ಡಿಕೆ ಶಿವಕುಮಾರ್ ಗೆ ಜಾಮೀನು, ನಿಜವಾಯ್ತೆ ಬ್ರಹ್ಮಾಂಡ ಗುರೂಜಿ ಭವಿಷ್ಯ
ಬೆಂಗಳೂರು, ಅಕ್ಟೋಬರ್ 23: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ದೆಹಲಿ ಹೈಕೋರ್ಟ್ ಬುಧವಾರದಂದು ಡಿಕೆಶಿಗೆ ಜಾಮೀನು ನೀಡಿದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ಬ್ರಹ್ಮಾಂಡ ಗುರೂಜಿ ಅವರು ಡಿಕೆ ಶಿವಕುಮಾರ್ ಬಗ್ಗೆ ನೀಡಿದ ಭವಿಷ್ಯ ಮತ್ತೆ ಚರ್ಚೆಗೆ ಬಂದಿದೆ.
ಹಾಸನಾಂಬೆ ದರ್ಶನ ಪಡೆದ ಬ್ರಹ್ಮಾಂಡ ಗುರೂಜಿ (ಜ್ಯೋತಿಷಿ ನರೇಂದ್ರ ಬಾಬು ಶರ್ಮ) ದೇಶದ ಪ್ರಧಾನಿ ಹಾಗೂ ರಾಜ್ಯಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಭವಿಷ್ಯವೊಂದನ್ನು ನುಡಿದಿದ್ದರು.

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ. ಪ್ರಧಾನಿಯ ಈ ಗಂಡಾಂತರಕ್ಕೆ ವೃಶ್ಚಿಕ ರಾಶಿ ದೋಷವೇ ಕಾರಣ ಎಂದು 2017ರಲ್ಲಿ ಇದೇ ಹಾಸನಾಂಬ ದೇಗುಲದ ಎದುರು ನಿಂತು ಹೇಳಿದ್ದರು. ಈಗಲೂ ಇದೇ ಮಾತನ್ನು ಪುನರುಚ್ಚರಿಸಿದ್ದರು. ಇದಾದ ಬಳಿಕ ಡಿ.ಕೆ ಶಿವಕುಮಾರ್ ಅವರ ಬಂಧನ, ಬಿಡುಗಡೆ ಬಗ್ಗೆ ತಿಳಿಸಿದ್ದರು.
ಡಿಕೆ ಶಿವಕುಮಾರ್ ಅವರ ಜೈಲುವಾಸ ಮುಂದಿನ ತಿಂಗಳು ಅಂತ್ಯವಾಗಲಿದೆ. ಆದರೆ, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ .ಆದರೆ, ಮುಂದಿನ 10 ವರ್ಷಗಳಲ್ಲಿ ಐದು ವರ್ಷ ಸಿಎಂಗಳನ್ನು ಕರ್ನಾಟಕ ಕಾಣಲಿದೆ ಎಂದಿದ್ದರು.
ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಬದಲಾವಣೆಯಾಗಲಿದೆ. ಹಿರಿಯ ರಾಜಕಾರಣಿಗಳು ಶಾಶ್ವತವಾಗಿ ಮೂಲೆಗುಂಪಾಗುವ ಕಾಲ ಬಂದಿದೆ, ಹಳಬರ ಪೈಕಿ ಯಾರೂ ಮುಖ್ಯಮಂತ್ರಿ ಆಗುವ ಯೋಗ ಹೊಂದಿಲ್ಲ. ಮುಂಬರುವ ಸರ್ಕಾರಕ್ಕೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರು ಪೂರ್ಣಾವಧಿ ಮುಖ್ಯಮಂತ್ರಿಯಾಗುವ ಯೋಗ ಹೊಂದಿಲ್ಲ. ಇನ್ಮುಂದೆ ಯಾವುದೇ ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications