ಇನ್ನೆರಡು ದಿನದಲ್ಲಿ ಬಸ್ ದರ ಇಳಿಕೆ : ರಾಮಲಿಂಗಾ ರೆಡ್ಡಿ
ಬೆಳಗಾವಿ, ಡಿ.18 : ಜನರ ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಪ್ರಯಾಣ ದರವನ್ನು ಇಳಿಸಲಾಗುವುದು ಎಂದು ಹೇಳಿದ್ದಾರೆ. ಅಧಿಕಾರಿಗಳ ಜೊತೆ ಈ ಕುರಿತು ಮಾತುಕತೆ ನಡೆಸಿದ್ದು ಇನ್ನೆರಡು ದಿನದಲ್ಲಿ ದರ ಇಳಿಕೆ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ ಶಾಸಕ ಎಸ್.ಮುನಿರಾಜು (ಬಿಜೆಪಿ) ಅವರ ಪ್ರಶ್ನೆಗೆ ಗುರುವಾರದ ಬೆಳಗಾವಿಯಲ್ಲಿನ ಚಳಿಗಾಲದ ಅಧಿವೇಶನದಲ್ಲಿ ಉತ್ತರ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಂಸ್ಥೆ ಎಷ್ಟು ನಷ್ಟದಲ್ಲಿದೆ ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದರು.

ಮಾರ್ಕೊಪೋಲೋ ಮತ್ತು ವೋಲ್ವೋ ಬಸ್ಸುಗಳಿಂದಾಗಿ ಬಿಎಂಟಿಸಿಗೆ ನಷ್ಟ ಉಂಟಾಗುತ್ತಿದೆ. ಈ ಬಸ್ಸುಗಳಿಂದ 28.22 ಕೋಟಿ ನಷ್ಟವಾಗಿದೆ ಎಂದು ಸಚಿವರ ಉತ್ತರ ನೀಡಿದರು. ಇನ್ನೆರಡು ದಿನದಲ್ಲಿ ಬಸ್ ಪ್ರಯಾಣ ದರ ಇಳಿಕೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದರು. [ಬಸ್ ಪ್ರಯಾಣ ದರ ಇಳಿಕೆ ಸಚಿವರು]
ಕಳೆದ ಮೂರು-ನಾಲ್ಕು ತಿಂಗಳಲ್ಲಿ ಡೀಸೆಲ್ ದರ ಒಟ್ಟಾರೆ 8 ರೂ. ಇಳಿಕೆಯಾಗಿದ್ದರೂ ಸರ್ಕಾರ ಬಸ್ ಪ್ರಯಾಣ ದರ ಕಡಿಮೆ ಮಾಡಿರಲಿಲ್ಲ. ಇದು ಜನರು ಮತ್ತು ವಿವಿಧ ಸಂಘಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಷ್ಟದ ನೆಪ ಹೇಳಿದ್ದ ಇಲಾಖೆ ಕೊನೆಗೂ ಜನರ ಮತ್ತು ಸಂಘಸಂಸ್ಥೆಗಳ ಒತ್ತಾಯಕ್ಕೆ ಮಣಿದು ಬಸ್ ದರ ಇಳಿಸಲು ಮುಂದಾಗಿದೆ.
ಸಚಿವರ ಉತ್ತರದ ಪ್ರಮುಖ ಅಂಶಗಳು
* 98 ಮಾರ್ಕೊಪೋಲೋ ಬಸ್ ನಿಲ್ಲಿಸಲಾಗುತ್ತದೆ
* 2009ರಲ್ಲಿ 98 ಮಾರ್ಕೊಪೋಲೋ ಬಸ್ ಖರೀದಿ
* 2014ರ ಅಕ್ಟೋಬರ್ ವರೆಗೆ ಮೂರುವರೆ ಕೋಟಿ ನಷ್ಟ ಉಂಟಾಗಿದೆ
* ವೋಲ್ವೋ, ಮಾರ್ಕೊಪೋಲೋ ಬಸ್ಗಳಿಂದ28.25 ಕೋಟಿ ನಷ್ಟ
* ಬ್ಯಾಂಕ್ಗಳಿಂದ ಪಡೆದ 384 ಕೋಟಿ ಸಾಲ ಬಾಕಿ ಇದೆ
* ಕಳೆದ ಒಂದೂವರೆ ವರ್ಷದಲ್ಲಿ 1028 ಬಸ್ ಖರೀದಿ ಮಾಡಲಾಗಿದ್ದು, 320 ಕೋಟಿ ಖರ್ಚು ಮಾಡಲಾಗಿದೆ
* 2013-14ರಲ್ಲಿ 147.59 ಕೋಟಿ ನಷ್ಟ
* 2012-13ರಲ್ಲಿ 47.95 ಕೋಟಿ ನಷ್ಟ
* 1998ರಿಂದ 2012ರವರೆಗೆ ಬಿಎಂಟಿಸಿ ಲಾಭದಲ್ಲಿತ್ತು
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications