ ಬೆಲೆ ಏರಿಕೆ" ಬಗ್ಗೆ ಮಾತಾಡಿ ನಿಮ್ಮದೇ ಪಕ್ಷದ ಆಂತರಿಕ ವಿಷಯ ಹಾಗೂ ಸರ್ಕಾರದ ವಿಫಲತೆಯ ಬಗ್ಗೆ ಆಕ್ರೋಶ ಹೊರಹಾಕಿದಂತೆ ಕಾಣುತ್ತಿದೆ.ಅದಕ್ಕಾಗಿಯಾದರೂ ನಿಮ್ಮನ್ನು ಅಭಿನಂದಿಸಲೇಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಬಿ ಕೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications