ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ರೆಡ್ಡಿ
ಕನ್ನಡ ನಾಡಿಗೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಕನ್ನಡ ನಾಡಿನ ಸಂಸ್ಕೃತಿ ಪ್ರಪಂಚಕ್ಕೇ ಗೊತ್ತು. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದರು. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸತೀಶ್ ರೆಡ್ಡಿ ಅವರು, ಕನ್ನಡ ಭಾಷೆಯನ್ನ ಪ್ರತಿನಿತ್ಯವೂ ಬಳಸುತ್ತ ಬೆಳೆಸಬೇಕಾಗಿರುವುದು ಕನ್ನಡಿಗರಾದ ನಮ್ಮ ಕರ್ತವ್ಯ ಎಂದರು. ಅಲ್ಲದೆ ಆಧುನಿಕ ಕಾಲದಲ್ಲಿ ಕನ್ನಡದ ಅಭಿವೃದ್ಧಿ ಬಗ್ಗೆ ಹಲವು ಸಲಹೆ ನೀಡಿದರು.
ಕನ್ನಡ ಭಾಷೆಯ ಬೆಳವಣಿಗೆಗೆ ನೂರಾರು ಬರಹಗಾರರು ಕೊಡುಗೆ ನೀಡಿದ್ದಾರೆ, ಕನ್ನಡ ಭಾಷೆಯು ಪ್ರಪಂಚದ ಅತ್ಯಂತ ಹಳೆಯ ಭಾಷೆಗಳಲ್ಲಿ ಒಂದಾಗಿದೆ ಎಂಬುದೇ ನಮ್ಮೆಲ್ಲರಿಗೂ ಹಮ್ಮೆ ತರುವ ವಿಚಾರ. ನಾವು ನಮ್ಮ ಪ್ರತಿನಿತ್ಯದ ಜೀವನದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಬಳಸುತ್ತಾ ಭಾಷೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕಾಗಿದೆ. ಆಧುನಿಕ ಕಾಲದಲ್ಲಿ ಕನ್ನಡ ಭಾಷೆಯ ಗತ್ತು ಪ್ರಪಂಚಕ್ಕೆ ಗೊತ್ತಿದೆ. ಹಾಗೇ ಕನ್ನಡ ಶಾಲೆಗಳನ್ನು ನಾವು ಅಭಿವೃದ್ಧಿ ಪಡಿಸುತ್ತಾ ಮುಂದಿನ ಪೀಳಿಗೆಗೆ ಕೂಡ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಸತೀಶ್ ರೆಡ್ಡಿ ಅವರು ತಿಳಿಸಿದರು.

ಹೊಂಗಸಂದ್ರ ಸರ್ಕಾರಿ ಶಾಲೆಗೆ ಹೈಟೆಕ್ ರೂಪ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ರೂಪ ನೀಡಲಾಗಿದ್ದು, ಇತ್ತೀಚೆಗೆ ನೂತನ ಕಟ್ಟಡ ಲೋಕಾರ್ಪಣೆ ಮಾಡಲಾಗಿತ್ತು. ಹೊಂಗಸಂದ್ರದಲ್ಲಿ ಗಾರ್ಮೆಂಟ್ಸ್ ಸೇರಿ ಹಲವು ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕುಟುಂಬಗಳು ನೆಲೆಸಿವೆ ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಯಿಂದ ಮಕ್ಕಳಿಗೆ ಸಾಕಷ್ಟು ಅನುಕೂಲ ಆಗುತ್ತಿದೆ.
ಶಾಲೆ ಅಭಿವೃದ್ಧಿಯಿಂದ ಹೆಚ್ಚು ಅನುಕೂಲ
ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಸೌಲಭ್ಯ ಕಲ್ಪಿಸಿರುವುದು ಸಾಕಷ್ಟು ನೆರವು ನೀಡಿದ್ದು, ಸ್ಥಳೀಯರಿಗು ಕೂಡ ಹೊಂಗಸಂದ್ರ ಸರ್ಕಾರಿ ಶಾಲೆ ಅಭಿವೃದ್ಧಿ ಜೊತೆ ಹೈಟೆಕ್ ಸ್ಪರ್ಶ ನೀಡಿರುವುದು ಸಂತಸವನ್ನ ತಂದಿದೆ. ಹಾಗೇ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಶಾಸಕ ಸತೀಶ್ ರೆಡ್ಡಿ ಅವರು ತಿಳಿಸಿದ್ದರು. ಒಟ್ನಲ್ಲಿ ಈ ಮೂಲಕ ಕನ್ನಡ ಶಾಲೆಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮಾಡುವ ಕೆಲಸ ಜೋರಾಗಿ ಸಾಗಿದ್ದು, ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಇದು ಹೆಚ್ಚು ಅನುಕೂಲ ಮಾಡಿಕೊಡುತ್ತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications