ಇನ್ನೆರಡು ದಿನದಲ್ಲಿ ಬಸ್ ದರ ಇಳಿಕೆ : ರಾಮಲಿಂಗಾ ರೆಡ್ಡಿ
ಬೆಳಗಾವಿ, ಡಿ.18 : ಜನರ ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಪ್ರಯಾಣ ದರವನ್ನು ಇಳಿಸಲಾಗುವುದು ಎಂದು ಹೇಳಿದ್ದಾರೆ. ಅಧಿಕಾರಿಗಳ ಜೊತೆ ಈ ಕುರಿತು ಮಾತುಕತೆ ನಡೆಸಿದ್ದು ಇನ್ನೆರಡು ದಿನದಲ್ಲಿ ದರ ಇಳಿಕೆ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ ಶಾಸಕ ಎಸ್.ಮುನಿರಾಜು (ಬಿಜೆಪಿ) ಅವರ ಪ್ರಶ್ನೆಗೆ ಗುರುವಾರದ ಬೆಳಗಾವಿಯಲ್ಲಿನ ಚಳಿಗಾಲದ ಅಧಿವೇಶನದಲ್ಲಿ ಉತ್ತರ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಂಸ್ಥೆ ಎಷ್ಟು ನಷ್ಟದಲ್ಲಿದೆ ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದರು.

ಮಾರ್ಕೊಪೋಲೋ ಮತ್ತು ವೋಲ್ವೋ ಬಸ್ಸುಗಳಿಂದಾಗಿ ಬಿಎಂಟಿಸಿಗೆ ನಷ್ಟ ಉಂಟಾಗುತ್ತಿದೆ. ಈ ಬಸ್ಸುಗಳಿಂದ 28.22 ಕೋಟಿ ನಷ್ಟವಾಗಿದೆ ಎಂದು ಸಚಿವರ ಉತ್ತರ ನೀಡಿದರು. ಇನ್ನೆರಡು ದಿನದಲ್ಲಿ ಬಸ್ ಪ್ರಯಾಣ ದರ ಇಳಿಕೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದರು. [ಬಸ್ ಪ್ರಯಾಣ ದರ ಇಳಿಕೆ ಸಚಿವರು]
ಕಳೆದ ಮೂರು-ನಾಲ್ಕು ತಿಂಗಳಲ್ಲಿ ಡೀಸೆಲ್ ದರ ಒಟ್ಟಾರೆ 8 ರೂ. ಇಳಿಕೆಯಾಗಿದ್ದರೂ ಸರ್ಕಾರ ಬಸ್ ಪ್ರಯಾಣ ದರ ಕಡಿಮೆ ಮಾಡಿರಲಿಲ್ಲ. ಇದು ಜನರು ಮತ್ತು ವಿವಿಧ ಸಂಘಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಷ್ಟದ ನೆಪ ಹೇಳಿದ್ದ ಇಲಾಖೆ ಕೊನೆಗೂ ಜನರ ಮತ್ತು ಸಂಘಸಂಸ್ಥೆಗಳ ಒತ್ತಾಯಕ್ಕೆ ಮಣಿದು ಬಸ್ ದರ ಇಳಿಸಲು ಮುಂದಾಗಿದೆ.
ಸಚಿವರ ಉತ್ತರದ ಪ್ರಮುಖ ಅಂಶಗಳು
* 98 ಮಾರ್ಕೊಪೋಲೋ ಬಸ್ ನಿಲ್ಲಿಸಲಾಗುತ್ತದೆ
* 2009ರಲ್ಲಿ 98 ಮಾರ್ಕೊಪೋಲೋ ಬಸ್ ಖರೀದಿ
* 2014ರ ಅಕ್ಟೋಬರ್ ವರೆಗೆ ಮೂರುವರೆ ಕೋಟಿ ನಷ್ಟ ಉಂಟಾಗಿದೆ
* ವೋಲ್ವೋ, ಮಾರ್ಕೊಪೋಲೋ ಬಸ್ಗಳಿಂದ28.25 ಕೋಟಿ ನಷ್ಟ
* ಬ್ಯಾಂಕ್ಗಳಿಂದ ಪಡೆದ 384 ಕೋಟಿ ಸಾಲ ಬಾಕಿ ಇದೆ
* ಕಳೆದ ಒಂದೂವರೆ ವರ್ಷದಲ್ಲಿ 1028 ಬಸ್ ಖರೀದಿ ಮಾಡಲಾಗಿದ್ದು, 320 ಕೋಟಿ ಖರ್ಚು ಮಾಡಲಾಗಿದೆ
* 2013-14ರಲ್ಲಿ 147.59 ಕೋಟಿ ನಷ್ಟ
* 2012-13ರಲ್ಲಿ 47.95 ಕೋಟಿ ನಷ್ಟ
* 1998ರಿಂದ 2012ರವರೆಗೆ ಬಿಎಂಟಿಸಿ ಲಾಭದಲ್ಲಿತ್ತು
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications