Government Employees: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಪ್ರಯುಕ್ತ ಬೋನಸ್ ಘೋಷಣೆ
ಬೆಂಗಳೂರು, ಸೆಪ್ಟೆಂಬರ್ 22: ರಾಜ್ಯ ಸರ್ಕಾರದಿಂದ ತನ್ನ ಅಧೀನದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ದಸರ ಗಿಫ್ಟ್ ಅನ್ನು ನೀಡಿದ್ದು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿಯಲ್ಲಿ ಬೋನಸ್ ನೀಡಲು ಮುಂದಾಗಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ 01.04.2020 ರಿಂದ 31.03.2022 ಕ್ಕೆ ಅಂತ್ಯಗೊಂಡ ದ್ವೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ:01.04.2020 ರಿಂದ 31.03.2022 ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡುವ ಬಗ್ಗೆ, ಆದೇಶದಲ್ಲಿ ಬೆಂಗಳೂರು ನಿರ್ದೇಶಕರು, ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ಮೇಲೆ ಓದಲಾದ ಪತ್ರದಲ್ಲಿ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು,

1958ರ ನಿಯಮ-22ರನ್ವಯ ವಿಮಾ ಮೌಲ್ಯಮಾಪನವನ್ನು ದೈವಾರ್ಷಿಕವಾಗಿ ಮಾಡಿಸಬೇಕಾಗಿದ್ದು, ಅದರನ್ವಯ 2020-2022ನೇ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ವಿಮಾ ಪಾಲಿಸಿಗಳ ಮೌಲ್ಯಮಾಪನವನ್ನು ನಡೆಸಿ, ಅಧಿಲಾಭಾಂಶವನ್ನು ಘೋಷಿಸಲು ಅನುವಾಗುವಂತೆ ಮೌಲ್ಯಮಾಪನ ಕಾರ್ಯ ಕೈಗೊಳ್ಳಲು ವಿಮಾ ಗಣಕಕಾರರನ್ನು ನೇಮಿಸದ್ದು, ವಿಮಾ ಗಣಕಕಾರರು 2020-2022ನೇ ಅವಧಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಈ ಕೆಳಕಂಡಂತ ಮೌಲ್ಯಮಾಪನ ವರದಿ ನೀಡಿರುತ್ತಾರೆ ಅಂತ ತಿಳಿಸಿದೆ.
ಇದೇ ವೇಳೆ ವಿಮಾ ವ್ಯವಹಾರದ ಮೇಲಿನ ನಿವ್ವಳ ಹೊಣೆಗಾರಿಕೆ : ರೂ. 5,624.46 ಕೋಟಿಗಳು 7. ಮೌಲ್ಯಮಾಪನದ ಹೆಚ್ಚುವರಿ (Surplus)ರೂ. 2524.53 ಕೋಟಿಗಳು ವಿಮಾ ಗಣಕರು ತಮ್ಮ ವರದಿಯಲ್ಲಿ ದಿನಾಂಕ:31.03.2022 ರಂದು ಚಾಲ್ತಿಯಲ್ಲಿರುವ ಎಲ್ಲಾ ಪಾಲಿಸಿಗಳಿಗೆ ಪ್ರತಿ ಸಾವಿರ ವಿಮಾ ಮೊತ್ತಕ್ಕೆ ಪ್ರತಿ ವರ್ಷಕ್ಕೆ ರೂ.80/- ರಂತ ಪ್ರತ್ಯಾವರ್ತಿ ಲಾಭಾಂಶವನ್ನು ಘೋಷಿಸಲು ಹಾಗೂ ಈ ಉದ್ದೇಶಕ್ಕಾಗಿ ಮೌಲ್ಯಮಾಪನದ ಅನುಸಾರ ಒಟ್ಟಾರೆಯಾಗಿ ಹೆಚ್ಚಳವಾಗಿರುವ ರೂ. 2524.53 ಕೋಟಿಗಳಲ್ಲಿ ರೂ.1955.95 ಕೋಟಿಗಳನ್ನು ಸರಳ ಪ್ರತ್ಯಾವರ್ತಿ ಲಾಭಾಂಶವಾಗಿ ವಿತರಣೆ ಮಾಡಲು ಹಾಗೂ ಉಳಿದ ರೂ.568.57 ಕೋಟಿ ಮೊತ್ತವನ್ನು ಅವರ್ಗೀಕೃತವಾಗಿ ಮುಂದುವರಿಸಲ್ಪಟ್ಟ ಮೊಬಲಗು ಎಂದು ಪರಿಗಣಿಸಿ ಮುಂದಿನ ಮೌಲ್ಯಮಾಪನ ಅವಧಿಗೆ ಕೊಂಡೊಯ್ಯಲು ವಿಮಾ ಗಣಕರು ಶಿಫಾರಸ್ಸು ಮಾಡಿರುತ್ತಾರೆ.
ಕರ್ನಾಟಕ ಸರ್ಕಾರಿ ವಿಮಾ ಇಲಾಖೆ, ಇವರು ವಿಮಾ ಗಣಕರು ಮೌಲ್ಯಮಾಪನ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಪರಿಗಣಿಸಿ, ದಿನಾಂಕ:31.03.2022 ರಂದು ಚಾಲ್ತಿಯಲ್ಲಿದ್ದ ಪಾಲಿಸಿಗಳ ಮೇಲೆ ವಿಮಾ ಮೊತ್ತದ ಪ್ರತಿ ರೂ.1000 ಗಳಿಗೆ ವಾರ್ಷಿಕವಾಗಿ ರೂ.80/- ರ ದರದಲ್ಲಿ ಬೋನಸ್ ನೀಡುವುದರ ಜೊತೆಗೆ ದಿನಾಂಕ:01.04.2022 ರಿಂದ 31.03.2024ರ ಅವಧಿಯಲ್ಲಿ ಅವಧಿಪೂರ್ಣ, ಮರಣಜನ್ಯ ಹಾಗೂ ಎಲ್ಲಾ ವಿಮಾ ತ್ಯಾಗ ಮೌಲ್ಯಗಳಿಂದ ಹೊರಹೋಗಿರುವ ಪಾಲಿಸಿಗಳಿಗೆ ಮುಂದಿನ ಮೌಲ್ಯಮಾಪನ ಅವಧಿಯವರೆಗೆ ಪ್ರತಿ ರೂ.1000/- ಗಳಿಗೆ ವಾರ್ಷಿಕವಾಗಿ ರೂ.80/- ಗಳ ಮಧ್ಯಂತರ ಅಧಿಲಾಭಾಂಶವನ್ನು ನೀಡಲು ಸರ್ಕಾರದ ಅನುಮೋದನೆಯನ್ನು ಕೋರಿರುವ ಪ್ರಸ್ತಾವನೆಯನ್ನು ವಿವರವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು ನಿರ್ವಹಿಸುತ್ತಿರುವ ಕಡ್ಡಾಯ ಜೀವ ವಿಮಾ ಯೋಜನೆಗೆ ಸಂಬಂಧಿಸಿದಂತ, 2020-2022 ರ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯನ್ನು ಆಧರಿಸಿ ಈ ಕೆಳಕಂಡಂತೆ ಬೋನಸ್ ನೀಡಲು ಸರ್ಕಾರದ ಮಂಜೂರಾತಿ ನೀಡಿದೆ.
(1) ದಿನಾಂ: 01.04.2020 ರಿಂದ 31.03.2022 8 ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಲಾಭಾಂಶ(Bonus) ನೀಡುವುದು.
(ii) ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ໖:01.04.2022 8໐໖ 31.03.2024 ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/-ರಂತೆ ಮಧ್ಯಂತರ ಲಾಭಾಂಶವನ್ನು (Interim ನೀಡುವುದು. Bonus)
-
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications