ಹೊಟ್ಟೆಗೆ ಊಟ ಇಲ್ಲದಿದ್ದ ಸಿ.ಟಿ. ರವಿ ಇಂದು ಸಾವಿರ ಕೋಟಿಯ ಮಾಲೀಕ!
ಬೆಂಗಳೂರು, ಆ. 27: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮುಖ್ಯಮಂತ್ರಿ ಪಟ್ಟ ಸ್ವಲ್ಪದರಲ್ಲಿ ತಪ್ಪಿದೆಯಾ? ಹೌದು ಅಂಥದ್ದೊಂದು ಮಾಹಿತಿಯನ್ನು ಕೇಂದ್ರ ಕಾಂಗ್ರೆಸ್ ನಾಯಕರು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಪಟ್ಟದ ಕನಸು ಕಾಣುತ್ತಿದ್ದ ಸಿ.ಟಿ. ರವಿ ಆ ಸ್ಥಾನ ಸಿಗದ ಬೇಸರದಲ್ಲಿ ಲಘುವಾಗಿ ಮಾತನಾಡುತ್ತಿದ್ದಾರಂತೆ!.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ಬದಲಾವಣೆ ಬಳಿಕ ಯಾರು? ಎಂಬ ಹುಡುಕಾಟದಲ್ಲಿ ಬಿಜೆಪಿ ವರಿಷ್ಠ ನಾಯಕರಿದ್ದರು. ಆಗ ಅವರು ಗುರುತಿಸಿದ್ದ ರಾಜ್ಯ ಬಿಜೆಪಿ ನಾಯಕರಲ್ಲಿ ಸಿ.ಟಿ. ರವಿ ಕೂಡ ಇದ್ದರು ಎನ್ನಲಾಗಿದೆ. ಸಿ.ಟಿ. ರವಿ ಅವರೊಂದಿಗೆ ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ವಿ. ಸುನಿಲ್ ಕುಮಾರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಅನೇಕರಿದ್ದರು.
ಕೊನೆಗೆ ಮಾಜಿ ಸಿಎಂ ಯಡಿಯೂರಪ್ಪ ಒತ್ತಡಕ್ಕೆ ಮಣಿದು ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಕೊಂಡಿತು ಎಂಬ ಮಾಹಿತಿಯಿದೆ. ಹೀಗಾಗಿ ಅಂತಿಮ ಕ್ಷಣದಲ್ಲಿ ಸಿ.ಟಿ. ರವಿ ಅವರಿಗೆ ಸಿಎಂ ಹುದ್ದೆ 'ಕೈ'ತಪ್ಪಿದೆ ಎಂದು 'ಕೈ' ನಾಯಕರು ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ.

ವಾಂತಿ ಬೇಧಿ ಬಂದವರಂತೆ ಮಾತನಾಡುತ್ತಿದ್ದಾರೆ!
"ಮುಖ್ಯಮಂತ್ರಿ ಪಟ್ಟದ ಕನಸು ಕಾಣುತ್ತಿದ್ದ ಸಿ.ಟಿ. ರವಿ, ಆ ಸ್ಥಾನ ಸಿಗದ ಬೇಸರದಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡುವುದನ್ನು ನಿಲ್ಲಿಸಲಿ. ಬಿಜೆಪಿಯಲ್ಲಿ ಯಾರೆಲ್ಲಾ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೋ ಅವರೆಲ್ಲ ನಿರಾಸೆಗೊಂಡು ವಾಂತಿ ಬೇಧಿ ಬಂದವರಂತೆ ಮಾತನಾಡುತ್ತಿದ್ದಾರೆ" ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಹೇಳಿದ್ದಾರೆ.
"ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಆ ಸ್ಥಾನದ ಮೇಲೆ ಆಸೆ ಪಟ್ಟವರು ಸಿ.ಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕೆ.ಎಸ್ ಈಶ್ವರಪ್ಪ ಅವರು. ಬಿಜೆಪಿ ಹೈಕಮಾಂಡ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ನಂತರ ಈ ಮೂವರ ಹತಾಶರಾಗಿ ವಾಂತಿ, ಬೇಧಿ ಬಂದವರಂತೆ ದಿನನಿತ್ಯ ಕೀಳು ಮಾತುಗಳನ್ನಾಡುತ್ತಿದ್ದಾರೆ" ಎಂದು ಟೀಕಿಸಿದ್ದಾರೆ.

ಲಕ್ಷ್ಮಣ್ ಸವದಿ ಯಾವ ಘನ ಕಾರ್ಯ ಮಾಡಿದ್ದಾರೆ?
"ಸಿ.ಟಿ ರವಿ ಅವರು ಹೆಚ್ಚು ನಿರಾಸೆಯಾದವರಂತೆ ಮೊದಲು ದಿ. ಇಂದಿರಾ ಗಾಂಧಿ ಅವರ ಬಗ್ಗೆ ಮಾತನಾಡಿದರು. ನಂತರ ನೆಹರೂ ಅವರ ಬಗ್ಗೆ ಮಾತನಾಡಿದರು. ನಂತರ ನಾವು ಅವರಿಗೆ ಪ್ರತ್ಯುತ್ತರ ನೀಡಿದಾಗ ರವಿ ಅವರು ಕೇಸ್ ದಾಖಲಿಸುವುದಾಗಿ ಹೇಳಿದರು. ಗಾಜಿನಮನೆಯಲ್ಲಿರುವವರು ಕಲ್ಲು ಬಿಸಾಡಬಾರದು ಎಂದು ಹೇಳುತ್ತಾರೆ. ಇದು ರವಿ ಅವರಿಗೆ ತಿಳಿದಿಲ್ಲ ಎನಿಸುತ್ತದೆ. ಹೀಗಾಗಿ ವಿನಯ್ ಕುಲಕರ್ಣಿ ಅವರ ಬಿಡುಗಡೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಜೈಲಿಗೆ ಹೋಗಿ ಬಂದವರಿಗೆ ಪ್ರಮೋಷನ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಲಕ್ಷ್ಮಣ್ ಸವದಿ ಅವರು ಯಾವ ಘನ ಕಾರ್ಯ ಮಾಡಿದ್ದಾರೆ ಎಂದು ಚುನಾವಣೆಯಲ್ಲಿ ಸೋತವರಿಗೆ ಉಪಮುಖ್ಯಮಂತ್ರಿ ಪಟ್ಟ ಕೊಟ್ಟರು?" ಎಂದು ಬ್ರಿಜೇಶ್ ಕಾಳಪ್ಪ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಮತ್ತು ಜೈಲು!
"ನಮ್ಮ ದೇಶದ ಗೃಹ ಮಂತ್ರಿಗಳು ಹಾಗೂ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ 17 ಜನರನ್ನು ನಕಲಿ ಎನ್ಕೌಂಟರ್ನಲ್ಲಿ ಸಾಯಿಸಿದ ಆರೋಪದಲ್ಲಿ ಜೈಲು ಸೇರಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ರಘುಪತಿ ಭಟ್, ಹಾಲಪ್ಪ, ಜನಾರ್ದನ ರೆಡ್ಡಿ ಸೇರಿದಂತೆ ಆಗಿನ ಬಿಜೆಪಿ ಸರ್ಕಾರದ ಅರ್ಧದಷ್ಟು ಸಂಪುಟ ಸಚಿವರು ಜೈಲು ಸೇರಿದ್ದರು. ಇಂತಹ ಹಿನ್ನೆಲೆ ಇಟ್ಟುಕೊಂಡು ಸಿ.ಟಿ. ರವಿ ಈ ರೀತಿಯಾಗಿ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಾರೆ" ಎಂದು ಆರೋಪಿಸಿದ್ದಾರೆ.
Recommended Video

ಊಟ ಇಲ್ಲದವರು ಈಗ ಸಾವಿರ ಕೋಟಿಯ ಮಾಲೀಕ
"ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನ 'ಲೂಟಿ ರವಿ' ಎಂದು ಕರೆಯುತ್ತಾರೆ. ಒಂದು ಸಂದರ್ಭದಲ್ಲಿ ಹೊಟ್ಟೆಗೆ ಊಟ ಇಲ್ಲದವರು ಇಂದು ಸಾವಿರ ಕೋಟಿಯ ಮಾಲೀಕರು. ಇದಕ್ಕೆ ಲೆಕ್ಕ ಎಲ್ಲಿದೆ? ಈ ಹಿನ್ನೆಲೆಯಲ್ಲಿ ಸಿ.ಟಿ ರವಿ ಅವರು ನಿರಾಸೆಯಿಂದ ಹಗುರವಾಗಿ ಮಾತನಾಡುವಾಗ ನಿಮ್ಮ ಎದುರಾಳಿಗಳು ನಿಮ್ಮ ಜತೆ ಅದೇ ರೀತಿ ಮಾತನಾಡುತ್ತಾರೆ ಎಂಬುದನ್ನು ಅರಿಯಿರಿ. ನೀವು ಮುಖ್ಯಮಂತ್ರಿಯಾಗುವ ಆಸೆ ಇದ್ದರೆ ಆಗಿ, ನಮ್ಮಲ್ಲಿ ಯಾರಿಗೂ ಬೇಸರ ಇಲ್ಲ. ನೀವು ಪಂಡಿತ್ ನೆಹರೂ ಅವರ ಬಗ್ಗೆ ಮಾತನಾಡಿಕೊಂಡು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೌರವ ಉಳಿಸಿಕೊಳ್ಳಿ. ನೆಹರೂ ಅವರಿಗೆ ನಿಮ್ಮ ತಂದೆ, ತಾತ ಅವರು ಕೂಡ ಮತ ಹಾಕಿರುತ್ತಾರೆ. ಈ ದೇಶಕ್ಕೆ ಮಹಾನ್ ಕೊಡುಗೆ ಕೊಟ್ಟಿದ್ದಾರೆ, ಅವರ ಬಗ್ಗೆ ಹಾಗೂ ಬೇರೆ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿ. ನಿಮ್ಮ ಪಕ್ಷದಲ್ಲಿರುವ ಲೋಪದೋಷಗಳ ಬಗ್ಗೆ ತಿಳಿದುಕೊಳ್ಳಿ" ಎಂದು ಬ್ರಿಜೇಶ್ ಕಾಳಪ್ಪ ಸಲಹೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications