ಬೊಮ್ಮನಹಳ್ಳಿ ಬಿಜೆಪಿ ಶಾಸಕರಿಂದ ‘ಧರ್ಮಯಾತ್ರೆ’ ಆರಂಭ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಭೇಟಿ
ಹಿಂದೂಗಳ ಪವಿತ್ರ ಸ್ಥಳ ಎಂದು ಕರೆಯಲಾಗುವ 'ಧರ್ಮಸ್ಥಳ'ಕ್ಕೆ ಇದೀಗ ಸಾಲು, ಸಾಲಾಗಿ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಇಡೀ ಜಗತ್ತಿನ ಮೂಲೆ ಮೂಲೆಯಿಂದ ಲಕ್ಷ ಲಕ್ಷ ಭಕ್ತರು ಆಗಮಿಸುತ್ತಾರೆ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿಯ ದೇವಾಲಯಕ್ಕೆ. ಆದರೆ ಸುಖಾಸುಮ್ಮನೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರವನ್ನ ಕಿಡಿಗೇಡಿಗಳು ಮಾಡುತ್ತಿದ್ದಾರೆ ಅಂತಾ ಗಂಭೀರ ಆರೋಪ ಮಾಡಲಾಗಿತ್ತು. ಇದೇ ವಿಚಾರವಾಗಿ ಇದೀಗ ಸ್ಪಷ್ಟ ಚಿತ್ರಣವು ಸಿಕ್ಕಿದ್ದು, ಈ ಸಮಯದಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರಿಂದ 'ಧರ್ಮಯಾತ್ರೆ' ನಡೆಸಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆವರನ್ನ ಭೇಟಿ ಮಾಡಿ ಆಶೀರ್ವಾದ ಪಡೆಯಲಾಗಿದೆ.
ಶನಿವಾರ ಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದಿಂದ 'ಧರ್ಮಯಾತ್ರೆ' ಶುರು ಮಾಡಲಾಗಿತ್ತು, ಶಾಸಕ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಬೃಹತ್ ಮಟ್ಟದಲ್ಲಿ 'ಧರ್ಮಯಾತ್ರೆ' ಆರಂಭಿಸಲಾಗಿತ್ತು. ಹೀಗೆ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಶುರುವಾಗಿದ್ದ ಧರ್ಮಯಾತ್ರೆ ಹಲವಾರು ಊರುಗಳಲ್ಲಿ ಧರ್ಮಪ್ರಚಾರ ನಡೆಸಿ, ಅಂತಿಮವಾಗಿ ಧರ್ಮಸ್ಥಳ ತಲುಪಿತು. ನೂರಾರು ವಾಹನಗಳಲ್ಲಿ ಏಕಕಾಲಕ್ಕೆ ಧರ್ಮಯಾತ್ರೆ ಆರಂಭ ಮಾಡಲಾಗಿತ್ತು. ಇದೇ ಕಾರಣಕ್ಕೆ, ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಈ ಯಾತ್ರೆ ಇಡೀ ರಾಜ್ಯದ ಗಮನ ಸೆಳೆದಿತ್ತು.

'ಧರ್ಮಯಾತ್ರೆ'ಗೆ ಚಾಲನೆ ನೀಡಿದ ಶಾಸಕರು
'ಧರ್ಮಯಾತ್ರೆ' ಆರಂಭಕ್ಕೂ ಮುನ್ನ ವಿಶೇಷ ಪೂಜೆ ನೆರವೇರಿಸಲಾಯಿತು, ಅಂದಹಾಗೆ ಈ ವೇಳೆ ನೂರಾರು ಕಾರ್ಯಕರ್ತರು ಕೂಡ ಹಾಜರಿದ್ದರು. ಹಾಗೇ ಬೊಮ್ಮನಹಳ್ಳಿ ಶಾಸಕರಾದ ಶಾಸಕ ಸತೀಶ್ ರೆಡ್ಡಿ ಅವರು ವಿಶೇಷ ಪೂಜೆ ನೆರವೇರಿಸಿ, 'ಧರ್ಮಯಾತ್ರೆ'ಗೆ ಚಾಲನೆ ನೀಡಿದರು. ಭಕ್ತಿಯಲ್ಲಿ ಏಕತೆ, ಧರ್ಮದಲ್ಲಿ ಶ್ರದ್ಧೆ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಉತ್ತೇಜಿಸುವ ಉದ್ದೇಶದಿಂದ ಈ ಯಾತ್ರೆ ಕೈಗೊಂಡಿರುವುದಾಗಿ ಆಯೋಜಕರು ಮಾಹಿತಿ ನೀಡಿದರು. ಭವ್ಯ ಉದ್ಘಾಟನೆ ನೆರವೇರಿಸಿ, ಭಕ್ತರ ಜೊತೆ ಧಾರ್ಮಿಕ ಯಾತ್ರೆಯನ್ನು ಪ್ರಾರಂಭಿಸಲಾಯಿತು.
ವೀರೇಂದ್ರ ಹೆಗ್ಗಡೆ ಅವರ ಭೇಟಿ
ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿದ ಯಾತ್ರೆ, ಧರ್ಮಸ್ಥಳಕ್ಕೆ ತಲುಪಿತು. ಶ್ರೀಮಂಜುನಾಥ ಸ್ವಾಮಿ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕರು ಮತ್ತು ಮಂಜುನಾಥ ಸ್ವಾಮಿಯ ಭಕ್ತರು ಆಶೀರ್ವಾದ ಪಡೆದರು. ಈ ಮೂಲಕ ಬೊಮ್ಮನಹಳ್ಳಿ ಕ್ಷೇತ್ರದಿಂದ ಕೈಗೊಂಡಿದ್ದ ಯಾತ್ರೆ ಇದೀಗ ಸಾಕಷ್ಟು ಗಮನ ಸೆಳೆದಿತ್ತು. ಹಾಗೇ, ನೂರಾರು ವಾಹನಗಳಲ್ಲಿ ಭಕ್ತರು ತೆರಳಿದ್ದ ಹಿನ್ನೆಲೆ ಸಾಕಷ್ಟು ಮುಂಜಾಗ್ರತಾ ಕ್ರಮದ ಜೊತೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಕೂಡ ಮಾಡಲಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications