Karnataka Bandh: ಕಾವೇರಿಗಾಗಿ ಹೋರಾಟಕ್ಕೆ ಚಿತ್ರರಂಗ ಸಾಥ್; ನಟ ಶಿವರಾಜ್ ಕುಮಾರ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 28: ಕಾವೇರಿ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ಕೊಟ್ಟಿದ್ದು, ಚನಲಚಿತ್ರ ವಾಣಿಜ್ಯ ಮಂಡಳಿಯೂ ಸಹ ಕಾವೇರಿ ಉಳಿವಿಗಾಗಿ ಹೋರಾಟದಲ್ಲಿ ಸಾಥ್ ನೀಡಿದೆ.
ಈ ಕುರಿತು ವಾಣಿಜ್ಯ ಮಂಡಳಿ ಹೋರಾಟದಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು. ನಮ್ಮ ಅನುಕೂಲಕ್ಕಾಗಿ ಪರಿಸ್ಥಿತಿ ಲಾಭ ಪಡೆದುಕೊಳ್ಳಬಾರದು ಎಂದು ಹೇಳಿದರು.

ಇನ್ನೂ ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ? ನಾವು ಬಂದು ನಿಂತಿಕೊಳ್ತೀವಿ ಏನು ಆಗುತ್ತೆ ಹೇಳಿ? ಎಂದು ನಟ ಶಿವರಾಜ್ ಕುಮಾರ್ ಪ್ರಶ್ನಿಸಿದ್ದಾರೆ.
ನಾವು ಬಂದು ಮಾತನಾಡಿ ಹೋದರೇ ಸಮಸ್ಯೆ ಬಗೆಹರಿಯುತ್ತಾ? ಎಲ್ಲ ನಾಯಕರು ಕೂತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು. ಎಲ್ಲರೂ ರೈತರೇ, ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಸ್ನ ಹೊಡೆದು ಹಾಕಿದರೇ ಹೋರಾಟ ಆಗುತ್ತಾ? ಎಂದು ಶಿವರಾಜ್ ಕುಮಾರ್ ಪ್ರಶ್ನಿಸಿದರು
ಎಲ್ಲ ನಾಯಕರು ಕೂತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು. ಎಲ್ಲರೂ ರೈತರೇ, ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಸ್ನ ಹೊಡೆದು ಹಾಕಿದರೇ ಹೋರಾಟ ಆಗುತ್ತಾ? ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು ಎಂದು ಹೇಳಿದರು.
ಕಾವೇರಿ ನಮ್ಮ ಜೀವನಾಡಿ, ರೈತರ ಜೀವನಾಡಿ, ರೈತರ ಬಾಳು ಹಸನಾದರೆ ನಾವೆಲ್ಲರೂ ಬದುಕುತ್ತೇವೆ. ನಾಡು, ನುಡಿ, ನೆಲ ಮತ್ತು ಜಲ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರು ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತೇವೆ. ನಮ್ಮ ಬೆಂಬಲ ಸರ್ಕಾರಕ್ಕಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ರೈತರ ಹಿತ ಕಾಪಾಡಬೇಕು ಎಂದರು.
ಸಮಸ್ಯೆ ಇದೆ. ಸಮಸ್ಯೆಯಿಂದ ಹೇಗೆ ಆಚೆ ಬರಬೇಕು ಯೋಚನೆ ಮಾಡಬೇಕು. ಹೃದಯದಿಂದ ಯೋಚನೆ ಮಾಡ್ಬೇಡಿ ಬುದ್ಧಿಯಿಂದ ಯೋಚಿಸಿ, ಕನ್ನಡಿಗರು ಎಲ್ಲ ಭಾಷೆಯ ಸಿನೆಮಾ ನೋಡುತ್ತಾರೆ. ಅದು ಕನ್ನಡಿಗರು ಮಾತ್ರ. ನಮ್ಮ ಜನ, ನಮ್ಮ ರೈತರ ಮೇಲೆ ಗೌರವ ಇರಲ್ವ? ನಾನು ಯಾವತ್ತಿದ್ರು ತಲೆಯಿಂದ ಅಲ್ಲ ಹೃದಯದಿಂದ ಮಾತಾಡ್ತಿನಿ. ದಯವಿಟ್ಟು ಬ್ಲೇ ಮಾಡಬೇಡಿ. ಎಲ್ಲ ಕಲಾವಿದರು ಒಂದೇ ಅವರಿವರು ಬರಲಿಲ್ಲ ಅನ್ಬೇಡಿ ಎಂದು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications