BPL Card: ಬಿಪಿಎಲ್ ಕಾರ್ಡ್ದಾರರಿಗೆ ಸಂಕ್ರಾಂತಿಗೂ ಸಿಗದ ಇಂದಿರಾ ಕಿಟ್?; ವಿಳಂಬಕ್ಕೆ ಅಸಲಿ ಕಾರಣ ಏನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ದೇವರಾಜ್ ಅಸರು ಅವರ ದಾಖಲೆ ಬ್ರೇಕ್ ಮಾಡಿದ ಖುಷಿಯಲ್ಲಿದ್ದಾರೆ. ಆದರೆ, ಕರ್ನಾಟಕ ಸರ್ಕಾರದ ಜನಪ್ರಿಯ ಯೋಜನೆಯಾದ ಅನ್ನಭಾಗ್ಯದಡಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಇಂದಿರಾ ಕಿಟ್ ವಿತರಿಸುವ ಭರವಸೆ ನೀಡಿತ್ತು. ಆದರೆ ಇದೀಗ ಜನವರಿ ತಿಂಗಳಲ್ಲೂ ಈ ಭರವಸೆ ಈಡೇರಿಲ್ಲ. ರಾಜ್ಯ ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಮತ್ತಿತರ ದಿನಸಿ ಪದಾರ್ಥಗಳನ್ನು ನೀಡುವ ಭರವಸೆಯನ್ನ ನೀಡಿತ್ತು. ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದ ಸರ್ಕಾರ, ಈ ತಿಂಗಳು ಕೂಡ ನೀಡಿಲ್ಲ.

ಹೊಸ ವರ್ಷದ ಹೊಸ್ತಿಲಲ್ಲಿ ನಡೆಯುವ ಮಕರ ಸಂಕ್ರಾಂತಿ ವೇಳೆಗೆ ಪಡಿತರದಾರಿಗೆ 5 ಕೆಜಿ ಅಕ್ಕಿ ಬದಲಾಗಿ ಇಂಡಿರಾ ಕಿಟ್ ಅನ್ನು ಪರ್ಯಾಯವಾಗಿ ನೀಡಲು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ರಾಜ್ಯ ಸರ್ಕಾರ ಇದೀಗ ಸದ್ದಿಲ್ಲದೇ ಇಂದಿರಾ ಕಿಟ್ ಬದಲಾಗಿ ತಲಾ 5 ಕೆಜಿ ಅಕ್ಕಿಯನ್ನೇ ವಿತರಿಸಲು ಮುಂದಾಗಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ತಲಾ 5 ಕೆಜಿ ಹೆಚ್ಚುವರಿ ಅಕ್ಕಿ ನೀಡುತ್ತಿದ್ದ ಸರ್ಕಾರ, ಇದನ್ನು ಬದಲಾಯಿಸಿ ಇಂದಿರಾ ಕ್ಯಾಂಟೀನ್ ಕಿಟ್ ನೀಡುವ ನಿರ್ಧಾರ ತೆಗೆದುಕೊಂಡಿತ್ತು. ಇಂದಿರಾ ಕಿಟ್ನಲ್ಲಿ ಅಕ್ಕಿ, ಬೇಳೆ, ಎಣ್ಣೆ, ಉಪ್ಪು ಮುಂತಾದ ಅಗತ್ಯ ವಸ್ತುಗಳು ಇರುತ್ತವೆ ಎಂದು ಘೋಷಿಸಲಾಗಿತ್ತು. ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಜನವರಿಯಲ್ಲಿ ಇಂದಿರಾ ಕಿಟ್ ನೀಡುವುದಾಗಿ ಹೇಳಿದ್ರು. ಅಲ್ಲದೇ ಜನವರಿ ತಿಂಗಳಿಂದ ಇಂದಿರಾ ಕಿಟ್ ವಿತರಣೆ ಆರಂಭವಾಗುತ್ತದೆ ಎಂದು ಸರ್ಕಾರದ ಮೇಲ್ಮಟ್ಟದ ಅಧಿಕಾರಿಗಳು ಹೇಳಿದ್ದರು. ಆದರೆ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿಯದ ಕಾರಣದಿಂದ ಈ ತಿಂಗಳೂ ಹಳೆಯ ವ್ಯವಸ್ಥೆಯೇ ಮುಂದುವರಿದಿದೆ.
ಗೃಹ ಲಕ್ಷ್ಮಿ ಯೋಜನೆ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸರ್ಕಾರ ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಇಂದಿರಾ ಕಿಟ್ ನೀಡುತ್ತೇವೆ ಎಂದಿದ್ದು, ಮತ್ತಷ್ಟು ವಿಳಂಬ ಮಾಡಿದೆ. ಇದರಿಂದ ಪಡಿತರದಾರರಲ್ಲಿ ನಿರಾಸೆ ಮೂಡಿದೆ. ಮಾರ್ಚ್ ವೇಳೆಗೆ ಕಿಟ್ ವಿತರಣೆ ಸಾಧ್ಯವಾಗಬಹುದು ಎಂಬ ನಿರೀಕ್ಷೆಯಿದೆ. ಇನ್ನೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿರುವ ಮಾಹಿತಿ ಪ್ರಕಾರ, ಇಂದಿರಾ ಕಿಟ್ ವಿತರಣೆಗೆ ಟೆಂಡರ್ ಕರೆಯಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆ ವಿಳಂಬವಾಗಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ಕಿಟ್ ವಿತರಣೆ ಆರಂಭವಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಯಿಂದ ಹೆಚ್ಚುವರಿ ಅಕ್ಕಿ ಸಿಕ್ಕಿದ್ದು ಸಹಾಯಕವಾಗಿತ್ತು. ಆದರೆ ಈ ಬಾರಿ ರಾಜ್ಯ ಸರ್ಕಾರ ಇಂದಿರಾ ಕಿಟ್ ಭರವಸೆ ಈಡೇರದೇ ಇರುವುದು ನಿರಾಸೆ ಮೂಡಿಸಿದೆ ಎಂದು ಪಡಿತರ ಚೀಟಿ ಹೊಂದಿರುವ ಕುಟುಂಬಗಳು ತಿಳಿಸಿವೆ. ಸರ್ಕಾರದ ಮೇಲ್ಮಟ್ಟದ ಸೂತ್ರಗಳ ಪ್ರಕಾರ, ಟೆಂಡರ್ ಪ್ರಕ್ರಿಯೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಇಂದಿರಾ ಕಿಟ್ನಲ್ಲಿ ಒಳಗೊಳ್ಳುವ ವಸ್ತುಗಳ ಗುಣಮಟ್ಟ ಇಮತ್ತು ಪೂರೈಕೆದಾರರ ಆಯ್ಕೆಯಲ್ಲಿ ಜಾಗೃತಿ ವಹಿಸಲಾಗುತ್ತಿದೆ. ಇದರಿಂದ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಶೀಘ್ರದಲ್ಲೇ ಟೆಂಡರ್ ಪೂರ್ಣಗೊಳ್ಳಲಿದ್ದು, ಮಾರ್ಚ್ನಿಂದ ಕಿಟ್ ವಿತರಣೆ ಆರಂಭವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications