Get Updates
Get notified of breaking news, exclusive insights, and must-see stories!

BPL Card: ರಾಜ್ಯದಲ್ಲಿನ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌

BPL Card: ಪಡಿತರ ಚೀಟಿಯಲ್ಲಿ ಹಲವು ವಿಧಗಳಿವೆ. ಈ ಪೈಕಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಗಾಗ ಸರ್ಕಾರವು ಇವರಿಗೆ ಗುಡ್‌ ನ್ಯೂಸ್‌ಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಮತ್ತೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ಸರ್ಕಾರವು ರದ್ದು ಮಾಡುತ್ತಾ ಬಂದಿತ್ತು. ಆದರೆ, ಕೆಲವರು ಅರ್ಹರ ಬಳಿಯಿದ್ದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುತ್ತಿದೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಸಹ ನಡೆಸಿದ್ದರು. ಬಳಿಕ ಎಚ್ಚೆತ್ತ ಸರ್ಕಾರವು ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ಗಳನ್ನು ನೀಡಿ ಅವರಿಗೆ ತಲುಪಬೇಕಾದ ಪಡಿತರವನ್ನು ಕೊಡಲಾಗುತ್ತದೆ ಎಂದು ಹೇಳಿತ್ತು.

BPL Ration Card Rice Millet and jowar Distribution in state

ಮತ್ತೊಂದೆಡೆ ಸರ್ಕಾರದ ಪಂಚ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೂ ಕೂಡ ಹಲವರು ಈ ಕಾರ್ಡ್ ಅನ್ನು ದುರುಪಯೋಗ ಪಡಿಸಿಕೊಂಡ ಘಟನೆಗಳು ಬೆಳಕಿಗೆ ಬಂದಿದ್ದವು. ಬಳಿಕ ಸರ್ಕಾರವು ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿತು. ಮತ್ತೊಮ್ಮೆ ಹೊಸ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ಕ್ಲೋಸ್‌ ಮಾಡಲಾಯಿತು.

ಇನ್ನು ಇದೀಗ ರಾಜ್ಯದಲ್ಲಿನ ಬಿಪಿಎಲ್‌ ಕಾರ್ಡುದಾರರಿಗೆ ಸರ್ಕಾರವು ಶುಭ ಸುದ್ದಿಯೊಂದನ್ನು ನೀಡಿದೆ. ಸಾಮಾನ್ಯವಾಗಿ ಈ ಕಾರ್ಡನ್ನು ಬಡತನದಲ್ಲಿರುವವರಿಗೆ ನೀಡಲಾಗುತ್ತದೆ. ಯಾಕೆಂದರೆ ಇದರಡಿಯಲ್ಲಿ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಅಲ್ಲದೆ, ಉಚಿತ ಹಾಗೂ ಕಡಿಮೆ ದರದಲ್ಲಿ ಪಡಿತರ ವಿತರಣೆ ಮಾಡಲಾಗುತ್ತದೆ. ಹಾಗೆಯೇ ಮುಂದಿನ ತಿಂಗಳಿನಿಂದ ಅಂದರೆ ಮೇ ನಿಂದ ಈ ಕಾರ್ಡುದಾರರಿಗೆ ಅಕ್ಕಿ ಜೊತೆ ರಾಗಿ, ಜೋಳವನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಮೇ ತಿಂಗಳಿಂದ ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳವನ್ನು ವಿತರಣೆ ಮಾಡಲಾಗುತ್ತದೆ. ಸದ್ಯ ಇದೀಗ ಪ್ರತಿ ವ್ಯಕ್ತಿಗೆ ರಾಜ್ಯದಿಂದ 5 ಕೆ.ಜಿ. ಹಾಗೂ ಕೇಂದ್ರದಿಂದ 5 ಕೆ.ಜಿ. ಸೇರಿ ಒಟ್ಟು 10 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಈ ಪೈಕಿ ಗ್ರಾಹಕರಿಗೆ 2 ಅಥವಾ 3 ಕೆ.ಜಿ. ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ.

ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಕೋಟ್ಯಂತರ ಜನರಿಗೆ ಉಚಿತವಾಗಿ ತಲಾ 10 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ3 ಕೆ.ಜಿ. ರಾಗಿ ಹಾಗೂ 2 ಕೆ.ಜಿ. ಅಕ್ಕಿ ಹಾಗೂ ಉತ್ತರದ ಜಿಲ್ಲೆಗಳಲ್ಲಿ3 ಕೆ.ಜಿ. ಜೋಳ ಮತ್ತು 2 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದು.

ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುವುದು. ಕೆಲವು ಭಾಗಗಳಲ್ಲಿ ರಾಗಿ ಬಳಸಿದರೆ, ಇನ್ನೂ ಕೆಲವೆಡೆ ಜೋಳ ಬಳಕೆ ಮಾಡುತ್ತಾರೆ. ಆದ್ದರಿಂದ ಈ ಪದಾರ್ಥಗಳನ್ನೇ ನೀಡಲಾಗುವುದು. ಜನ ಏನನ್ನು ತಿನ್ನಲು ಬಯಸುತ್ತಾರೆಯೋ ಅದನ್ನೇ ನೀಡಲಾಗುವುದು ಎಂದು ಆಹಾರ ಇಲಾಖೆಯ ಆಕಾರಿಗಳು ತಿಳಿಸಿದ್ದಾರೆ.

ರೈತರಿಂದ ಭತ್ತ, ರಾಗಿ ಮತ್ತು ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ, ಸಂಗ್ರಹ ಮಾಡಲಾಗುತ್ತಿದೆ. ಖರೀದಿ ಕೇಂದ್ರಗಳಲ್ಲಿ ಮೇ ತಿಂಗಳವರೆಗೆ ಖರೀದಿ ನಡೆಯುತ್ತದೆ. 10 ತಿಂಗಳಿಗೆ ವಿತರಣೆ ಮಾಡುವಷ್ಟು ರಾಗಿ-ಜೋಳ ಖರೀದಿಸಿ ಸಂಗ್ರಹಿಸಿಡಲಾಗುವುದು. ರಾಗಿ/ಜೋಳ ವಿತರಣೆ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಕೆ ಮಾಡಲಾಗಿದೆ. ಬೆಂಬಲ ಬೆಲೆಯಡಿ ಖರೀದಿಸಿದ ರಾಗಿ ಅಥವಾ ಜೋಳವನ್ನು ಕೇಂದ್ರದ ಅನುಮತಿ ಮೇರೆಗೆ ಮುಂದಿನ ತಿಂಗಳಿನಿಂದ ವಿತರಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸುಮಾರು 8-10 ಜಿಲ್ಲೆಗಳನ್ನು ಹೊರತುಪಡಿಸಿದರೆ ಮಾಸಿಕ 30,000 ಮೆಟ್ರಿಕ್‌ ಟನ್‌ ರಾಗಿ ಬೇಕಾಗುತ್ತದೆ. 8,000 ಮೆಟ್ರಿಕ್‌ ಟನ್‌ ಜೋಳ ಬೇಕಾಗುತ್ತದೆ ಎಂದು ಇಲಾಖೆ ಅಂದಾಜು ಮಾಡಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್‌ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಉಳಿದಂತೆ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ. ಸಂಗ್ರಹಕ್ಕೆ ಅನುಗುಣವಾಗಿ ಅಕ್ಕಿಯ ಜತೆ 6-10 ತಿಂಗಳ ಕಾಲ ರಾಗಿ/ಜೋಳ ವಿತರಣೆ ಮಾಡಲಾಗುವುದು ಎನ್ನಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+