ಬೊಮ್ಮನಹಳ್ಳಿ ಕ್ಷೇತ್ರದ ಪ್ರಜೆಗಳಿಗೆ ಉತ್ತಮ ರಸ್ತೆಗಳನ್ನು ನೀಡುವ ಗುರಿ ನಮ್ಮದು: ಶಾಸಕ ಸತೀಶ್ ರೆಡ್ಡಿ
ಬೊಮ್ಮನಹಳ್ಳಿ ಕ್ಷೇತ್ರದ ಜನರು ಅಭಿವೃದ್ಧಿ ನಂಬಿ ನನ್ನನ್ನು ಆಯ್ಕೆ ಮಾಡಿದ್ದಾರೆ, ಬೊಮ್ಮನಹಳ್ಳಿ ಕ್ಷೇತ್ರದ ಪ್ರಜೆಗಳಿಗೆ ಅಭಿವೃದ್ಧಿ ಕೆಲಸಗಳನ್ನು ತಲುಪಿಸುವುದು ನನ್ನ ಕರ್ತವ್ಯವಾಗಿದೆ. ಹೀಗಾಗಿ, ಬೊಮ್ಮನಹಳ್ಳಿ ಕ್ಷೇತ್ರದ ಪ್ರಜೆಗಳಿಗೆ ಉತ್ತಮ ರಸ್ತೆಗಳನ್ನು ನೀಡುವ ಗುರಿ ನಮ್ಮದು. ಇದಕ್ಕಾಗಿಯೇ ಹಗಲು & ರಾತ್ರಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ತಿಳಿಸಿದರು. ಬಿಳೇಕಹಳ್ಳಿ, ಹೊಸಪಾಳ್ಯ ಸೇರಿದಂತೆ ಬೊಮ್ಮನಹಳ್ಳಿ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಿಳೇಕಹಳ್ಳಿ ಸೋಮೇಶ್ವರ ಲೇಔಟ್ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ ಹಾಗೂ ಹೊಸಪಾಳ್ಯ ಭಾಗದಲ್ಲಿ ರಸ್ತೆ ಡಾಂಬಾರೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿ ಶಾಸಕರಾದ ಸತೀಶ್ ರೆಡ್ಡಿ ಮಾತನಾಡಿದರು. ಈ ಅಭಿವೃದ್ಧಿ ಕಾಮಗಾರಿಗಳು ಪ್ರಜೆಗಳಿಗೆ ದೈನಂದಿನ ಜೀವನಕ್ಕೆ ದೊಡ್ಡ ಮಟ್ಟದಲ್ಲಿ ಸಹಾಯಕವಾಗದ್ದು, ಸಂಚಾರ ಸುಗಮವಾಗಲು ಹಲವು ಪ್ರಮುಖ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಕ್ಷೇತ್ರದ ಹಲವು ಕಡೆ ಅಗತ್ಯ ಇರುವ ಎಲ್ಲಾ ಕಾಮಗಾರಿ ಮುಗಿಸಲಾಗಿದ್ದು, ಬಾಕಿ ಇರುವ ಕೆಲಸಗಳು ವೇಗವಾಗಿ ಸಾಗಿವೆ ಎಂದು ಶಾಸಕರಾದ ಸತೀಶ್ ರೆಡ್ಡಿ ತಿಳಿಸಿದರು.

ಹೊಸಪಾಳ್ಯ ಭಾಗದಲ್ಲಿ ರಸ್ತೆ ಅಭಿವೃದ್ಧಿ
ಬೆಂಗಳೂರಿನ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಸಪಾಳ್ಯ ಪ್ರದೇಶದಲ್ಲಿ ಕೂಡ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸ್ಥಳೀಯರ ಜೊತೆಗೆ ಕುಂದು & ಕೊರತೆ ಬಗ್ಗೆ ಚರ್ಚೆ ಮಾಡಿದ ಶಾಸಕ ಸತೀಶ್ ರೆಡ್ಡಿ ಅವರು, ಅಭಿವೃದ್ಧಿ ಕಾಮಗಾರಿ ಕುರಿತು ಮಾಹಿತಿ ಪಡೆದರು. ಮಾಜಿ ನಗರಸಭಾ ಸದಸ್ಯ ಶ್ರೀನಿವಾಸ್ ರೆಡ್ಡಿ ಮತ್ತು ಬಿಜೆಪಿ ಮುಖಂಡ ಜಗದೀಶ್ ಗೌಡ, ಚಂದ್ರ ರೆಡ್ಡಿ ಹಾಗೂ ಗೋಪಿನಾಥ್ ರೆಡ್ಡಿ ಅವರು ಈ ವೇಳೆ ಹಾಜರಿದ್ದರು.
ರಸ್ತೆ ಗುಂಡಿ ಮುಚ್ಚಿಸಲು ಮಹತ್ವದ ಅಭಿಯಾನ
ಮೊದಲೇ ಹೇಳಿದಂತೆ ಬೆಂಗಳೂರಿನ ಪ್ರಮುಖ ಕ್ಷೇತ್ರಗಳಲ್ಲಿ ಬೊಮ್ಮನಹಳ್ಳಿಯು ಮೊದಲಾಗಿದ್ದು, ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ಕಂಪನಿಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಈಗ ಗುಂಡಿಮುಕ್ತ ಬೊಮ್ಮನಹಳ್ಳಿ ಅಭಿಯಾನ ಕೈಗೊಳ್ಳಲಾಗಿದ್ದು, ಈ ಬಗ್ಗೆ ಕೂಡ ಶಾಸಕ ಸತೀಶ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಬೊಮ್ಮನಹಳ್ಳಿ ಕ್ಷೇತ್ರದ ವಿವಿಧ ಪ್ರಮುಖ ಮಾರ್ಗಗಳಲ್ಲಿ ರಸ್ತೆ ದುರಸ್ತಿ & ಪ್ಯಾಚ್ ವರ್ಕ್ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು. ಈ ಮೂಲಕ ನಾಗರಿಕರು ಸುಗಮವಾಗಿ ಸಂಚಾರ ಮಾಡಲು ಕ್ರಮ ಕೈಗೊಂಡಿದ್ದೇವೆಂದು ಶಾಸಕರಾದ ಸತೀಶ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications