ನಿಗಮ-ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ!
ಬೆಂಗಳೂರು, ಜುಲೈ 03 : ನಿಗಮ-ಮಂಡಳಿಗಳಿಗೆ ನೇಮಕವಾಗುವ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಲಿದೆ. ಸದ್ಯಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಮಾಡದಿರಲು ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನಪಡಿಸಲು ಚಿಂತನೆ ನಡೆಸಲಾಗಿತ್ತು.
ನಿಗಮ, ಮಂಡಳಿಗೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಶಾಸಕರಿಗೆ ಬಂಪರ್
ಆದರೆ, ನಿಗಮ-ಮಂಡಳಿ ನೇಮಕದ ಬಳಿಕ ಮತ್ತೆ ಅಸಮಾಧಾನ ಉಂಟಾಗುವ ನಿರೀಕ್ಷೆ ಹಿನ್ನಲೆಯಲ್ಲಿ ನೇಕಮಾತಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಬಜೆಟ್ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ 30, ಜೆಡಿಎಸ್ 10 ನಿಗಮ ಮಂಡಳಿಗಳನ್ನು ಹಂಚಿಕೊಂಡಿವೆ. ಸಚಿವ ಸ್ಥಾನ ಕೈ ತಪ್ಪಿದ ಹಿರಿಯ ಶಾಸಕರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಪ್ರಸ್ತಾವನೆ ಇತ್ತು.
ಈಗ ಬಜೆಟ್ ಅಧಿವೇಶನ ನಡೆಯುತ್ತಿದೆ. ಈಗ ನೇಮಕಾತಿ ಮಾಡಿದರೆ ಸ್ಥಾನ ಕೈತಪ್ಪಿದವರು ಬಂಡಾಯ ಏಳಬಹುದು ಎಂಬ ಹಿನ್ನಲೆಯಲ್ಲಿ ನೇಮಕಾತಿಯನ್ನು ಮುಂದೂಡಲಾಗಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ನೇಮಕಾತಿ ಮಾಡಲು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.