ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿವಿಧ ಯೋಜನೆಗಳ ವಿವರಗಳು
ಬೆಂಗಳೂರು, ನವೆಂಬರ್ 17: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಬ್ರಾಹ್ಮಣ ಸಮಾಜದ ಸದುಪಯೋಗಕ್ಕಾಗಿ ರೂಪಿಸಿದೆ. ಈ ಕುರಿತು ವಿವಿಧ ಮಾಧ್ಯಮಗಳ ಮೂಲಕ ತಿಳುವಳಿಕೆಯನ್ನು ನೀಡುತ್ತಾ ಬಂದಿದೆ.
ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ Economically Weaker Section Certificate ನೀಡಲಾಗುತ್ತದೆ. ಇದನ್ನು ಪಡೆಯಲು ಬೇಕಾದ ಮಾನದಂಡಗಳು ಮತ್ತು ದಾಖಲೆಗಳ ವಿರಗಳನ್ನು ಇಲ್ಲಿ ನೀಡಲಾಗಿದೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿವಿಧ ಯೋಜನೆಗಳನ್ನು ಸಮುದಾಯದ ಜನರಿಗಾಗಿ ರೂಪಿಸಿದೆ. ಈ ಎಲ್ಲಾ ಯೋಜನೆಗಳ ಫಲಾನುಭವಿಗಳಾಗಲು EWS ಪ್ರಮಾಣ ಪತ್ರವನ್ನು ಹೊಂದಿರಬೇಕು. ಯೋಜನೆಗಳ ವಿವರ ಹೀಗಿದೆ.

ಸಾಂದೀಪನಿ ಶಿಷ್ಯ ವೇತನ (ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್), ಆಚಾರ್ಯತ್ರಯ ವೇದ ಶಿಷ್ಯ ವೇತನ (ವೇದ ಮತ್ತು ಸಂಸ್ಕೃತ ಶಿಕ್ಷಣ ಹಾಗೂ ಗುರು ಶಿಷ್ಯರಿಗೆ ವೇತನ). ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ (ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪುರಸ್ಕಾರ).
ಚಾಣಾಕ್ಯ ತರಬೇತಿ ಯೋಜನೆ (ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯ), ಸನ್ನಿಧಿ ಯೋಜನೆ (ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸುವುದು), ಸರ್. ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ (ಸ್ವಯಂ ಉದ್ಯೋಗ ತರಬೇತಿ), ಪುರುಷೋತ್ತಮ ಯೋಜನೆ (ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು).
ಅನ್ನದಾತ ಯೋಜನೆ (ಕೃಷಿಗೆ ನೆರವು), ಸೌಖ್ಯ ಯೋಜನೆ (ವೃದ್ಧರಿಗೆ ನೆರವು), ಕಲ್ಯಾಣ ಯೋಜನೆ (ಉಪನಯನ ಹಾಗೂ ವಿವಾಹಾದಿ ಶುಭಕಾರ್ಯಕ್ಕೆ ನೆರವು), ಚೈತನ್ಯ ಉತ್ಸವ ಯೋಜನೆ (ಬ್ರಾಹ್ಮಣ ಯುವಕರ ಸಂಘಟನೆ).
ಈ ಮೇಲಿನ ಎಲ್ಲಾ ಯೋಜನೆಗಳ ಫಲಾನುಭವಿಗಳಾಗಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅತೀ ಅಗತ್ಯ. ವಿಪ್ರ ಬಾಂಧವರು ಗ್ರಾಮ ಲೆಕ್ಕಿಗರನ್ನು, ಅಟಲ್ ಜನ ಸ್ನೇಹಿ ಕೇಂದ್ರ/ ನೆಮ್ಮದಿ ಕೇಂದ್ರ/ ತಾಲೂಕು ಕಚೇರಿಗಳಲ್ಲಿ ಈ ಯೋಜನೆಯಡಿ ಸಹಾಯ ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕು.
ವಾರ್ಷಿಕ ಆದಾಯ 8 ಲಕ್ಷ ರೂ. ಒಳಗೆ ಇರುವವರು Economically Weaker Section Certificate ಸಲ್ಲಿಕೆ ಮಾಡಿ, ಯೋಜನೆಯ ಉಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications