ಮಹಿಳೆಯಿಂದ 2 ಕೋಟಿ ರೂ.ಗೆ ಬ್ಲಾಕ್ಮೇಲ್: ಶಾಸಕ ರಾಜಕುಮಾರ್ ಪಾಟೀಲ್ ದೂರು
ಬೆಂಗಳೂರು, ಫೆ. 07: ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಗೆ ಎರಡು ಕೋಟಿ ರೂ. ನೀಡುವಂತೆ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಹಿಳೆಯೊಬ್ಬರು ನನಗೆ ಎರಡು ಕೋಟಿ ರೂ. ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಶಾಸಕ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ ಪೊಲೀಸರು ವಿಚಾರಣೆ ನಡೆಸಿ ಕಳುಹಿಸಿ ಕೊಟ್ಟಿದ್ದಾರೆ.
ಬೊಮ್ಮಾಯಿಗೆ ದೂರು:
ಬಿಜೆಪಿಯ ಶಾಸಕರೊಬ್ಬರು ನನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮಗು ಹುಟ್ಟಿಸಿ ಮೋಸ ಮಾಡಿದ್ದಾರೆ. ಈ ಕುರಿತು ತಮ್ಮನ್ನು ಭೇಟಿ ಮಾಡಲು ಅನೇಕ ಸಲ ಪ್ರಯತ್ನಿಸಿದೆ. ಸಾಧ್ಯವಾಗದ ಕಾರಣ ಫೇಸ್ಬುಕ್ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದು ನ್ಯಾಯ ಒದಗಿಸುವಂತೆ ಕೋರಿ ಮಹಿಳೆಯೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೇಸ್ ಬುಕ್ ಗೆ ಟ್ಯಾಗ್ ಮಾಡಿದ್ದರು. ಈ ವಿಚಾರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರನ್ನು ವಿಧಾನಸೌಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ತನಿಖೆ ಹಂತದಲ್ಲಿದೆ ಎಂದಷ್ಟೇ ಸ್ಪಷ್ಟನೆ ನೀಡಿದ್ದಾರೆ.
ಮೂರು ದಿನದ ಹಿಂದೆ ಪೋಸ್ಟ್:
ಕಲಬುರಗಿಯ ಬಿಜೆಪಿ ಪಕ್ಷದ ಶಾಸಕರು ನನ್ನನ್ನು ಪ್ರೀತಿಸಿದ್ದರು. ಮದುವೆಯಾಗುವುದಾಗಿ ನಂಬಿಸಿದ್ದರು. ಮಗು ಜನಿಸಿದ ಬಳಿಕ ಮೋಸ ಮಾಡಿದ್ದಾರೆ. ನಿಮ್ಮನ್ನು ಭೇಟಿ ಮಾಡಲು ಆಗಲಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರ ಫೇಸ್ ಬುಕ್ ಪೇಜ್ ನಲ್ಲಿ ತನ್ನ ಅಳಲು ತೋಡಿಕೊಂಡಿದ್ದರು ನೊಂದ ಮಹಿಳೆ.

ಪ್ರಧಾನಿ ನರೇಂದ್ರ ಮೋದಿ ಆತ್ಮ ನಿರ್ಭರ ಕುರಿತು ಮಾಡಿದ್ದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮಹಿಳೆ ಈ ವಿಚಾರವನ್ನು ಬರೆದುಕೊಂಡಿದ್ದರು. ನನಗೆ ಮಗುವಿದೆ. ನಿಮ್ಮಿಂದ ಭರವಸೆ ಸಿಕ್ಕ ಬಳಿಕ ನಾನು ಮುಂದಿನ ಹೋರಾಟ ನಡೆಸುತ್ತೇನೆ. ನ್ಯಾಯ ಸಿಗುವ ವರೆಗೂ ಹೋರಾಟ ಮುಂದುವರೆಸುತ್ತೇನೆ ಎಂದು ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ರಾಜಕುಮಾರ್ ಪಾಟೀಲ್ ನೀಡಿದ ದೂರಿನ ಮೇರೆಗೆ ಬ್ಲಾಕ್ ಮೇಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Recommended Video
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications