ರಾಜ್ಯದಲ್ಲಿ BPL, APL ಕಾರ್ಡುದಾರರಿಗೆ ಹೊಸ ಯೋಜನೆ-ಮಾಹಿತಿ, ವಿವರ
ಬೆಂಗಳೂರು, ಫೆಬ್ರವರಿ, 21: ಸರ್ಕಾರ ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಬಡಜನರಿಗೆ ಅನುಕೂಲವಾಗುವಂತೆ ಉತ್ತಮ ಕೆಂದ್ರ ಅರ್ಕಾರದ ಸಹಯೋಗದಲ್ಲಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇನ್ನು ಸರ್ಕಾರ ಪ್ರಧಾನಮಂತ್ರಿ ಆಯುಷ್ಮಾನ್ ಕಾರ್ಡ್ ಅನ್ನು ಜಾರಿಗೆ ತಂದಿದ್ದು, ಇದೀಹ ಕರ್ನಾಟಕದಲ್ಲಿ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಎನ್ನುವ ಹೆಸರಿನಲ್ಲಿ ವಿತರಣೆ ಮಾಡಲಾಗುತ್ತಿದೆ.
ಈ ಒಂದು ಕಾರ್ಡ್ ಮೂಲಕ ಬಿಪಿಎಲ್ ಕಾರ್ಡ್ ಇದ್ದವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್ ಇದ್ದವರು 2 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಪ್ರಯೋಜನಾ ಪಡೆದುಕೊಳ್ಳಲಿದ್ದಾರೆ. ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲದೆ, ಕೆಲವು ಪ್ರಮುಖ ಗುರುತಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಈ ಕಾರ್ಡ್ ಹೊಂದಿರುವವರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಈ ಯೋಚನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು 5 ಲಕ್ಷ ರೂಪಾಯಿಗಳ ಆರೋಗ್ಯ ನೆರವು ಪಡೆದುಕೊಳ್ಳುತ್ತಾರೆ. ಅದೇ ರೀತಿ ಎಪಿಎಲ್ ಕಾರ್ಡ್ ಹೊಂದಿರುವವರಿಗೆ 1.5 ಲಕ್ಷಗಳಿಂದ 2 ಲಕ್ಷ ರೂಪಾಯಿ ಚಿಕಿತ್ಸಾ ರಿಯಾಯಿತಿ ಪಡೆದಕೊಳ್ಳಬಹುದು.
ಇದೀಗ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆದುಕೊಳ್ಳಲು ನೀವು ಆನ್ಲೈನ್ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಹೇಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೆಲ್ತ್ ಕಾರ್ಡ್ ಪಡೆದುಕೊಳ್ಳಬಹುದು ಇಲ್ಲಿ ತಿಳಿಯಿರಿ. https://abdm.gov.in/ ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಂತರ ಹೆಲ್ತ್ ಯೋಜನೆಯ ಮುಖ್ಯಪುಟ ತೆರೆದುಕೊಳ್ಳುತ್ತದೆ. ABHA ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ನಂತರ ನಿಮ್ಮ ಮೊಬೈಲ್ ಒಂದು ಓಟಿಪಿ ಕಳುಹಿಸಲಾಗುತ್ತದೆ. ಅದನ್ನ ಇಲ್ಲಿ ನಮೂದಿಸಬೇಕು.
ಈಗ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಬೇಕು. ಈ ರೀತಿ ಮಾಹಿತಿಯನ್ನು ನೀಡಿ ಅದನ್ನು ಸಬ್ಮಿಟ್ ಮಾಡುವುದಕ್ಕೂ ಮೊದಲು ಮತ್ತೊಮ್ಮೆ ಪರಿಶೀಲನೆ ಮಾಡಿ. ಆರೋಗ್ಯ ಇಲಾಖೆ ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸರಿಯಾಗಿದ್ದರೆ ನಿಮಗೆ ಆಯುಷ್ಮಾನ್ ಕಾರ್ಡ್ ಅನ್ನು ಒದಗಿಸುತ್ತದೆ. ಬಳಿಕ ನೀವು ಸರ್ಕಾರದಿಂದ ಸಿಗುವ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಲು ಅರ್ಹರಾಗುತ್ತೀರಿ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications