ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಗಮ-ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ!

By Gururaj
|
Google Oneindia Kannada News

ಬೆಂಗಳೂರು, ಜುಲೈ 03 : ನಿಗಮ-ಮಂಡಳಿಗಳಿಗೆ ನೇಮಕವಾಗುವ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಲಿದೆ. ಸದ್ಯಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನಪಡಿಸಲು ಚಿಂತನೆ ನಡೆಸಲಾಗಿತ್ತು.

ನಿಗಮ, ಮಂಡಳಿಗೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಶಾಸಕರಿಗೆ ಬಂಪರ್ನಿಗಮ, ಮಂಡಳಿಗೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಶಾಸಕರಿಗೆ ಬಂಪರ್

ಆದರೆ, ನಿಗಮ-ಮಂಡಳಿ ನೇಮಕದ ಬಳಿಕ ಮತ್ತೆ ಅಸಮಾಧಾನ ಉಂಟಾಗುವ ನಿರೀಕ್ಷೆ ಹಿನ್ನಲೆಯಲ್ಲಿ ನೇಕಮಾತಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಬಜೆಟ್ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

Boards and Corporations appointment after Budget session

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ 30, ಜೆಡಿಎಸ್ 10 ನಿಗಮ ಮಂಡಳಿಗಳನ್ನು ಹಂಚಿಕೊಂಡಿವೆ. ಸಚಿವ ಸ್ಥಾನ ಕೈ ತಪ್ಪಿದ ಹಿರಿಯ ಶಾಸಕರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಪ್ರಸ್ತಾವನೆ ಇತ್ತು.

ಸಮನ್ವಯ ಸಮಿತಿ ಸಭೆ ಮುಖ್ಯಾಂಶಗಳುಸಮನ್ವಯ ಸಮಿತಿ ಸಭೆ ಮುಖ್ಯಾಂಶಗಳು

ಈಗ ಬಜೆಟ್ ಅಧಿವೇಶನ ನಡೆಯುತ್ತಿದೆ. ಈಗ ನೇಮಕಾತಿ ಮಾಡಿದರೆ ಸ್ಥಾನ ಕೈತಪ್ಪಿದವರು ಬಂಡಾಯ ಏಳಬಹುದು ಎಂಬ ಹಿನ್ನಲೆಯಲ್ಲಿ ನೇಮಕಾತಿಯನ್ನು ಮುಂದೂಡಲಾಗಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ನೇಮಕಾತಿ ಮಾಡಲು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

English summary
Karnataka government decided to appointment presidents to boards, corporations after Karnataka Budget session 2018. Chief Minister H.D.Kumaraswamy will present budget on July 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X