BPL, APL Card: ರಾಜ್ಯದಲ್ಲಿ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ; ಎಲ್ಲಿವರೆಗೂ
BPL And APL Ration Card: ರಾಜ್ಯದಲ್ಲಿ ಹೊಸ (ಬಿಪಿಎಲ್, ಎಪಿಎಲ್) ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಆರಂಭ ಮಾಡಲಾಗಿದೆ. ಹಾಗಾದ್ರೆ ಎಲ್ಲಿವರೆಗೆ ಹಾಗೂ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ ಎನ್ನವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ahara.kar.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅದರಲ್ಲೂ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಮಯ ನಿಗದಿ ಮಾಡಕಾಗಿದೆ. ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025ರಿಂದ 05-05-2025ರ ವರೆಗೆ ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಹೊಸ ಕಾರ್ಡ್ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
* ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು
* ಹೊಸದಾಗಿ ವಿವಾಹವಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಿರಲಿದೆ.
ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆಗಳು ಅಗತ್ಯ?
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ವಾಹನ ಚಾಲನಾ ಪರವಾನಗಿ
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದೇಗೆ?
* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ
* ಮುಖಪುಟದಲ್ಲಿನ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ
* ಅಷ್ಟೇ ಅಲ್ಲದೆ, https://ahara.kar.nic.in/Home/EServices ವೆಬ್ಸೈಟ್ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.
* ನಂತರ ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ.
* ನಂತರ ಕೆಳಗಡೆ ಸ್ಕ್ರಾಲ್ ಮಾಡಿದರೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ
* ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ.
* ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ
* ಬಳಿಕ ಅರ್ಜಿಯ ಜೊತೆಗೆ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಸ್ಥಗಿತವಾಗಿದ್ದೇಕೆ?: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಹುತೇಕ ಮಂದಿ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿತ್ತು. ಬಳಿಕ ಎಚ್ಚೆತ್ತ ಸರ್ಕಾರ ಹೊಸ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಿಬಿಟ್ಟಿತು. ಅರ್ಹರಲ್ಲದವರು ಸಹ ಬಿಪಿಎಲ್ ಕಾರ್ಡ್ಗಳನ್ನು ಪಡೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications