ಬಿಪಿಎಲ್ ಕಾರ್ಡ್ ವಿತರಣೆ ತಾತ್ಕಾಲಿಕ ಸ್ಥಗಿತ!
ಬೆಂಗಳೂರು, ಜೂನ್ 21: ಈಗಾಗಲೇ ತನ್ನ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಆದಾಯಕ್ಕಾಗಿ ಪರದಾಡುತ್ತಿರುವ ಈ ಸಮಯದಲ್ಲಿ ರಾಜ್ಯದ ಬೊಕ್ಕಸಕ್ಕೆ ಆಗುವ ಹೆಚ್ಚುವರಿ ಹೊರೆಯನ್ನು ಸರಿದೂಗಿಸುವ ಬಗ್ಗೆ ಎಚ್ಚರದಿಂದಿರುವ ಕಾಂಗ್ರೆಸ್ ಸರ್ಕಾರವು ಹೊಸ ಬಿಪಿಎಲ್ ಕಾರ್ಡ್ಗಳ ಸೇರ್ಪಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಬಿಪಿಎಲ್ ಕಾರ್ಡ್ ಅದರ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿಗಳಿಗೆ ಕಡ್ಡಾಯವಾಗಿ ಬೇಕಾಗಿದೆ. ಅದೆಂದರೆ ಅನ್ನ ಭಾಗ್ಯ (ಪ್ರತಿ BPL ಸದಸ್ಯರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಉಚಿತ) ಮತ್ತು ಗೃಹ ಲಕ್ಷ್ಮಿ (ಪ್ರತಿ ಮನೆಯ ಮಹಿಳೆಗೆ ಪ್ರತಿ ತಿಂಗಳು 2,000 ರೂ.). ಇದರಲ್ಲಿ ಅನ್ನ ಭಾಗ್ಯಕ್ಕೆ 10,092 ಕೋಟಿ ರೂ. ವೆಚ್ಚವಾಗಲಿದ್ದು, ಗೃಹ ಲಕ್ಷ್ಮಿಗೆ ವಾರ್ಷಿಕ 25,000-30,000 ಕೋಟಿ ರೂ. ವೆಚ್ಚವಾಗಿಲಿದೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕದಲ್ಲಿ 1.2 ಕೋಟಿ ಬಿಪಿಎಲ್ ಕಾರ್ಡ್ಗಳು ಇದ್ದು, 4.42 ಕೋಟಿ ಜನರನ್ನು ಒಳಗೊಂಡಿದೆ. ಬಿಪಿಎಲ್ ಕಾರ್ಡ್ ಕೋರಿ 2.95 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ ಬಾಕಿ ಇವೆ. ವಿಧಾನಸಭೆ ಚುನಾವಣೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗುವವರೆಗೂ ಸರ್ಕಾರ ಕಾರ್ಡ್ಗಳನ್ನು ನೀಡುತ್ತಿತ್ತು. ಸದ್ಯಕ್ಕೆ ಕಾರ್ಡು ವಿತರಣೆಯನ್ನು ನಿಲ್ಲಿಸುವಂತೆ ತಿಳಿಸಿರುವುದರಿಂದ ನಾವು ಅದನ್ನು ಪುನರಾರಂಭಿಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯಕ್ಕೆ ಸರ್ಕಾರವು ಆಹಾರ ಪೋರ್ಟಲ್ನಲ್ಲಿ ಹೊಸ ಅಪ್ಲಿಕೇಶನ್ಗಳ ವಿಂಡೋವನ್ನು ಮುಚ್ಚಿದ್ದು, ಇದು ನಾಗರಿಕರು ಹೊಸ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸಬಹುದಾದ ಆನ್ಲೈನ್ ಇಂಟರ್ಫೇಸ್ ಆಗಿದೆ. ಇದಲ್ಲದೆ ಕಾರ್ಡ್ಗಳ ವಿಭಜನೆಗೆ ಇತ್ತೀಚೆಗೆ ವಿನಂತಿಗಳು ಹೆಚ್ಚಾಗಿ ಬಂದಿವೆ ಎನ್ನಲಾಗಿದೆ.
ವಿಭಜನೆ ಎಂದರೆ ಹಿಂದಿನ ಅವಿಭಕ್ತ ಕುಟುಂಬವು ಎರಡು ಕಾರ್ಡ್ಗಳನ್ನು ಎರಡು ಪ್ರತ್ಯೇಕ ಘಟಕಗಳಾಗಿ ಪರಿಗಣಿಸಲು ಸರ್ಕಾರವನ್ನು ಕೋರುವ ಮೂಲಕ ಹಕ್ಕು ಪಡೆಯುವುದು. ಇದು ಅನ್ನ ಭಾಗ್ಯಕ್ಕೆ ಸಮಸ್ಯೆಯಾಗದಿದ್ದರೂ ಜನರ ಸಂಖ್ಯೆ ಹಾಗೆಯೇ ಉಳಿಯುತ್ತದೆ. ಇದು ಗೃಹ ಲಕ್ಷ್ಮಿ ಯೋಜನೆಯ ಮೇಲೆ ಪರಿಣಾಮ ಬೀರುತ್ತದೆ.
ಇದಲ್ಲದೆ, ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲು ನಗರ ಜನಸಂಖ್ಯೆಯ 45% ಮತ್ತು ಗ್ರಾಮೀಣ ಜನಸಂಖ್ಯೆಯ 70% ಗುರಿಯನ್ನು ನಿಗದಿಪಡಿಸಿದರೆ, ಕರ್ನಾಟಕವು ಈಗಾಗಲೇ ಈ ಗುರಿಯನ್ನು ಮೀರಿದೆ. ರಾಜ್ಯದಲ್ಲಿ ಅಗತ್ಯಕ್ಕಿಂತ 14 ಲಕ್ಷ ಹೆಚ್ಚುವರಿ ಕಾರ್ಡ್ಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಿತಿಯನ್ನು ಪಾಲಿಸುವುದು ಕಡ್ಡಾಯವಲ್ಲವಾದರೂ, ಅಂತಹ ಕಾರ್ಡ್ಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ವಿತರಿಸಲಾದ ಧಾನ್ಯಗಳ ವೆಚ್ಚವನ್ನು ಭರಿಸುವವರೆಗೆ ರಾಜ್ಯವು ಹೆಚ್ಚುವರಿ ಕಾರ್ಡ್ಗಳನ್ನು ನೀಡಬಹುದು. ಸರ್ಕಾರವು 3.2 ಲಕ್ಷ ನಕಲಿ ಕಾರ್ಡ್ಗಳನ್ನು ತೆಗೆದುಹಾಕಿದ್ದು, ಅದರ ಬದಲು ಹೊಸ ಕಾರ್ಡ್ಗಳನ್ನು ನೀಡುತ್ತಿದೆ. ಯಾವುದೇ ಹೊಸ ಕಾರ್ಡ್ಗಳ ವಿತರಣೆಗೆ ಮುಖ್ಯಮಂತ್ರಿಗಳು ಈಗಲೇ ಅನುಮೋದನೆ ನೀಡಬೇಕಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications