ಸಿಎಂ ಸಿದ್ದರಾಯ್ಯಗೆ ಶಾಸಕ ಬಿಆರ್ ಪಾಟೀಲ್ ಪತ್ರ: ರಾಜೀನಾಮೆ ಕೊಡ್ತಾರಾ ಶಾಸಕರು?
ಬೆಂಗಳೂರು, ನವೆಂಬರ್ 28: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಈ ಹಿಂದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ಅಸಮಾಧಾನ ಕುರಿತು ಕರ್ನಾಟಕ ಬಿಜೆಪಿಯು ಮಂಗಳವಾರ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಕಂಡಿರುವ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಲ್ಲಿ ಜನತೆಯ ಸಮಸ್ಯೆಗಳನ್ನು ಸಂಭಾಳಿಸುವುದು ಇರಲಿ ಸ್ವತಃ ಶಾಸಕರು, ಸಂಪುಟದ ಸಚಿವರನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಕುಟುಕಿದೆ.

ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಈ ಸಂಬಂಧ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
28 ಶಾಸಕರ ಜತೆ ಮತ್ತಷ್ಟು ಶಾಸಕರು ಅಸಮಾಧಾನ?
ಇದು ಕೇವಲ ಕರ್ನಾಟಕ ಕಾಂಗ್ರೆಸ್ ನ ಒಬ್ಬ ಶಾಸಕರ ಗೋಳಲ್ಲ. ಮೊದಲು ಪತ್ರ ಬರೆದ 28 ಶಾಸಕರ ಜತೆಗೆ ಮತ್ತಷ್ಟು ಶಾಸಕರು ಕೈಜೋಡಿಸಿದ್ದಾರೆ ಎಂದು ಬಿಜೆಪಿ ದೂರಿದೆ.

ಎಟಿಎಂ ಸರ್ಕಾರ (#ATMSarkara) ಎಂದ ಬಿಜೆಪಿಯು, ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬದಿಗೊತ್ತಿ ಒಂದು ಕಡೆ ಲೂಟಿ ಹೊಡೆಯುತ್ತಿದ್ದರೆ, ಇನ್ನೊಂದು ಕಡೆ ಒಳ ಜಗಳದಲ್ಲಿ ಮುಳುಗಿ ಹೋಗಿದೆ. ಗಂಡ ಹೆಂಡತಿಯ ನಡುವೆ ಕೂಸು ಬಡವಾಯಿತು ಎನ್ನುವಂತೆ ರಾಜ್ಯದ ಜನರು ಇವರ ಜಗಳಕ್ಕೆ ಬೇಸತ್ತು ಗುಳೆ ಹೊರಟಿದ್ದಾರೆ ಎಂದು ಆರೋಪಿಸಿತು.
ಬಿಆರ್ ಪಾಟೀಲರ ಆಕ್ರೋಶಕ್ಕೆ ಕಾರಣವೇನು?
ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಿಂದ ಕಾಮಗಾರಿ ನಡೆಸಿದ್ದು, ಅದರ ಕುರಿತು ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವಿಚಾರವಾಗಿ ಶಾಸಕ ಬಿಆರ್ ಪಾಟೀಲ್ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಪತ್ರ ಬರೆದಿದ್ದಾರೆ. ಇದೆಲ್ಲವನ್ನು ಬೆಳಗಾವಿ ಅಧಿವೇಶನದಲ್ಲಿ ಪರಿಹರಿಸಬೇಕು. ಇಲ್ಲವಾದರೆ ರಾಜೀನಾಮೆ ಕೊಡುವುದಾಗಿ ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications