Bommai Family: ಬೊಮ್ಮಾಯಿ ಕುಟುಂಬಕ್ಕೆ ಸೋಲಿನ ಇತಿಹಾಸ ಇದೆ: ಏನಿದು ಗೊತ್ತಾ ?
ಹುಬ್ಬಳ್ಳಿ, ನವೆಂಬರ್ 25: ಬೊಮ್ಮಾಯಿ ಕುಟುಂಬ ಉತ್ತರ ಕರ್ನಾಟಕ ಭಾಗದ ಅತ್ಯಂತ ಪ್ರಭಾವ ಶಾಲಿ ರಾಜಕೀಯ ಇತಿಹಾಸವುಳ್ಳ ಮನೆತನ. ರಾಜ್ಯ ರಾಜಕಾರಣದಲ್ಲಿ ಅಜ್ಜ ಮಗ, ಮೊಮ್ಮಗ ಹೀಗೆ ಮೂರು ತಲೆಮಾರಿನ ರಾಜಕೀಯ ಇತಿಹಾಸವಿರುವ ಬೊಮ್ಮಾಯಿ ಕುಟುಂಬಕ್ಕೆ ಮೊದಲ ಈ ಚುನಾವಣೆಯಲ್ಲಿ ಸೋಲಿನ ಪರಂಪರೆಯೂ ಇದೆ.
ಪ್ರಸಕ್ತ ಉಪ ಚುನಾವಣೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕೂಡ ಪ್ರಥಮ ಚುನಾವಣೆಯಲ್ಲಿ ಸೋಲುವ ಮೂಲಕ ಆ ಪರಂಪರೆ ಮುಂದುವರಿದಿದೆ.

ಬಸವರಾಜ ಬೊಮ್ಮಾಯಿಯವರ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ, ಇವರ ಪುತ್ರನಾದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಇವರ ಪುತ್ರ ಭರತ್ ಬೊಮ್ಮಾಯಿ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂವರು ತಾವು ಎದುರಿಸಿರುವ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ.
ಈ ಹಿಂದೆ ವಕೀಲರಾಗಿದ್ದ ಎಸ್ ಆರ್.ಬೊಮ್ಮಾಯಿ ಪ್ರಥಮ ಬಾರಿಗೆ 1962ರಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಕೆ. ಕಾಂಬಳೆ ವಿರುದ್ಧ ಸೋಲು ಅನುಭವಿಸಿದ್ದರು. 1967ರಲ್ಲಿ ಆದೇ ಕ್ಷೇತ್ರದಿಂದ ಕಾಂಗ್ರೆಸ್ನ ಟಿ.ಕೆ ಕಾಂಬಳೆ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರದಲ್ಲಿ ಎಸ್.ಆರ್ .ಬೊಮ್ಮಾಯಿ ಜನತಾ ಪಕ್ಷದ ಹುರಿಯಾಳಾಗಿ ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರದಿಂದ 1978 ರಿಂದ 1985 ಚುನಾವಣೆಯಲ್ಲಿ ಸತತ ಗೆಲವು ಸಾಧಿಸಿದ್ದರು. 1988-89 ರಲ್ಲಿ ರಾಜ್ಯದ ನಾಲ್ಕನೇ ಮುಖ್ಯಮಂತ್ರಿಯಾಗಿದ್ದರು.
ಜಗದೀಶ್ ಶೆಟ್ಟರ್ ಎದುರು ಮೊದಲ ಸೋಲು
1994ರ ಚುನಾವಣೆಯಲ್ಲಿ ಎಸ್. ಆರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ಗ್ರಾಮೀಣ ವಿಧಾನಸಭಾ ಕೇತ್ರದಿಂದ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿದ್ದರು. ಅದೇ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸಿದ ಜಗದೀಶ ಶೆಟ್ಟರ್ ವಿರುದ್ಧ ಬಸವರಾಜ ಬೊಮ್ಮಾಯಿ ಸೋಲು ಅನುಭವಿಸಿದ್ದರು. ನಂತರದಲ್ಲಿ ಬಸವರಾಜ ಬೊಮ್ಮಾಯಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 2008 ರಿಂದ 2024 ರವರೆಗೆ ಸತತ ನಾಲ್ಕು ಬಾರಿ ಗೆದ್ದಿದ್ದರು. 2021ರಿಂದ 2023 ವರೆಗೆ ರಾಜ್ಯದಲ್ಲಿ 23ನೇ ಮುಖ್ಯಮಂತ್ರಿಯೂ ಆಗಿದ್ದರು.
ಅಜ್ಜ, ಅಪ್ಪನ ಹಾದಿಯಲ್ಲಿ ಮಗ ಭರತ್ ಬೊಮ್ಮಾಯಿ
ಅದೇ ರೀತಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ತಂದೆ ಸ್ಪರ್ಧಿಸಿದ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರೂ ಯಾವುದೇ ಚುನಾವಣೆ ಎದುರಿಸಿರಲಿಲ್ಲ. ಶಿಗ್ಗಾವಿ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಬಸವರಾಜ ಬೊಮ್ಮಾಯಿ 2024ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಶಿಗ್ಗಾವಿ ಕ್ಷೇತ್ರಕ್ಕೆ 2024 ನವೆಂಬರ್ 13 ರಂದು ನಡೆದ ಉಪ ಚುನಾವಣೆಗೆ ಪ್ರಥಮ ಬಾರಿಗೆ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಪ್ರಥಮ ಚುನಾವಣೆಯಲ್ಲಿಯೇ ಕಾಂಗ್ರೆಸ್ ಯಾಸೀರ್ ಖಾನ್ ಪಠಾಣ ವಿರುದ್ಧ 13,448 ಮತಗಳಿಂದ ಸೋಲು ಅನುಭವಿಸುವ ಮೂಲಕ ಬೊಮ್ಮಾಯಿ ಕುಟುಂಬದ ಮೊದಲ ಚುನಾವಣೆ ಸೋಲಿನ ಪಡೆಪದೆ ಪುನರಾವರ್ತನೆಯಾದಂತಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications