Breaking: ಕರ್ನಾಟಕದ ವಿವಿಧ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ, ಕಲಾಪಗಳು ಮೊಟಕು, ಎಲ್ಲೆಡೆ ಆತಂಕ
ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳ ಕೋರ್ಟ್ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ನ್ಯಾಯಾಲಗಳ ಇಂದಿನ ಕಲಾಪಗಳು ಮೊಟಕುಕೊಂಡಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಶಾಲಾ, ಕಾಲೇಜುಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿದ್ದವು. ಇದೀಗ ರಾಜ್ಯದ ವಿವಿಧ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಕರ್ನಾಟಕದ ಹಾವೇರಿ,ಕೊಡಗು, ಮಂಡ್ಯ, ಧಾರವಾಡ, ದಾವಣಗೆರೆ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಏಕಕಾಲಕ್ಕೆ ಹಲವು ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಸಂದೇಶ ಬಂದಿದ್ದು, ವಕೀಲರು, ನ್ಯಾಯಾಧೀಶರು ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಲಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ, ಸ್ಥಳೀಯ ಪೊಲೀಸರು ಹಾಗೂ ಸಿಬ್ಬಂದಿ ಕೋರ್ಟ್ ಆವರಣ, ಹಾಲ್ಗಳನ್ನು, ಕೊಠಡಿಗಳನ್ನು ಪರಿಶೀಲಿಸಿದ್ದಾರೆ. ಎಲ್ಲೆಡೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಇದರ ಬೆನ್ನಲ್ಲೆ ಸುರಕ್ಷತೆ, ಜೀವ ರಕ್ಷಣೆಯ ಮುಂಜಾಗ್ರತೆ ದೃಷ್ಟಿಯಿಂದ ಇಂದಿನ ಎಲ್ಲ ಕೋರ್ಟ್ ಕಲಾಪಗಳನ್ನು ಮೊಟಕುಗೊಳಿಸಲಾಗಿದೆ.
13 ಸಲ ಬಾಂಬ್ ಬೆದರಿಕೆ
ಕಳೆದ 46 ದಿನದಲ್ಲಿ 13 ಸಲ ಬಾಂಬ್ ಬೆದರಿಕೆ ಬಂದಿದ್ದಾಗಿ ವರದಿ ಆಗಿದೆ. ಶಾಲಾ ಕಾಲೇಜುಗಳು ಆಯ್ತು ಇದೀಗ ನ್ಯಾಯ ನೀಡುವ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ. ಸದ್ಯ ಎಲ್ಲಿಯೂ ಸ್ಪೋಟ, ಅಹಿತಕರ ಘಟನೆಗಳು ನಡೆದಿದೆ. ಇದು ಹುಸಿ ಬಾಂಬ್ ಬೆದರಿಕೆ ಎನ್ನಲಾಗಿದೆ. ಸದ್ಯ ಇ-ಮೇಲೆ ಬಂದಿದ್ದು ಎಲ್ಲಿಂದ? ಎಂಬಿತ್ಯಾದಿ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications