BPL Card: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ದಾರರಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು, ಜನವರಿ 22: ರಾಜ್ಯದ ಬಿಪಿಎಲ್ ಕಾರ್ಡ್ದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಗುಡ್ ನ್ಯೂಸ್ ನೀಡಿದ್ದು, ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆಯಲ್ಲೂ ಬಿಪಿಎಲ್ ಕಾರ್ಡ್ದಾರರು ವಿವಿಧ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇನ್ನೂ ಇದೀಗ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಆಸ್ತಿಮಜ್ಜೆ ಕಸಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿಎನ್ ಮಂಜುನಾಥ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿಎನ್ ಮಂಜುನಾಥ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಈಗ ಉಚಿತವಾಗಿದೆ ಎಂದಿದ್ದಾರೆ.
ಈ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವ ಮಂಜುನಾಥ್ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹಾಗೂ ಜೀವನ್ ಸಾರ್ಥಕತೆ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಕೋಡ್ ಮಾಡಲಾದ ಕಾರ್ಯವಿಧಾನವಾಗಿ ಸೇರಿಸಲು ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಿದ್ದೆ ಮತ್ತು ನಿರಂತರವಾಗಿ ಅನುಸರಿಸುತ್ತಿದೆ ಎಂದಿದ್ದಾರೆ.
ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಮಜ್ಜೆ ಕಸಿ ಅಗತ್ಯವಿದೆ. ಪ್ರಸ್ತುತ, ಈ ನಿರ್ದಿಷ್ಟ ಕಾರ್ಯವಿಧಾನವು ಹೆಚ್ಚು ದುಬಾರಿಯಾಗಿದೆ, ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸುಮಾರು 10-12 ಲಕ್ಷ ವೆಚ್ಚವಾಗುತ್ತದೆ ಎಂದು ಬಿಜೆಪಿ ಸಂಸದ ಡಾ. ಮಂಜುನಾಥ್ ತಿಳಿಸಿದ್ದಾರೆ.
ಈಗ ಅಸ್ಥಿಮಜ್ಜೆ ಕಸಿಯನ್ನು ಕೋಡ್ ಮಾಡಲಾದ ಕಾರ್ಯವಿಧಾನವಾಗಿ ಸೇರಿಸಲಾಗಿರುವುದರಿಂದ, ಈ ಕಾರ್ಯವಿಧಾನವನ್ನು ಎಂಪಾನೆಲ್ ಮಾಡಿದ ಆಸ್ಪತ್ರೆಗಳಲ್ಲಿ ಉಚಿತವಾಗಿ ಮಾಡಲಾಗುತ್ತದೆ. ಈ ಉಪಕ್ರಮದಿಂದ ಅಪಾರ ಪ್ರಯೋಜನ ಪಡೆಯಲಿರುವ ಬಿಪಿಎಲ್ ವರ್ಗದ ರೋಗಿಗಳಿಗೆ ಇದು ದೊಡ್ಡ ವರದಾನವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬಿಜೆಪಿ ಸಂಸದ ಮಂಜುನಾಥ ಅವರು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ ಎನ್ನುವ ಸೂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.












Click it and Unblock the Notifications