ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ದಾಳಿಯಿಂದ 1,300 ಕೋಟಿ ರೂಪಾಯಿ ಕಪ್ಪು ಹಣ ಪತ್ತೆ
ಬೆಂಗಳೂರು, ನವೆಂಬರ್ 18: ಆದಾಯ ತೆರಿಗೆ ಇಲಾಖೆಯು ಕರ್ನಾಟಕ ಮೂಲದ ಕೆಲವು ರಿಯಲ್ ಎಸ್ಟೇಟ್ ಡೆವಲಪರ್ಗಳೊಂದಿಗೆ ಜಂಟಿ ಅಭಿವೃದ್ಧಿ ಒಪ್ಪಂದಗಳನ್ನು ಮಾಡಿಕೊಂಡಿರುವ ಕೆಲವು ವ್ಯಕ್ತಿಗಳ ವಿರುದ್ಧ ಇತ್ತೀಚೆಗೆ ಶೋಧ ನಡೆಸಿದ ನಂತರ ರೂ 1,300 ಕೋಟಿಗೂ ಹೆಚ್ಚು ಮೌಲ್ಯದ ಲೆಕ್ಕವಿಲ್ಲದ ಕಪ್ಪು ಹಣವನ್ನು ಪತ್ತೆ ಮಾಡಿದೆ ಎಂದು ಸಿಬಿಡಿಟಿ ಗುರುವಾರ ತಿಳಿಸಿದೆ.
ಅಕ್ಟೋಬರ್ 20 ಮತ್ತು ನವೆಂಬರ್ 2 ರಂದು ಬೆಂಗಳೂರು, ಮುಂಬೈ ಮತ್ತು ಗೋವಾದಲ್ಲಿ ಸುಮಾರು 50 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿತ್ತು. ಅಕ್ಟೋಬರ್ 20ರಿಂದ ಇದುವರೆಗೆ ನಡೆದ ಶೋಧ ಕಾರ್ಯಗಳಲ್ಲಿ ಬರೋಬ್ಬರಿ 1,300 ಕೋಟಿ ರೂ.ಗೂ ಹೆಚ್ಚು ಲೆಕ್ಕವಿಲ್ಲದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಿದೆ. ಇದಲ್ಲದೆ 24 ಕೋಟಿಗೂ ಅಧಿಕ ಮೌಲ್ಯದ ನಗದು ಮತ್ತು ಚಿನ್ನಾಭರಣಗಳ ಸ್ವರೂಪದ ಅಘೋಷಿತ ಆಸ್ತಿಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ.
ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ತೆರಿಗೆ ಇಲಾಖೆಗೆ ನೀತಿ ನಿಯಮಗಳನ್ನು ರೂಪಿಸುತ್ತದೆ. ಸಿಬಿಡಿಟಿಯು ಮಾರಾಟ ಒಪ್ಪಂದಗಳು, ಅಭಿವೃದ್ಧಿ ಒಪ್ಪಂದಗಳು ಮತ್ತು ಆಕ್ಯುಪೆನ್ಸಿ ಪ್ರಮಾಣಪತ್ರಗಳಿಗೆ (ಒಸಿ) ಸಂಬಂಧಿಸಿದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ. ಅಧಿಕಾರಿಗಳಿಂದ ಆಕ್ಯುಪೆನ್ಸಿ ಪ್ರಮಾಣಪತ್ರಗಳನ್ನು ನೀಡಿದ ನಂತರವೂ ಭೂಮಾಲೀಕರು ಜೆಡಿಎಗಳ (ಜಂಟಿ ಅಭಿವೃದ್ಧಿ ಒಪ್ಪಂದಗಳು) ಮೂಲಕ ವಿವಿಧ ಡೆವಲಪರ್ಗಳಿಗೆ ಅಭಿವೃದ್ಧಿಗೆ ನೀಡಿದ ಭೂಮಿಯನ್ನು ವರ್ಗಾಯಿಸಿದಾಗ ಬಂಡವಾಳ ಲಾಭದಿಂದ ಬಂದ ಆದಾಯವನ್ನು ಬಹಿರಂಗಪಡಿಸಿಲ್ಲ ಎಂದು ಸಿಬಿಡಿಟಿಯ ಹಿಡಿದಿರುವ ಈ ಪುರಾವೆಗಳು ತೋರಿಸಿವೆ.

ಕೆಲವು ಭೂಮಾಲೀಕರು ತಮ್ಮ ಆದಾಯ ತೆರಿಗೆ ರಿಟರ್ನ್ಗಳನ್ನು ಹಲವಾರು ವರ್ಷಗಳಿಂದ ಸಲ್ಲಿಸಿಯೇ ಇಲ್ಲ. ಈ ಸಮಯದಲ್ಲಿ ಬಂಡವಾಳ ಲಾಭದ ಆದಾಯವು ರಿಯಲ್ ಎಸ್ಟೇಟ್ ಡೆವಲಪರ್ಸ್ಗಳಿಗೆ ಸೇರಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಹೇಳಿದೆ. ತನಿಖೆಯನ್ನು ಎದುರಿಸಿದಾಗ ಸಂಬಂಧಪಟ್ಟವರು ತಮ್ಮ ಲೋಪಗಳನ್ನು ಒಪ್ಪಿಕೊಂಡರು. ಅಲ್ಲದೆ ಆಯಾ ಪ್ರಕರಣಗಳಲ್ಲಿ ಪತ್ತೆಯಾದ ಬಂಡವಾಳ ಲಾಭಗಳಿಂದ ಆದಾಯವನ್ನು ಬಹಿರಂಗಪಡಿಸಲು ಮತ್ತು ಅದಕ್ಕೆ ಸರಿಯಾದ ತೆರಿಗೆಯನ್ನು ಪಾವತಿಸಲು ಒಪ್ಪಿಕೊಂಡರು ಎಂದು ಹೇಳಿಕೆ ತಿಳಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications